ಡಾ.ಅಜಯ್ ಸಿಂಗ್ 
ರಾಜ್ಯ

ಶೀಘ್ರವೇ ತೊಗರಿ ಖರೀದಿ ಕೇಂದ್ರ ತೆರೆಯಿರಿ: ಸರ್ಕಾರಕ್ಕೆ ಅಜಯ್ ಸಿಂಗ್ ಆಗ್ರಹ

ಅಳಿದುಳಿದ ತೊಗರಿ ಬೆಳೆಯಿಂದ ಮಾತ್ರ ರೈತರು ತಮ್ಮ ಜೀವನವನ್ನು ಕಟ್ಟಿಕೊಳ್ಳಬೇಕಿದೆ. ಆದ್ದರಿಂದ ಪ್ರತಿ ಕ್ವಿಂಟಾಲ್‌ಗೆ 1500 ರು. ಪ್ರೋತ್ಸಾಹಧನ ನಿಗದಿ ಮಾಡಬೇಕು. ತಕ್ಷಣ ಖರೀದಿ ಪ್ರಕ್ರಿಯೆ ಆರಂಭಿಸಬೇಕು ಎಂದು ಅಜಯ್ ಸಿಂಗ್ ಒತ್ತಾಯಿಸಿದರು

ಕಲಬುರಗಿ: ರಾಜ್ಯ ಸರ್ಕಾರ ಶೀಘ್ರವೇ ತೊಗರಿ ಬೇಳೆ ಖರೀದಿ ಕೇಂದ್ರ ಸ್ಥಾಪಿಸಬೇಕು ಜೊತೆಗೆ ಕ್ವಿಂಟಾಲ್ ತೊಗರಿಗೆ ಕೇಂದ್ರದ ಬೆಂಬಲ ಬೆಲೆ 6 ಸಾ.ರೂ ಸೇರಿದಂತೆ ರಾಜ್ಯ ಸರ್ಕಾರ ತನ್ನ ಪಾಲಿನ 1,500 ರೂ. ಪ್ರೋತ್ಸಾಹ ಧನ ಸೇರಿಸಿ 7,500 ರೂ. ಬೆಲೆ ನಿಗದಿಪಡಿಸಿ ಖರೀದಿಗೆ ಮುಂದಾಗಬೇಕು ಎಂದು ವಿದಾನಸಭೆ ವಿರೋಧ ಪಕ್ಷದ ಮುಖ್ಯ ಸಚೇತಕ ಹಾಗೂ ಜೇವರ್ಗಿ ಶಾಸಕ ಡಾ. ಅಜಯ್ ಸಿಂಗ್ ಆಗ್ರಹಿಸಿದ್ದಾರೆ.

ಕಲಬುರಗಿಯಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು ಪ್ರಸಕ್ತ ಹಂಗಾಮಿನಲ್ಲಿ ಮಳೆಯಿಂದಾಗಿ ಅತಿವೃಷ್ಟಿ ಸಂಭವಿಸಿದೆ. ಅಳಿದುಳಿದ ತೊಗರಿ ಬೆಳೆಯಿಂದ ಮಾತ್ರ ರೈತರು ತಮ್ಮ ಜೀವನವನ್ನು ಕಟ್ಟಿಕೊಳ್ಳಬೇಕಿದೆ. ಆದ್ದರಿಂದ ಪ್ರತಿ ಕ್ವಿಂಟಾಲ್‌ಗೆ 1500 ರು. ಪ್ರೋತ್ಸಾಹಧನ ನಿಗದಿ ಮಾಡಬೇಕು. ತಕ್ಷಣ ಖರೀದಿ ಪ್ರಕ್ರಿಯೆ ಆರಂಭಿಸಬೇಕು ಎಂದು ಅಜಯ್ ಸಿಂಗ್ ಒತ್ತಾಯಿಸಿದರು.

ತೊಗರಿ ರೈತರಿಗೆ ಪ್ರೋತ್ಸಾಹ ಧನ ನೀಡುವ ವಿಚಾರದಲ್ಲಿ ರಾಜ್ಯ ಸರ್ಕಾರ ಈಗಲೇ ತನ್ನ ನಿಲುವು ಬಹಿರಂಗಪಡಿಸಲಿ. ರೈತರ ಪರ ಎಂದು ಹೇಳಿಕೊಳ್ಳುವ ಸಿಎಂ ಯಡಿಯೂರಪ್ಪನವರು ಎಂಎಸ್‍ಪಿ, ಪ್ರೋತ್ಸಾಹಕರ ಬೆಲೆ ಸೇರಿದಂತೆ ಕ್ವಿಂಟಾಲ್‍ಗೆ 7, 500 ರು ನಿಗದಿಪಡಿಸಿ ರೈತರಿಂದ ತೊಗರಿ ಖರೀದಿಗೆ ಮುಂದಾಗಲಿ ಎಂದು ಆಗ್ರಹಿಸಿದರು.

ಈ ವಿಚಾರದಲ್ಲಿ ಸರ್ಕಾರ ವಿನಾಕಾರಣ ವಿಳಂಬ ಮಾಡುವುದು ಸರಿಯಲ್ಲ. ಸಂಕಷ್ಟದಿಂದ ಮೊದಲೇ ರೈತರು ಕಣ್ಣೀರು ಹಾಕುತ್ತಿರುವಾಗ ಸರಕಾರ ತೊಗರಿ ಖರೀದಿಗೆ ಕ್ರಿಯಾ ಯೋಜನೆ ರೂಪಿಸಿ ಅಗತ್ಯ ಒಪ್ಪಿಗೆ, ಪರವಾನಿಗೆ ಎಲ್ಲವನ್ನು ಪಡೆದುಕೊಂಡು ಬೇಗ ತೊಗರಿ ಕಣಜದ ರೈತರ ಸಹಾಯಕ್ಕೆ ಧಾವಿಸಬೇಕು, ಇಲ್ಲದಿದ್ದರೇ ರಾಜ್ಯಾದ್ಯಂತ ಪ್ರತಿಭಟನೆ ನಡೆಸುವುದಾಗಿ ಎಚ್ಚರಿಕೆ ನೀಡಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಕಾವೇರಿ ನೀರು ಹಂಚಿಕೆ: ತಮಿಳುನಾಡು ಅರ್ಜಿಯನ್ನು ಸುಪ್ರೀಂನಲ್ಲಿ ಪ್ರಶ್ನಿಸಲು ಅಧಿಕಾರಿಗಳಿಗೆ ಸಚಿವ ರಾಮಲಿಂಗಾ ರೆಡ್ಡಿ ನಿರ್ದೇಶನ

ಹೈಕೋರ್ಟ್‌ನಿಂದ ಜೀವಾವಧಿ ಶಿಕ್ಷೆಗೆ ತಡೆ: ವಿನಯ್ ಕುಲಕರ್ಣಿ ಶಾಸಕ ಸ್ಥಾನ ಅನರ್ಹತೆ ರದ್ದು!

ಸಂಪುಟ ವಿಸ್ತರಣೆಯಲ್ಲಿ ಬಿಗ್ ಟ್ವಿಸ್ಟ್: ಸಚಿವರಾಗಿ ಪ್ರಮಾಣವಚನ ಸ್ವೀಕರಿಸಿದ 19 ಶಾಸಕರು; ಕೊನೆ ಕ್ಷಣದಲ್ಲಿ ಒಬ್ಬರಿಗೆ ಕೊಕ್!

ಭಾವೋದ್ವೇಗಕ್ಕೆ ಒಳಗಾಗಿ ರಾಜೀನಾಮೆ ನೀಡಬೇಡಿ: ಪಕ್ಷ ನಿಮ್ಮ ಸೇವೆ ಮರೆಯಲ್ಲ; ಅಸಮಾಧಾನಿತ ಶಾಸಕರಿಗೆ ಬಿ.ಕೆ ಹರಿಪ್ರಸಾದ್ ಮನವಿ

ಕಾಂಗ್ರೆಸ್‌ ಲೆಟರ್‌ಹೆಡ್‌ನಲ್ಲಿ ಸ್ಪೀಕರ್‌ ಹೆಸರು; ಮತ್ತೊಂದು ಕೆಟ್ಟ ಸಂಪ್ರದಾಯಕ್ಕೆ ನಾಂದಿ: ಸುರೇಶ್‌ ಕುಮಾರ್‌ ಕಿಡಿ