ಸಾಂದರ್ಭಿಕ ಚಿತ್ರ 
ರಾಜ್ಯ

ಗ್ರಾಮ ಪಂಚಾಯಿತಿ ಚುನಾವಣೆ: ಹಳ್ಳಿಗಳಲ್ಲಿ ಏರಿದೆ ಗುಂಡು, ತುಂಡಿನ ಗಮ್ಮತ್ತು!

ಗ್ರಾಮ ಪಂಚಾಯಿತಿ ಚುನಾವಣೆ ದಿನಕಳೆದಂತೆ ರಂಗೇರುತ್ತಿದ್ದು, ಮತದಾರರ ಮನಗೆಲ್ಲಲು ಸಾಕಷ್ಟು ಕಣದಲ್ಲಿರುವ ಅಭ್ಯರ್ಥಿಗಳು ಹಲವು ಕಸರತ್ತುಗಳನ್ನು ನಡೆಸುತ್ತಿದ್ದಾರೆ. 

ಬೆಳಗಾವಿ: ಗ್ರಾಮ ಪಂಚಾಯಿತಿ ಚುನಾವಣೆ ದಿನಕಳೆದಂತೆ ರಂಗೇರುತ್ತಿದ್ದು, ಮತದಾರರ ಮನಗೆಲ್ಲಲು ಸಾಕಷ್ಟು ಕಣದಲ್ಲಿರುವ ಅಭ್ಯರ್ಥಿಗಳು ಹಲವು ಕಸರತ್ತುಗಳನ್ನು ನಡೆಸುತ್ತಿದ್ದಾರೆ. 

ಕಾರ್ಯಕರ್ತರು, ಬೆಂಬಲಿಗರಿಗಾಗಿ ಪ್ರತೀನಿತ್ಯ ಅಭ್ಯರ್ಥಿಗಳು ತಮ್ಮ ತಮ್ಮ ಫಾರ್ಮ್ ಹೌಸ್ ಗಳಲ್ಲಿ ಗುಂಡು ಹಾಗೂ ತುಂಡುಗಳ ಪಾರ್ಟಿಗಳನ್ನು ಜೋರಾಗಿ ನಡೆಸುತ್ತಿದ್ದಾರೆ. 

ಈ ನಡುವೆ ಚುನಾವಣೆ ಹತ್ತಿರ ಬರುತ್ತಿರುವ ಹಿನ್ನೆಲೆಯಲ್ಲಿ ಮದ್ಯದ ಅಭಾವ ಎದುರಾಗುವ ಸಾಧ್ಯತೆಗಳಿದ್ದು, ಹೀಗಾಗಿ ಜನರು ಮುಂಚಿತವಾಗಿಯೇ ಮದ್ಯ ಖರೀದಿ ಮಾಡಲು ಆರಂಭಿಸಿದ್ದು, ಕಳೆದ 15 ದಿನಗಳಿಂದ ಮದ್ಯ ಮಾರಾಟ ಶೇ.125ರಷ್ಟು ಏರಿಕೆಯಾಗಿದೆ ಎಂದು ಅಧಇಕಾರಿಗಳು ಮಾಹಿತಿ ನೀಡಿದ್ದಾರೆ. 

ಅಬಕಾರಿ ಇಲಾಖೆಯ ಅಂಕಿಅಂಶಗಳ ಪ್ರಕಾರ, ಡಿಸೆಂಬರ್ 1 ರಿಂದ 14 ರ ಅವಧಿಯ ಚುನಾವಣೆ ಘೋಷಣೆಯ ನಂತರ ಜಿಲ್ಲೆಯಲ್ಲಿ 67,542 ಮದ್ಯ ಮತ್ತು 21,560 ಬಿಯರ್ ಪೆಟ್ಟಿಗೆಗಳು ಮಾರಾಟವಾಗಿವೆ ಎಂದು ತಿಳಿದುಬಂದಿದೆ. 

ಕಳೆದ ವರ್ಷ ಇದೇ ಅವಧಿಯಲ್ಲಿ 54,106 ಬಾಕ್ಸ್ ಮದ್ಯ ಮತ್ತು 18,363 ಬಿಯರ್ ಪೆಟ್ಟಿಗೆಗಳು ಮಾರಾಟವಾಗಿದ್ದವು. 

ಇದಲ್ಲದೆ, ಮಹಾರಾಷ್ಟ್ರ ಮತ್ತು ಗೋವಾ ಗಡಿಗಳಿಗೆ ಸಮೀಪವಿರುವ ಹಳ್ಳಿಗಳಲ್ಲಿ ಕೆಲವು ಅಭ್ಯರ್ಥಿಗಳು ಗೋವಾ ಮದ್ಯವನ್ನು ಅಕ್ರಮವಾಗಿ ಸಾಗಿಸಿಕೊಳ್ಳುತ್ತಿದ್ದಾರೆ. ಇಲ್ಲಿನ ಮದ್ಯಕ್ಕಿಂತಲೂ ಗೋವಾದ ಮದ್ಯ ಅಗ್ಗ ದರವಾಗಿರುವುದಿಂದ ಅಲ್ಲಿಂದ ಮದ್ಯವನ್ನು ಅಕ್ರಮವಾಗಿ ಸಾಗಿಸಿಕೊಳ್ಳಲಾಗುತ್ತಿದೆ ಎಂದು ತಿಳಿದುಬಂದಿದೆ. 

ಇನ್ನು ಕುರಿ ಮತ್ತು ಮೇಕೆಗಳ ಬೆಲೆ ಕೂಡ ದುಬಾರಿಯಾಗಿದೆ, ಈ ಹಿಂದೆ 15 ರಿಂದ 18 ಕೆಜಿ ತೂಕದ ಕುರಿಗಳನ್ನು ರೂ. 6,000 ರಿಂದ 8,000ಕ್ಕೆ ಮಾರಾಟ ಮಾಡಲಾಗುತ್ತಿತ್ತು. ಆದರೆ, ಇದೀಗ ಇವುಗಳ ಬೆಲೆ ರೂ.8 ಸಾವಿರದಿಂದ 12 ಸಾವಿರಕ್ಕೆ ಏರಿಕೆಯಾಗಿದೆ. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಭಾರತದ ನೆಲದಲ್ಲೇ ಸ್ತ್ರೀದ್ವೇಷ ಪ್ರದರ್ಶಿಸಿದ ತಾಲೀಬಾನ್ ವಿದೇಶಾಂಗ ಸಚಿವ!; ಸುದ್ದಿಗೋಷ್ಠಿಗೆ ಮಹಿಳೆಯರಿಗಿಲ್ಲ ಪ್ರವೇಶ; ಭುಗಿಲೆದ್ದ ಅಸಮಾಧಾನ!

'ನನ್ನ ಪ್ರಶಸ್ತಿ ಟ್ರಂಪ್‌ಗೆ ಸಮರ್ಪಿತ...' Noble ಶಾಂತಿ ಪ್ರಶಸ್ತಿ ಗೆದ್ದ ಬೆನ್ನಲ್ಲೇ ಮಾರಿಯಾ ಶಾಕಿಂಗ್ ಹೇಳಿಕೆ!

ಭಾರತದ ಹಿತಾಸಕ್ತಿಗಳ ವಿರುದ್ಧ ಅಫ್ಘಾನಿಸ್ತಾನ ನೆಲ ಬಳಕೆಯಾಗಲ್ಲ, ನೀವು ಆಟ ಆಡಬೇಡಿ- ಪಾಕಿಸ್ತಾನಕ್ಕೆ ಅಫ್ಘಾನ್ ವಿದೇಶಾಂಗ ಸಚಿವರ ನೇರ ಎಚ್ಚರಿಕೆ!

ಚಿಕ್ಕಬಳ್ಳಾಪುರ: 'Miss U Chinna'; ಅಪ್ರಾಪ್ತ ಪ್ರೇಯಸಿಯ ದುಪ್ಪಟ್ಟದಿಂದಲೇ ಯುವಕ ನೇಣಿಗೆ ಶರಣು; Instagram Post Viral

ಬೆಂಗಳೂರಿನಲ್ಲೊಂದು ಹೃದಯ ವಿದ್ರಾವಕ ಘಟನೆ: ಇಬ್ಬರು ಮಕ್ಕಳನ್ನು ಕೊಂದು ತಾಯಿ ಆತ್ಮಹತ್ಯೆ

SCROLL FOR NEXT