ಸಂಗ್ರಹ ಚಿತ್ರ 
ರಾಜ್ಯ

ಸ್ನೇಹಿತೆ ಮೇಲೆ ಸ್ನೇಹಿತನಿಂದಲೇ ಅತ್ಯಾಚಾರ, ಕೊಲೆ: ಆರೋಪಿ ಬಂಧನ

ಖಾಸಗಿ ಕಾಲೇಜನಲ್ಲಿ ಫಾರ್ಮಸಿ ವಿದ್ಯಾರ್ಥಿಯೊಬ್ಬ ತನ್ನ ಸ್ನೇಹಿತೆ ಮೇಲೆ ಅತ್ಯಾಚಾರ ಎಸಗಿ, ಆನಂತರ ಆಕೆಯನ್ನು ಹತ್ಯೆ ಮಾಡಿರುವ ಘಟನೆಯೊಂದು ಬ್ಯಾಡರಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. 

ಬೆಂಗಳೂರು: ಖಾಸಗಿ ಕಾಲೇಜನಲ್ಲಿ ಫಾರ್ಮಸಿ ವಿದ್ಯಾರ್ಥಿಯೊಬ್ಬ ತನ್ನ ಸ್ನೇಹಿತೆ ಮೇಲೆ ಅತ್ಯಾಚಾರ ಎಸಗಿ, ಆನಂತರ ಆಕೆಯನ್ನು ಹತ್ಯೆ ಮಾಡಿರುವ ಘಟನೆಯೊಂದು ಬ್ಯಾಡರಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. 

ಅಸ್ಸಾಂ ಮೂಲಕ  20 ವರ್ಷದ ನರ್ಸಿಂಗ್ ವಿದ್ಯಾರ್ಥಿನಿ ಹತ್ಯೆಗೀಡಾದ ದುರ್ದೈವಿಯಾಗಿದ್ದಾಳೆ. ಘಟನೆ ಸಂಬಂಧ 21 ವರ್ಷದ ಆರೋಪಿಯನ್ನು ಪೊಲೀಸರು ಬಂಧನಕ್ಕೊಳಪಡಿಸಿದ್ದಾರೆ. 

ಮೃತ ಯುವತಿ ಹಾಗೂ ಆರೋಪಿ ರೆಹಮಾನ್ ಆತ್ಮೀಯ ಸ್ನೇಹಿತರಾಗಿದ್ದು, ಆ ಎರಡೂ ಕುಟುಂಬಗಳಿಗೆ ಆಪ್ತ ಒಡನಾಟವಿದೆ. ಒಂದೂವರೆ ವರ್ಷದಿಂದ ನಗರದ ಖಾಸಗಿ ಕಾಲೇಜಿನಲ್ಲಿ ರೆಹಮಾನ್ ಮೂಲಕ ಮೃತ ಯುವತಿ ಕೂಡ ಬೆಂಗಳೂರಿನಲ್ಲಿ ನರ್ಸಿಂಗ್ ಓದಲು ಬಂದಿದ್ದಳು. ಅಸ್ಸಾಂನಿದ ಮಂಗಳವಾರವಷ್ಟೇ ಬಂದು ಕಾಲೇಜಿಗೆ ಆಕೆ ದಾಖಲಾಗಿದ್ದಳು. ಕಾಲೇಜಿಗೆ ಸೇರುವಾಗ ರೆಹಮಾನ್ ಸಹಾಯ ಮಾಡಿದ್ದ ಎಂದು ಪೊಲೀಸರು ಹೇಳಿದ್ದಾರೆ. 

ಕಾಲೇಜಿನ ಹಾಸ್ಟೆಲ್ ನಲ್ಲಿ ಯುವತಿ ವಾಸ್ತವ್ಯ ಹೂಡಿದ್ದಳು. ಕೆಲವು ವಸ್ತುಗಳ ಖರೀದಿ ಸಲುವಾಗಿ ಗೆಳೆಯ ರೆಹಮಾನ್'ನನ್ನು ಶಾಪಿಂಗ್'ಗೆ ಕರೆದುಕೊಂಡು ಹೋಗಲು ಆಕೆ, ಬುಧವಾರ ಬೆಳಿಗ್ಗೆ ಬ್ಯಾಡರಹಳ್ಳಿ ಸಮೀಪವಿರುವ ರೆಹಮಾನ್ ಕೊಠಡಿಗೆ ಬಂದಿದ್ದಳು. ಆ ವೇಳೆ ಸ್ನೇಹಿತೆ ಮೇಲೆ ಅತ್ಯಾಚಾರ ಎಸಗಿ ಹತ್ಯೆ ಮಾಡಿದ್ದಾನೆಂದು ಹೇಳಲಾಗುತ್ತಿದೆ. 

ಈ ನಡುವೆ ಘಟನೆ ಸಂಬಂಧ ಆರೋಪಿ ಪೊಲೀಸರಿಗೆ ಹೇಳಿಕೆ ನೀಡಿದ್ದು, ಲೈಂಗಿಕ ಕ್ರಿಯೆಯಲ್ಲಿ ತೊಡಗಿದ್ದಾಗಲೇ ಸ್ನೇಹಿತ ಪ್ರಜ್ಞಾಹೀನಳಾದಳು. ಇದರಿಂದ ನನಗೆ ಭಯವಾಯಿತು. ಕೂಡಲೇ ನೆರೆಮನೆಯವರ ನೆರವು ಪಡೆದು ಆಕೆಯನ್ನು ಹತ್ತಿರದ ಆಸ್ಪತ್ರೆಗೆ ಕರೆದೊಯ್ಯಲಾಯಿತು. ಆದರೆ, ವೈದ್ಯರು ಆಸ್ಪತ್ರೆ ಸೇರುವ ಮುನ್ನವೇ ಮೃತಪಟ್ಟಿದ್ದಾಳೆಂದು ದೃಢಪಡಿಸಿದರು. ನಾನು ಕೊಲೆ ಮಾಡಿಲ್ಲ ಎಂದು ಹೇಳಿದ್ದಾನೆಂದು ತಿಳಿದುಬಂದಿದೆ. 

ಘಟನೆ ಸಂಬಂಧ ಅತ್ಯಾಚಾರ ಮತ್ತು ಕೊಲೆ ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ಮರಣೋತ್ತರ ಪರೀಕ್ಷೆಗಾಗಿ ಕಾಯುತ್ತಿದ್ದಾರೆಂದು ವರದಿಗಳು ತಿಳಿಸಿವೆ. 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಶಂಕಿತ ದಾಳಿಕೋರ 'ನರಕ ದೇಶ' ಆಫ್ಘಾನಿಸ್ತಾನದಿಂದ ಬಂದವನು, ಇದು ಭಯೋತ್ಪಾದಕ ಕೃತ್ಯ: ನ್ಯಾಷನಲ್ ಗಾರ್ಡ್ ಮೇಲೆ ದಾಳಿಗೆ Donald Trump ತೀವ್ರ ಖಂಡನೆ

ಇದು ಜೈಲಲ್ಲ, ಮದ್ಯದ ಫ್ಯಾಕ್ಟರಿ: ಕೈದಿಗಳಿಂದ ಮದ್ಯ ತಯಾರಿಕೆ? ಏನಾಗುತ್ತಿದೆ ಪರಪ್ಪನ ಅಗ್ರಹಾರ ಕಾರಾಗೃಹದಲ್ಲಿ?

CM ಕುರ್ಚಿ ಕಸರತ್ತು: ಸಮಸ್ಯೆಗೆ ಪರಿಹಾರ ಇದ್ದೇ ಇರುತ್ತದೆ, ರಾಹುಲ್-ಸೋನಿಯಾ ಜೊತೆ ಚರ್ಚಿಸಿ ಗೊಂದಲ ಬಗೆಹರಿಸುವೆ; AICC ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ

ಕೊಟ್ಟ ಮಾತು ಉಳಿಸಿಕೊಳ್ಳುವುದೇ ವಿಶ್ವದಲ್ಲಿರುವ ದೊಡ್ಡ ಶಕ್ತಿ: ಸಿದ್ದುಗೆ ಪರೋಕ್ಷ ಟಾಂಗ್ ಕೊಟ್ಟರೇ ಡಿಕೆಶಿ..?

ಮೊದಲು ಪರಮೇಶ್ವರ್ ಕೂಲಿ ಚುಕ್ತಾ ಮಾಡಲಿ: ನಂತರ ವಿಧಾನಸಭೆ ವಿಸರ್ಜಿಸಿ ಡಿಕೆಶಿ ನೇತೃತ್ವದಲ್ಲೇ ಚುನಾವಣೆಗೆ ಹೋಗೋಣ!

SCROLL FOR NEXT