ಸಾಂದರ್ಭಿಕ ಚಿತ್ರ 
ರಾಜ್ಯ

ಜನವರಿಯಲ್ಲಿ ಸರ್ಕಾರದ ಸಪ್ತಪದಿ ಯೋಜನೆ ಜಾರಿ

ರಾಜ್ಯ ಸರ್ಕಾರ ಮುಜರಾಯಿ ಇಲಾಖೆ ವತಿಯಿಂದ ನಡೆಸಲು ತೀರ್ಮಾನಿಸಿರುವ ಸಪ್ತಪದಿ ಯೋಜನೆಯನ್ನು ಹೊಸ ವರ್ಷದಲ್ಲಿ ಆರಂಭಿಸಲು ನಿರ್ಧರಿಸಲಾಗಿದೆ.

ಬೆಂಗಳೂರು: ರಾಜ್ಯ ಸರ್ಕಾರ ಮುಜರಾಯಿ ಇಲಾಖೆ ವತಿಯಿಂದ ನಡೆಸಲು ತೀರ್ಮಾನಿಸಿರುವ ಸಪ್ತಪದಿ ಯೋಜನೆಯನ್ನು ಹೊಸ ವರ್ಷದಲ್ಲಿ ಆರಂಭಿಸಲು ನಿರ್ಧರಿಸಲಾಗಿದೆ.

ಜನವರಿ 15, 20 ಹಾಗೂ ಫೆಬ್ರವರಿ 17 ಮತ್ತು 25 ರಂದು ಸಾಮೂಹಿಕ ಸಪ್ತಪದಿ ವಿವಾಹ ಕಾರ್ಯಕ್ರಮ ಏರ್ಪಡಿಸಲು ಸರ್ಕಾರ ನಿರ್ಧರಿಸಿದೆ.

2019-20ನೇ ಸಾಲಿನಲ್ಲಿ ರಾಜ್ಯದ 100 ಮುಜರಾಯಿ ದೇವಸ್ಥಾನಗಳಲ್ಲಿ ಸರ್ಕಾರದ ವತಿಯಿಂದ ಸಪ್ತಪದಿ ಮದುವೆ ಕಾರ್ಯಕ್ರಮ ಹಾಕಿಕೊಳ್ಳಲು ನಿರ್ಧರಿಸಿತ್ತು. ಆದರೆ ಕೊರೋನಾ ಸಾಂಕ್ರಾಮಿಕ ರೋಗದ ಹಿನ್ನೆಲೆಯಲ್ಲಿ ಮುಂದೂಡಲಾಗಿದ್ದ ಸಪ್ತಪದಿ ಯೋಜನೆಗೆ ಮತ್ತೆ ಚಾಲನೆ ನೀಡಲು ನಿರ್ಧರಿಸಲಾಗಿದೆ.

ಸಪ್ತಪದಿ ಸಾಮೂಹಿಕ ವಿವಾಹ ನಡೆಸಲು ಸರ್ಕಾರ ಈಗಾಗಲೇ ನೀಡಿರುವ ದಿನಾಂಕಗಳಂದು ಕಾರ್ಯಕ್ರಮ ನೆರವೇರಿಸಲು ಸಾಧ್ಯವಾಗದಿದ್ದಲ್ಲಿ, ಧಾರ್ಮಿಕ ಪರಿಷತ್ತಿನ ಆಗಮ ಪಂಡಿತರು ಇತರ ಅನುಕೂಲಕರ ದಿನಾಂಕ ಬಯಸಿದಲ್ಲಿ ಜಿಲ್ಲಾಡಳಿತದಿಂದ ಸೂಕ್ತ ದಿನಾಂಕ ನಿಗದಿಪಡಿಸಿಕೊಂಡು ಕಾರ್ಯಕ್ರಮ ರೂಪಿಸಲು ಸೂಚಿಸಲಾಗಿದೆ.

ಪ್ರತಿ ತಿಂಗಳು 1ನೇ ತಾರಿಖಿನಿಂದ ತಿಂಗಳ ಕೊನೆಯವರೆಗೂ ನೋಂದಣಿ ಮಾಡಿಕೊಂಡವರನ್ನು ಮುಂದಿನ ತಿಂಗಳ ಮುಹೂರ್ತ ದಿನಾಂಕಗಳಲ್ಲಿ ಯಾವುದಾದರೂ ದಿನಾಂಕದಂದು ಸಾಮೂಹಿಕ ವಿವಾಹ ನಡೆಸುವಂತೆ ಸೂಚಿಸಲಾಗಿದೆ.

ಸಪ್ತಪದಿ ಯೋಜನೆಯಡಿ ಬಡ ವಧು ವರರಿಗೆ ಸರ್ಕಾರದಿಂದ ಉಚಿತ ವಿವಾಹ ಭಾಗ್ಯ ನೀಡಲಾಗುತ್ತಿದ್ದು, ಕಳೆದ ಏಪ್ರಿಲ್ 26 ರಂದು ಸಪ್ತಪದಿ ಯೋಜನೆಯಡಿ‌ 1.5 ಸಾವಿರ ವಧು ವರರು ವಿವಾಹಕ್ಕೆ ನೋಂದಣಿ ಮಾಡಿಕೊಂಡಿದ್ದರು. ಆದರೆ ಕೊರೋನಾದಿಂದ ಸಪ್ತಪದಿ ಯೋಜನೆ ಮುಂದೂಡಿಕೆಯಾಗಿತ್ತು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

SCROLL FOR NEXT