ವಿಸ್ಟ್ರಾನ್ 
ರಾಜ್ಯ

ವಿಸ್ಟ್ರಾನ್ ಘಟಕ ಧ್ವಂಸ ಪ್ರಕರಣ: ಕುಂದುಕೊರತೆ ಹೇಳಿಕೊಳ್ಳಲು ಸೃಷ್ಟಿಸಿದ್ದ ವೇದಿಕೆ ಬಳಸಿದಿದ್ದರೆ ಈ ಘಟನೆ ಸಂಭವಿಸುತ್ತಿರಲಿಲ್ಲ!

ನೌಕರರು ಕುಂದುಕೊರತೆ ಹೇಳಿಕೊಳ್ಳುವ ಸಲುವಾಗಿ ಸೃಷ್ಟಿಸಲಾಗಿದ್ದ ವೇದಿಕೆಯೊಂದನ್ನು ಅಧಿಕಾರಿಗಳು ಸೂಕ್ತ ರೀತಿಯಲ್ಲಿ ಬಳಕೆ ಮಾಡಿಕೊಂಡಿದ್ದೇ ಆದರೆ, ವಿಸ್ಟ್ರಾನ್ ಐಫೋನ್ ತಯಾರಿಕಾ ಘಟಕದ ಮೇಲಿನ ದಾಳಿಯನ್ನು ತಪ್ಪಿಸಬಹುದಿತ್ತು ಎಂದು ಹಿರಿಯ ಅಧಿಕಾರಿಗಳು ಹೇಳಿದ್ದಾರೆ. 

ಕೋಲಾರ: ನೌಕರರು ಕುಂದುಕೊರತೆ ಹೇಳಿಕೊಳ್ಳುವ ಸಲುವಾಗಿ ಸೃಷ್ಟಿಸಲಾಗಿದ್ದ ವೇದಿಕೆಯೊಂದನ್ನು ಅಧಿಕಾರಿಗಳು ಸೂಕ್ತ ರೀತಿಯಲ್ಲಿ ಬಳಕೆ ಮಾಡಿಕೊಂಡಿದ್ದೇ ಆದರೆ, ವಿಸ್ಟ್ರಾನ್ ಐಫೋನ್ ತಯಾರಿಕಾ ಘಟಕದ ಮೇಲಿನ ದಾಳಿಯನ್ನು ತಪ್ಪಿಸಬಹುದಿತ್ತು ಎಂದು ಹಿರಿಯ ಅಧಿಕಾರಿಗಳು ಹೇಳಿದ್ದಾರೆ. 

ಸಾಮಾಜಿಕ ಜಾಲತಾಣಗಳಲ್ಲಿ ಒಂದಾಗಿರುವ ವಾಟ್ಸಾಪ್ ನಲ್ಲಿ ಕೋಲಾರ ಡಿಸ್ಟ್ರಿಕ್ಟ್ ಇಂಡಸ್ಟ್ರೀಸ್ ಗ್ರೂಪ್ ಎಂದು ಕೋಲಾರ ಜಿಲ್ಲಾ ಕೈಗಾರಿಕಾ ಇಲಾಖೆಯ ಹಿರಿಯ ಅಧಿಕಾರಿಗಳು ಸೃಷ್ಟಿಸಿದ್ದರು. ಈ ಗ್ರೂಪ್ ನಲ್ಲಿ ವಿಸ್ಟ್ರಾನ್ ಕಾರ್ಪೊರೇಷನ್'ನ ಅಧಿಕಾರಿಗಳೂ ಇದ್ದರು ಎಂದು ತಿಳಿದುಬಂದಿದೆ. 

ಸಂಸ್ಥೆಯಲ್ಲಿ ನೌಕರರು ಸಮಸ್ಯೆ ಎದುರುತ್ತಿದ್ದರೂ ಕೂಡ ವಾಟ್ಸಾಪ್ ಗ್ರೂಪ್ ರಚನೆಗೊಂಡು ಸಾಕಷ್ಟು ಕಾಲವಾದರೂ ವಿಸ್ಟ್ರಾನ್ ಗ್ರೂಪ್'ನ ಅಧಿಕಾರಿಗಳು ಒಂದು ಪೋಸ್ಟನ್ನೂ ಮಾಡಿರಲಿಲ್ಲ. ಒಂದು ಅಧಿಕಾರಿಗಳು ಗ್ರೂಪ್ ಮೂಲಕ ನೌಕರರನ್ನು ಸಂಪರ್ಕಿರುವ ಪ್ರಯತ್ನಗಳನ್ನು ಮಾಡಿ, ಕುಂದುಕೊರತೆಗಳನ್ನು ಆಲಿಸಿದ್ದೇ ಆದರೆ, ಇಂತಹ ಘಟನೆಗಳು ಸಂಭವಿಸುತ್ತಿರಲಿಲ್ಲ ಎಂದು ಅಧಿಕಾರಿಗಳು ಹೇಳಿದ್ದಾರೆ. 

ಈ ಹಿಂದೆ ನೌಕರರು ತಮ್ಮ ಸಮಸ್ಯೆಗಳನ್ನು ಹೇಳಿಕೊಂಡಿದ್ದ ಸಂದರ್ಭದಲ್ಲಿ ಕೋಲಾರ ಜಿಲ್ಲಾ ಉಪ ಆಯುಕ್ತರು ಸಮಸ್ಯೆ ಬಗ್ಗೆ ಗಮನಹರಿಸಿ ಪರಿಹರಿಸಿದ್ದರು. 

ನೌಕರರು ನೀರು ಹಾಗೂ ವಿದ್ಯುತ್ ಸಮಸ್ಯೆಯನ್ನು ಎದುರಿಸುತ್ತಿದ್ದರು. ಈ ವೇಳೆ ಉಪ ಆಯುಕ್ತ ಸತ್ಯಭಾಮಾ ಅವರು, ಗಮನ ಹರಿಸಿ ಸಮಸ್ಯೆ ಬಗೆಹರಿಸಿದ್ದರು. ಜಿಲ್ಲೆಯಾದ್ಯಂತದ ಎಲ್ಲಾ ಕೈಗಾರಿಕೆಗಳ ಹಿತಾಸಕ್ತಿಗಳ ಗಮನಹರಿಸಿ ಸಮಸ್ಯೆ ಪರಿಹರಿಸುವ ಸಲುವಾಗಿ ರಚನೆ ಮಾಡಲಾಗಿತ್ತು. ಘಟನೆ ಬಗ್ಗೆ ಸೂಕ್ತ ರೀತಿಯ ತನಿಖೆಯ ಅಗತ್ಯವಿದೆ ಎಂದು ನೌಕರರೊಬ್ಬರು ಹೇಳಿದ್ದಾರೆ. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

'ಪಾಕಿಸ್ತಾನದೊಂದಿಗೆ ಯುದ್ಧ ನಿಲ್ಲಿಸಲು ಟ್ರಂಪ್ 24 ಗಂಟೆ ಕಾಲಾವಕಾಶ ನೀಡಿದ್ದರು, ಮೋದಿ ಕೇವಲ 5 ಗಂಟೆಗಳಲ್ಲಿ ಪಾಲಿಸಿದರು': ರಾಹುಲ್ ಗಾಂಧಿ

Dharmasthala: Mahesh Shetty Thimarodi ಮನೆ ಮಹಜರು, ಪತ್ನಿ-ಮಕ್ಕಳ ಮೊಬೈಲ್ ವಶಕ್ಕೆ, 3 ತಲ್ವಾರ್ ಕೂಡ ಪತ್ತೆ!

ಕಟ್ಟಡ ಕುಸಿತಕ್ಕೂ ಕೆಲವೇ ಕ್ಷಣಗಳ ಮುನ್ನ 22 CRPF ಸೈನಿಕರ ರಕ್ಷಣೆ; Indian Army ಹೆಲಿಕಾಪ್ಟರ್ ರೋಚಕ ಕಾರ್ಯಾಚರಣೆ! Video

ಡಿ ಕೆ ಶಿವಕುಮಾರ್ ಹಿಂದೂ ಜನರ ಭಾವನೆಗಳಿಗೆ ನೋವುಂಟುಮಾಡಿದ್ದು ಕ್ಷಮೆಯಾಚಿಸಬೇಕು: ಶೋಭಾ ಕರಂದ್ಲಾಜೆ

Tamil Nadu: ನಟ-ರಾಜಕಾರಣಿ ದಳಪತಿ ವಿಜಯ್ ಬೌನ್ಸರ್ ಗಳಿಂದ ವ್ಯಕ್ತಿಯ ಮೇಲೆ ಹಲ್ಲೆ ಆರೋಪ! ಕೇಸ್ ದಾಖಲು, ವಿಡಿಯೋದಲ್ಲಿ ಏನಿದೆ?

SCROLL FOR NEXT