ಪ್ರಭು ಚೌಹಾಣ್ 
ರಾಜ್ಯ

ದೆಹಲಿಯಲ್ಲಿ ಪ್ರತಿಭಟನೆ ನಡೆಸುತ್ತಿರುವವರು ರೈತರಲ್ಲ, ಕಾಂಗ್ರೆಸ್ ಕಾರ್ಯಕರ್ತರು: ಪ್ರಭು ಚವಾಣ್

ದೆಹಲಿ ಹೊರವಲಯದಲ್ಲಿ ನಡೆಯುತ್ತಿರುವ ಹೋರಾಟದಲ್ಲಿ ಪಾಲ್ಗೊಂಡವರು ರೈತರಲ್ಲ, ಬದಲಾಗಿ ಅವರು ಕಾಂಗ್ರೆಸ್‌ ಕಾರ್ಯಕರ್ತರು, ಕಾಂಗ್ರೆಸ್‌ನವರು, ಇನ್ನಿತರ ಪ್ರತಿಪಕ್ಷದವರು ರೈತರನ್ನು ಎತ್ತಿಕಟ್ಟಿ ಸರ್ಕಾರದ ವಿರುದ್ಧ ಪ್ರತಿಭಟನೆ ನಡೆಸುತ್ತಿದ್ದಾರೆ

ಯಾದಗಿರಿ: ದೆಹಲಿ ಹೊರವಲಯದಲ್ಲಿ ನಡೆಯುತ್ತಿರುವ ಹೋರಾಟದಲ್ಲಿ ಪಾಲ್ಗೊಂಡವರು ರೈತರಲ್ಲ, ಬದಲಾಗಿ ಅವರು ಕಾಂಗ್ರೆಸ್‌ ಕಾರ್ಯಕರ್ತರು, ಕಾಂಗ್ರೆಸ್‌ನವರು, ಇನ್ನಿತರ ಪ್ರತಿಪಕ್ಷದವರು ರೈತರನ್ನು ಎತ್ತಿಕಟ್ಟಿ ಸರ್ಕಾರದ ವಿರುದ್ಧ ಪ್ರತಿಭಟನೆ ನಡೆಸುತ್ತಿದ್ದಾರೆ ಎಂದು ಸಚಿವ ಪ್ರಭು ಚವಾಣ್ ಆರೋಪಿಸಿದ್ದಾರೆ.

ಯಾದಗಿರಿಯಲ್ಲಿ ಮಾತನಾಡಿದ ಅವರು ದೆಹಲಿಯಲ್ಲಿ ಹೋರಾಟ ಮಾಡುವವರು ರೈತರಾಗಿದ್ದರೆ ಹೊಲಗಳಲ್ಲಿ ಈಗ ಕೆಲಸ ಮಾಡುತ್ತಿದ್ದರು. ಆದರೆ, ಅಲ್ಲಿ ಕಾಂಗ್ರೆಸ್‌ ಕಾರ್ಯಕರ್ತರು ಇರುವುದರಿಂದ ಅಲ್ಲಿರುವವರು ರೈತರಲ್ಲ. ಹಸಿರು ಶಾಲು ಹಾಕಿಕೊಂಡವರೆಲ್ಲ ರೈತರಲ್ಲ’ ಎಂದು ಹೇಳಿದರು. ‌‘ಪ್ರಧಾನಿ ನರೇಂದ್ರ ಮೋದಿಯವರು ದೇಶದ ಜನರಿಗಾಗಿ ಉತ್ತಮ
ಕೃಷಿ ಕಾಯ್ದೆಗಳನ್ನು ಜಾರಿಗೆ ತಂದಿದ್ದಾರೆ. ಇವುಗಳ ಬಗ್ಗೆ ಸಚಿವರೊಂದಿಗೆ ಮಾತುಕತೆಯಾಡುವುದು ಬಿಟ್ಟು ಪ್ರತಿಭಟನೆಯಲ್ಲಿ ತೊಡಗಿಸಿಕೊಂಡಿದ್ದಾರೆ ಎಂದರು.

ಪರಿಷತ್‌ನಲ್ಲಿ ಗದ್ದಲ, ಎಳೆದಾಟ ಮಾಡಿ ಕಾಂಗ್ರೆಸ್‌ ಸದಸ್ಯರು ತಮ್ಮ ಸಂಸ್ಕೃತಿ ತೋರಿಸಿದ್ದಾರೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಪ್ರಭು ಚವ್ಹಾಣ್‌ ಹರಿಹಾಯ್ದರು. ಕಾಂಗ್ರೆಸ್‌ನವರು ಪವಿತ್ರವಾಗಿರುವ ವಿಧಾನ ಪರಿಷತ್‌ ಸಭೆಯ ಬಾಗಿಲನ್ನು ಕಾಲಿನಿಂದ ಒದ್ದು ಅಪವಿತ್ರ ಮಾಡಿದ್ದಾರೆ. ಕುರ್ಚಿ ಮೇಲೆ ಕುಳಿತವರನ್ನು ಎಳೆದಾಡಿದ್ದಾರೆ ಎಂದು ದೂರಿದರು.

‘ದೇಶದ ಸಂಸ್ಕೃತಿ, ಪರಂಪರೆ ಧರ್ಮ ನಂಬಿಕೆಗಳ ವಿರುದ್ಧ ಅಮಾನವೀಯವಾಗಿ ವರ್ತಿಸಿದ ಕಾಂಗ್ರೆಸ್‌ ಪಕ್ಷವನ್ನು ಎತ್ತಿ ಮೂಲೆಗೆ ಬಿಸಾಕಿದ್ದರೂ ಇನ್ನು ಬುದ್ಧಿ ಕಲಿತುಕೊಂಡಿಲ್ಲ’ಎಂದು ಟೀಕಿಸಿದರು. ‘ಈ ವಿಧೇಯಕವನ್ನು ಯಾರೇ ಅಡ್ಡಿ ಮಾಡಿದರೂ ನಾವು ಪಾಸ್ ಮಾಡಿ ಗೋಮಾತೆಯ ಋಣ ತೀರಿಸುತ್ತೇವೆ’ ಎಂದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ನನ್ನ-ಕಾಂಗ್ರೆಸ್ ಮಧ್ಯೆ ಭಕ್ತ-ಭಗವಂತನ ಸಂಬಂಧ ಇದೆ; RSS ಗೀತೆ ಹಾಡಿದ್ದಕ್ಕೆ ನೋವಾಗಿದ್ದರೆ ಕ್ಷಮೆ ಕೇಳುತ್ತೇನೆ: ಡಿ.ಕೆ ಶಿವಕುಮಾರ್; Video

Tariff ಬೆನ್ನಲ್ಲೇ ಅಮೆರಿಕ ಅಧ್ಯಕ್ಷರಿಗೆ ಯುದ್ಧೋನ್ಮಾದ: "ಯುದ್ಧ ಇಲಾಖೆ" ಬಗ್ಗೆ ಟ್ರಂಪ್ ಒಲವು!

ಭಾರತದ ಮೇಲೆ ಶೇ. 50 ರಷ್ಟು ಸುಂಕ ನಾಳೆ ಜಾರಿ, ಅಮೆರಿಕ ಕರಡು ಸೂಚನೆ; ಔಷಧ, ಎಲೆಕ್ಟ್ರಾನಿಕ್ಸ್‌ ವಸ್ತುಗಳಿಗೆ ವಿನಾಯಿತಿ

Ragigudda Metro ಮೆಟ್ರೋ ನಿಲ್ದಾಣದಲ್ಲಿ ತಪ್ಪಿದ ದುರಂತ, ಆಯತಪ್ಪಿ ಹಳಿ ಮೇಲೆ ಬಿದ್ದ ಸಿಬ್ಬಂದಿ!... ಮುಂದೇನಾಯ್ತು? Video

ಸೌರಭ್ ಭಾರದ್ವಾಜ್ ಮನೆ ಮೇಲೆ ಇಡಿ ದಾಳಿ; ಮೋದಿ ನಕಲಿ ಪದವಿ ಕುರಿತ ಗಮನ ಬೇರೆಡೆ ಸೆಳೆಯಲು ಯತ್ನ ಎಂದ AAP

SCROLL FOR NEXT