ಡಾ ಆರ್ ಎನ್ ಶೆಟ್ಟಿ 
ರಾಜ್ಯ

ಉದ್ಯಮಿ, ಸಮಾಜಸೇವಕ, ಶಿಕ್ಷಣ ತಜ್ಞ ಡಾ. ಆರ್.ಎನ್. ಶೆಟ್ಟಿ ನಿಧನ, ಮುಖ್ಯಮಂತ್ರಿ ಯಡಿಯೂರಪ್ಪ ಸಂತಾಪ

ನಾಡಿನ ಖ್ಯಾತ ಹಿರಿಯ ಉದ್ಯಮಿ, ಶಿಕ್ಷಣ ತಜ್ಞ, ಸಮಾಜ ಸೇವಕ, ಆರ್ ಎನ್ ಎಸ್ ಗ್ರೂಪ್ ಸಂಸ್ಥಾಪಕ ಡಾ. ಆರ್ ಎನ್ ಶೆಟ್ಟಿ ಗುರುವಾರ ನಸುಕಿನ ಜಾವ ನಿಧನರಾಗಿದ್ದಾರೆ. ಅವರಿಗೆ 92 ವರ್ಷ ವಯಸ್ಸಾಗಿತ್ತು. 

ಬೆಂಗಳೂರು: ನಾಡಿನ ಖ್ಯಾತ ಹಿರಿಯ ಉದ್ಯಮಿ, ಶಿಕ್ಷಣ ತಜ್ಞ, ಸಮಾಜ ಸೇವಕ, ಆರ್ ಎನ್ ಎಸ್ ಗ್ರೂಪ್ ಸಂಸ್ಥಾಪಕ ಡಾ. ಆರ್ ಎನ್ ಶೆಟ್ಟಿ ಗುರುವಾರ ನಸುಕಿನ ಜಾವ ನಿಧನರಾಗಿದ್ದಾರೆ. ಅವರಿಗೆ 92 ವರ್ಷ ವಯಸ್ಸಾಗಿತ್ತು. 

ಆರ್. ಎನ್. ಶೆಟ್ಟಿ ಎಂದೇ ಜನಪ್ರಿಯರಾಗಿದ್ದ ಡಾ. ರಾಮ ನಾಗಪ್ಪ ಶೆಟ್ಟಿ ಅವರು ಉತ್ತರ ಕನ್ನಡ ಜಿಲ್ಲೆಯ ಭಟ್ಕಳ ತಾಲ್ಲೂಕಿನ ಮುರುಡೇಶ್ವರದಲ್ಲಿ 1928ರ ಆಗಸ್ಟ್ 15ರಂದು ಜನಿಸಿದ್ದರು. ಮುರುಡೇಶ್ವರ ದೇವಸ್ಥಾನದ ಆನುವಂಶಿಕ ಆಡಳಿತಾಧಿಕಾರಿಯಾಗಿ ಈ ಮುರುಡೇಶ್ವರವನ್ನು ಪ್ರಮುಖ ಕ್ಷೇತ್ರವನ್ನಾಗಿ ಪರಿವರ್ತಿಸಿದ ಕೀರ್ತಿ ಅವರದು. ಮುರುಡೇಶ್ವರದ ಸಮುದ್ರ ತೀರದಲ್ಲಿ 123 ಅಡಿ ಎತ್ತರದ ಶಿವನ ಪ್ರತಿಮೆಯನ್ನು ಸ್ಥಾಪಿಸಿದ್ದರು.

ಆರ್ ಎನ್ ಶೆಟ್ಟಿ ನಿಧನಕ್ಕೆ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಸೇರಿದಂತೆ ಹಲವರು ಸಂತಾಪ ಸೂಚಿಸಿದ್ದಾರೆ. ಕೃಷಿಕ ಮನೆತನದಲ್ಲಿ ಜನಿಸಿದ ಆರ್.ಎನ್. ಶೆಟ್ಟಿ ಅವರು ನಿರ್ಮಾಣ, ಮೂಲಸೌಕರ್ಯ ಅಭಿವೃದ್ಧಿ ಹಾಗೂ ಹೋಟೆಲ್ ಉದ್ಯಮ ಕ್ಷೇತ್ರಗಳಲ್ಲಿ ತಮ್ಮದೇ ಛಾಪು ಮೂಡಿಸಿದ್ದರು ಎಂದು ಮುಖ್ಯಮಂತ್ರಿ ಕಚೇರಿ ಟ್ವಿಟ್ಟರ್ ಖಾತೆಯಲ್ಲಿ ಸ್ಮರಿಸಿಕೊಂಡಿದ್ದಾರೆ. 

ಪ್ರಾಥಮಿಕ ಶಿಕ್ಷಣವನ್ನು ಸಹ ಔಪಚಾರಿಕವಾಗಿ ಮುಗಿಸದ ಆರ್ ಎನ್ ಶೆಟ್ಟಿಯವರು ಉದ್ಯಮ, ಶಿಕ್ಷಣ, ಸಮಾಜಸೇವೆ ಕ್ಷೇತ್ರಗಳಲ್ಲಿ ಮಾಡಿದ ಕೆಲಸ, ಸಾಧನೆ ನಗಣ್ಯ. ಆರ್ ಎನ್ ಶೆಟ್ಟಿ ಸಾಮ್ರಾಜ್ಯ ಎಂದೇ ಜನಪ್ರಿಯವಾಗುವ ರೀತಿಯಲ್ಲಿ ಅವರು ಅನೇಕ ಕ್ಷೇತ್ರಗಳಿಗೆ ಕೊಡುಗೆ ನೀಡಿದ್ದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

'ಸದನದಲ್ಲಿ ಹುಲಿ, ಹೈಕಮಾಂಡ್‌ ಮುಂದೆ ಇಲಿ'.. 'ಅಧಿಕಾರದಲ್ಲಿ ಉಳಿಯಲು DK Shivakumar ಕ್ಷಮೆಯಾಚನೆ': BJP-JDS ಟೀಕಾ ಪ್ರಹಾರ!

RSS ಅನ್ನು ಯಾರೂ "ಸಮರ್ಥಿಸಿಕೊಳ್ಳಬಾರದು": ಡಿಕೆಶಿ ಕ್ಷಮೆಯಾಚನೆ ಸ್ವಾಗತಿಸಿದ ಬಿ.ಕೆ ಹರಿಪ್ರಸಾದ್

ಸುಪ್ರೀಂ ಕೋರ್ಟ್‌ಗೆ ನ್ಯಾ. ಪಾಂಚೋಲಿ ಹೆಸರು ಶಿಫಾರಸು: ನ್ಯಾ. ಬಿ. ವಿ. ನಾಗರತ್ನ ತೀವ್ರ ಅಸಮಾಧಾನ!

ಶಿಬು ಸೊರೇನ್ 'ರಾಜ್ಯದ ಪಿತಾಮಹ' ಎಂದು ಘೋಷಿಸುವಂತೆ ಜೆಎಂಎಂ ಆಗ್ರಹ

SCROLL FOR NEXT