ಕುರುಬೂರು ಶಾಂತಕುಮಾರ್x 
ರಾಜ್ಯ

ಕೇಂದ್ರದ ಪ್ರೋತ್ಸಾಹಧನ ಸಕ್ಕರೆ ಕಾರ್ಖಾನೆಗಳಿಗೆ ಸಿಹಿ ಸುದ್ದಿ, ಕಬ್ಬು ಬೆಳೆಗಾರರಿಗಲ್ಲ: ಕುರುಬೂರು ಶಾಂತಕುಮಾರ್

ಕೇಂದ್ರ ಸರ್ಕಾರ ಕಬ್ಬು ವಲಯಕ್ಕೆ 3,500 ಕೋಟಿ ರೂ ಪ್ರೋತ್ಸಾಹಧನ ಬಿಡುಗಡೆ ಮಾಡಿರುವುದು ಸಕ್ಕರೆ ಕಾರ್ಖಾನೆಗಳಿಗೆ ಸಿಹಿ ಸುದ್ದಿಯಾಗಿದ್ದು, ಇದು ಕಬ್ಬು ಬೆಳೆಗಾರರಿಗಲ್ಲ

ಬೆಂಗಳೂರು: ಕೇಂದ್ರ ಸರ್ಕಾರ ಕಬ್ಬು ವಲಯಕ್ಕೆ 3,500 ಕೋಟಿ ರೂ ಪ್ರೋತ್ಸಾಹಧನ ಬಿಡುಗಡೆ ಮಾಡಿರುವುದು ಸಕ್ಕರೆ ಕಾರ್ಖಾನೆಗಳಿಗೆ ಸಿಹಿ ಸುದ್ದಿಯಾಗಿದ್ದು, ಇದು ಕಬ್ಬು ಬೆಳೆಗಾರರಿಗಲ್ಲ ಎಂದು ಕಬ್ಬು ಬೆಳೆಗಾರರ ಸಂಘದ ಅಧ್ಯಕ್ಷ ಕುರುಬೂರು ಶಾಂತಕುಮಾರ್ ಅವರು ಹೇಳಿದ್ದಾರೆ.

ಕೇಂದ್ರ ಸಂಪುಟ ಸಮಿತಿ ಸಭೆಯಲ್ಲಿ ಸಕ್ಕರೆ ರಫ್ತು ಮಾಡುವ ಸಕ್ಕರೆ ಕಾರ್ಖಾನೆ ಮಾಲೀಕರಿಗೆ ಪ್ರೋತ್ಸಾಹಧನ ನೀಡಲು 3500 ಕೋಟಿ ರೂ. ಬಿಡುಗಡೆ ಮಾಡಿರುವುದು ಸಕ್ಕರೆ ಕಾರ್ಖಾನೆಗಳಿಗೆ ಸಿಹಿ ಸುದ್ದಿಯಾಗಿದೆ, ಇದರಿಂದ ಸಕ್ಕರೆ ಕಾರ್ಖಾನೆಗಳು ಕಬ್ಬಿನ ರೈತರ ಬಾಕಿ ಹಣ ತೀರಿಸಲು ನೆರವಾಗುತ್ತದೆ, ಈ ಹಣದಲ್ಲಿ ಹೆಚ್ಚುಪಾಲು ಉತ್ತರ ಪ್ರದೇಶಕ್ಕೆ ಬಿಡುಗಡೆಯಾಗುತ್ತದೆ ಎಂದಿದ್ದಾರೆ.

ಈ ಕುರಿತು ಪತ್ರಿಕಾ ಪ್ರಕಟಣೆ ಬಿಡುಗಡೆ ಮಾಡಿರುವ ಕುರುಬೂರು ಶಾಂತಕುಮಾರ್ ಅವರು, ರಾಜ್ಯದಲ್ಲಿ ಸಕ್ಕರೆ ಕಾರ್ಖಾನೆಗಳು ರಪ್ತು ಮಾಡುವ ಸಕ್ಕರೆಗೆ ಪ್ರೋತ್ಸಾಹಧನ ಸಿಗುತ್ತದೆ. ಬೆಳಗಾರರಿಗೆ ಅಲ್ಲ ಎಂದು ತಿಳಿಸಿದ್ದಾರೆ.

ಕಬ್ಬು ಬೆಳೆಗಾರರಿಗೆ 3,500 ಕೋಟಿ ರೂ. ಸಹಾಯಧನ ನೀಡುವ ಪ್ರಸ್ತಾವನೆಗೆ ಪ್ರಧಾನಿ ನರೇಂದ್ರ ಮೋದಿ ನೇತೃತ್ವದಲ್ಲಿ ನಡೆದ ಆರ್ಥಿಕ ವ್ಯವಹಾರಗಳ ಕುರಿತ ಸಂಪುಟ ಸಮಿತಿ ಸಭೆ ಇಂದು ಅನುಮೋದನೆ ನೀಡಿದೆ. ಇದರಿಂದ ರೈತರು ತಮ್ಮ ಕಬ್ಬನ್ನು ನೇರವಾಗಿ ಸಕ್ಕರೆ ಕಾರ್ಖಾನೆಗಳಿಗೆ ಮಾರಾಟ ಮಾಡುತ್ತಾರೆ. ಆದರೆ ಸಕ್ಕರೆ ಕಾರ್ಖಾನೆಗಳ ಮಾಲೀಕರು ಸಕ್ಕರೆ ದಾಸ್ತಾನು ಹೆಚ್ಚಿರುವ ಕಾರಣ, ಹಣ ಪಾವತಿ ಮಾಡದೇ ಇರುವುದರಿಂದ ರೈತರಿಗೆ ಬಾಕಿ ಹಣ ಬರುತ್ತಿಲ್ಲ. ಈ ಸಮಸ್ಯೆಯನ್ನು ನಿವಾರಿಸಲು ಕೇಂದ್ರ ಸರ್ಕಾರ ಹೆಚ್ಚುವರಿ ಸಕ್ಕರೆ ದಾಸ್ತಾನನ್ನು ಖಾಲಿ ಮಾಡಲು ನೆರವು ನೀಡುತ್ತಿದೆ. ಇದರಿಂದಾಗಿ ಕಬ್ಬು ಬೆಳೆಗಾರರಿಗೆ ಬರಬೇಕಾದ ಬಾಕಿ ಪಡೆಯುವುದು ಸುಲಭವಾಗಲಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಬ್ಯಾಂಕ್‌ಗೆ ನಕಲಿ ಗ್ಯಾರಂಟಿ: ರಿಲಯನ್ಸ್‌ ಪವರ್‌ನ ಮುಖ್ಯ ಹಣಕಾಸು ಅಧಿಕಾರಿ ಅಶೋಕ್ ಪಾಲ್ ಬಂಧನ

CM ಆಗುವ ಕಾಲ ಹತ್ತಿರ ಬಂದಿದೆ ಎಂದು ನಾನು ಹೇಳಿಲ್ಲ: ಸುದ್ದಿ ತಿರುಚಿ ಪ್ರಸಾರ ಮಾಡಿದರೆ ಮಾನನಷ್ಟ ಮೊಕದ್ದಮೆ ಅನಿವಾರ್ಯ; ಡಿ ಕೆ ಶಿವಕುಮಾರ್

2nd test, Day 2: 2ನೇ ದಿನದಾಟದ ಆರಂಭದಲ್ಲೇ ಭಾರತಕ್ಕೆ ಆಘಾತ, ಭೋಜನ ವಿರಾಮದ ವೇಳೆಗೆ 427/4

ಸಮಸ್ತ ಜನರಿಗೆ ಸುಗಮ ಆಡಳಿತ, ಶುದ್ಧ ನೀರಿನ ಪೂರೈಕೆ: ಸ್ವಚ್ಚತೆ- ಸಂಚಾರ ವ್ಯವಸ್ಥೆಗೆ ಸಿಎಂ ಸಿದ್ದರಾಮಯ್ಯ ಕಟ್ಟಪ್ಪಣೆ

ಸಿದ್ದರಾಮಯ್ಯ ಮೇಲೆ ತೂಗುಗತ್ತಿ: ಅಧಿಕಾರದಲ್ಲಿ ಉಳಿಯಲು ಸಂಪುಟ ಪುನಾರಚನೆ ಕಸರತ್ತು; ಬಿಹಾರ-ಕೇರಳ ಚುನಾವಣೆಯತ್ತ ಡಿಕೆಶಿ ಚಿತ್ತ!

SCROLL FOR NEXT