ಸಾಂದರ್ಭಿಕ ಚಿತ್ರ 
ರಾಜ್ಯ

ಎಸ್‌ಡಿಎಂ ವಿವಿಯಿಂದ ಧಾರವಾಡ ಜಿಲ್ಲೆಯ ಹತ್ತು ಸರ್ಕಾರಿ ಪ್ರಾಥಮಿಕ ಶಾಲೆಗಳ ದತ್ತು

ಎರಡನೇ ವಾರ್ಷಿಕೋತ್ಸವವನ್ನು ಆಚರಿಸುತ್ತಿರುವ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ(ಎಸ್‌ಡಿಎಂ) ವಿಶ್ವವಿದ್ಯಾಲಯ ಧಾರವಾಡ ಜಿಲ್ಲೆಯ 10 ಸರ್ಕಾರಿ ಪ್ರಾಥಮಿಕ ಶಾಲೆಗಳನ್ನು ದತ್ತು ತೆಗೆದುಕೊಂಡು ಅವುಗಳ ಒಟ್ಟಾರೆ ಅಭಿವೃದ್ಧಿಯನ್ನು ಹಂತ- ಹಂತವಾಗಿ ನಿರ್ವಹಿಸಲಿದೆ.

ಧಾರವಾಡ: ಎರಡನೇ ವಾರ್ಷಿಕೋತ್ಸವವನ್ನು ಆಚರಿಸುತ್ತಿರುವ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ(ಎಸ್‌ಡಿಎಂ) ವಿಶ್ವವಿದ್ಯಾಲಯ ಧಾರವಾಡ ಜಿಲ್ಲೆಯ 10 ಸರ್ಕಾರಿ ಪ್ರಾಥಮಿಕ ಶಾಲೆಗಳನ್ನು ದತ್ತು ತೆಗೆದುಕೊಂಡು ಅವುಗಳ ಒಟ್ಟಾರೆ ಅಭಿವೃದ್ಧಿಯನ್ನು ಹಂತ- ಹಂತವಾಗಿ ನಿರ್ವಹಿಸಲಿದೆ.

ಶುಕ್ರವಾರ ಇಲ್ಲಿ ಎರಡನೇ ವಾರ್ಷಿಕೋತ್ಸವದ ಕಾರ್ಯಕ್ರಮಗಳ ವಿವರಗಳನ್ನು ನೀಡಿದ ಉಪಕುಲಪತಿ ನಿರಂಜನ್ ಕುಮಾರ್, ದತ್ತು ತೆಗೆದುಕೊಳ್ಳಲು ಈಗಾಗಲೇ ಕೆಲ ಶಾಲೆಗಳನ್ನು ಗುರುತಿಸಲಾಗಿದ್ದು, ಅವುಗಳ ಅವಶ್ಯಕತೆಗಳ ಬಗ್ಗೆ ಮಾಹಿತಿಯನ್ನು ಸಂಗ್ರಹಿಸಲಾಗಿದೆ ಎಂದು ಹೇಳಿದ್ದಾರೆ.

ದತ್ತು ಪಡೆದ ಶಾಲೆಗಳನ್ನು 3ರಿಂದ 4 ವರ್ಷಗಳಲ್ಲಿ ಹಂತ-ಹಂತವಾಗಿ ಒಟ್ಟಾರೆ ಅಭಿವೃದ್ಧಿ ಪಡಿಸಲು ಅನುಕೂಲವಾಗುವಂತೆ ಯೋಜನೆ ರೂಪಿಸಿದ್ದೇವೆ. ಪ್ರತಿ ಶಾಲೆಯ ಅವಶ್ಯಕತೆಗೆ ಅನುಗುಣವಾಗಿ ಮೂಲಭೂತ ಸೌಕರ್ಯಗಳು, ಮೂಲಸೌಕರ್ಯಗಳು, ಶಿಕ್ಷಕರಿಗೆ ತರಬೇತಿ ಮತ್ತು ವಿದ್ಯಾರ್ಥಿಗಳಿಗೆ ಕಾರ್ಯಾಗಾರಗಳನ್ನು ನಡೆಸಲು ಯೋಜಿಸಲಾಗಿದೆ ಎಂದು ನಿರಂಜನ್ ಕುಮಾರ್ ತಿಳಿಸಿದರು.

ವಿದ್ಯಾರ್ಥಿಗಳಿಗೆ ಪ್ರಯೋಜನಗಳು ದೊರೆಯುವುದನ್ನು ಖಚಿತಪಡಿಸಿಕೊಳ್ಳುವುದು ಇದರ ಉದ್ದೇಶವಾಗಿದೆ. ಆರಂಭಿಕವಾಗಿ ಧಾರವಾಡ ಮತ್ತು ಸುತ್ತಮುತ್ತಲಿನ ಶಾಲೆಗಳತ್ತ ಗಮನ ಹರಿಸಲಾಗುವುದು ಎಂದು ಅವರು ಹೇಳಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

"ಭಾರತೀಯರು ಬಗ್ಗದೇ ಹೋದರೆ...." ಹತಾಶಗೊಂಡ ಟ್ರಂಪ್ ಸಲಹೆಗಾರನಿಂದ ನೇರಾ ನೇರಾ ಬೆದರಿಕೆ!

SCO summit: ಟ್ರಂಪ್ ಗೆ ಸೆಡ್ಡು; ಚೀನಾ, ರಷ್ಯಾ ಅಧ್ಯಕ್ಷರೊಂದಿಗೆ ದ್ವಿಪಕ್ಷೀಯ ಸಭೆಗೆ ಪ್ರಧಾನಿ ಮೋದಿ ಸಜ್ಜು; ದಿಗ್ಗಜರ ಸಮಾಗಮದ ಮೇಲೆ ಜಗತ್ತಿನ ಕಣ್ಣು!

BJP, RSS ನಡುವೆ ಭಿನ್ನಾಭಿಪ್ರಾಯ ಇರಬಹುದು, ಆದರೆ ಸಂಘರ್ಷ ಇಲ್ಲ: ಮೋಹನ್ ಭಾಗವತ್

ಧರ್ಮಸ್ಥಳ ಪ್ರಕರಣ: ಹೊಸ ದೂರು ದಾಖಲು, ದೂರುದಾರನ ಮಂಪರು ಪರೀಕ್ಷೆಗೆ ಸೌಜನ್ಯ ತಾಯಿ ಒತ್ತಾಯ!

Thyroid Cancer: ಗುರುತೇ ಸಿಗಲಾರದಷ್ಟು ಬದಲಾದ ನಟ! 'ರಾಯ್' ಗೆ ಬೇಕಾಗಿದೆ ನೆರವಿನ ಹಸ್ತ..Video

SCROLL FOR NEXT