ಸಾಂದರ್ಭಿಕ ಚಿತ್ರ 
ರಾಜ್ಯ

ಎಸ್‌ಡಿಎಂ ವಿವಿಯಿಂದ ಧಾರವಾಡ ಜಿಲ್ಲೆಯ ಹತ್ತು ಸರ್ಕಾರಿ ಪ್ರಾಥಮಿಕ ಶಾಲೆಗಳ ದತ್ತು

ಎರಡನೇ ವಾರ್ಷಿಕೋತ್ಸವವನ್ನು ಆಚರಿಸುತ್ತಿರುವ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ(ಎಸ್‌ಡಿಎಂ) ವಿಶ್ವವಿದ್ಯಾಲಯ ಧಾರವಾಡ ಜಿಲ್ಲೆಯ 10 ಸರ್ಕಾರಿ ಪ್ರಾಥಮಿಕ ಶಾಲೆಗಳನ್ನು ದತ್ತು ತೆಗೆದುಕೊಂಡು ಅವುಗಳ ಒಟ್ಟಾರೆ ಅಭಿವೃದ್ಧಿಯನ್ನು ಹಂತ- ಹಂತವಾಗಿ ನಿರ್ವಹಿಸಲಿದೆ.

ಧಾರವಾಡ: ಎರಡನೇ ವಾರ್ಷಿಕೋತ್ಸವವನ್ನು ಆಚರಿಸುತ್ತಿರುವ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ(ಎಸ್‌ಡಿಎಂ) ವಿಶ್ವವಿದ್ಯಾಲಯ ಧಾರವಾಡ ಜಿಲ್ಲೆಯ 10 ಸರ್ಕಾರಿ ಪ್ರಾಥಮಿಕ ಶಾಲೆಗಳನ್ನು ದತ್ತು ತೆಗೆದುಕೊಂಡು ಅವುಗಳ ಒಟ್ಟಾರೆ ಅಭಿವೃದ್ಧಿಯನ್ನು ಹಂತ- ಹಂತವಾಗಿ ನಿರ್ವಹಿಸಲಿದೆ.

ಶುಕ್ರವಾರ ಇಲ್ಲಿ ಎರಡನೇ ವಾರ್ಷಿಕೋತ್ಸವದ ಕಾರ್ಯಕ್ರಮಗಳ ವಿವರಗಳನ್ನು ನೀಡಿದ ಉಪಕುಲಪತಿ ನಿರಂಜನ್ ಕುಮಾರ್, ದತ್ತು ತೆಗೆದುಕೊಳ್ಳಲು ಈಗಾಗಲೇ ಕೆಲ ಶಾಲೆಗಳನ್ನು ಗುರುತಿಸಲಾಗಿದ್ದು, ಅವುಗಳ ಅವಶ್ಯಕತೆಗಳ ಬಗ್ಗೆ ಮಾಹಿತಿಯನ್ನು ಸಂಗ್ರಹಿಸಲಾಗಿದೆ ಎಂದು ಹೇಳಿದ್ದಾರೆ.

ದತ್ತು ಪಡೆದ ಶಾಲೆಗಳನ್ನು 3ರಿಂದ 4 ವರ್ಷಗಳಲ್ಲಿ ಹಂತ-ಹಂತವಾಗಿ ಒಟ್ಟಾರೆ ಅಭಿವೃದ್ಧಿ ಪಡಿಸಲು ಅನುಕೂಲವಾಗುವಂತೆ ಯೋಜನೆ ರೂಪಿಸಿದ್ದೇವೆ. ಪ್ರತಿ ಶಾಲೆಯ ಅವಶ್ಯಕತೆಗೆ ಅನುಗುಣವಾಗಿ ಮೂಲಭೂತ ಸೌಕರ್ಯಗಳು, ಮೂಲಸೌಕರ್ಯಗಳು, ಶಿಕ್ಷಕರಿಗೆ ತರಬೇತಿ ಮತ್ತು ವಿದ್ಯಾರ್ಥಿಗಳಿಗೆ ಕಾರ್ಯಾಗಾರಗಳನ್ನು ನಡೆಸಲು ಯೋಜಿಸಲಾಗಿದೆ ಎಂದು ನಿರಂಜನ್ ಕುಮಾರ್ ತಿಳಿಸಿದರು.

ವಿದ್ಯಾರ್ಥಿಗಳಿಗೆ ಪ್ರಯೋಜನಗಳು ದೊರೆಯುವುದನ್ನು ಖಚಿತಪಡಿಸಿಕೊಳ್ಳುವುದು ಇದರ ಉದ್ದೇಶವಾಗಿದೆ. ಆರಂಭಿಕವಾಗಿ ಧಾರವಾಡ ಮತ್ತು ಸುತ್ತಮುತ್ತಲಿನ ಶಾಲೆಗಳತ್ತ ಗಮನ ಹರಿಸಲಾಗುವುದು ಎಂದು ಅವರು ಹೇಳಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

9 ದಿನಗಳಿಂದ ಉಪವಾಸ: ದೇವೇಂದ್ರ ಮಹ್ತೊ ಆಸ್ಪತ್ರೆಗೆ ದಾಖಲು; ಪೊಲೀಸರ ಲಾಠಿಚಾರ್ಚ್ ಖಂಡಿಸಿ ನಾಳೆ ಬಂದ್ ಗೆ BJP ಕರೆ!

ಶಾರುಖ್ ನಟನೆಯ 'ಕಭಿ ಅಲ್ವಿದಾ ನಾ ಕೆಹನಾ' ಚಿತ್ರ ಅಕ್ರಮ ಸಂಬಂಧ ಬೆಂಬಲಿಸಿಲ್ಲ: ಕರಣ್ ಜೋಹರ್ ಪೋಸ್ಟ್ ವೈರಲ್!

ಖಾತೆ ಹಂಚಿಕೆ ಕಸರತ್ತು: ವರಿಷ್ಠರಿಗೆ ಪಟ್ಟಿ ನೀಡಿ ಬೆಂಗಳೂರಿಗೆ CM ಡಿ.ಕೆ ಶಿವಕುಮಾರ್ ವಾಪಸ್; ಹೇಳಿದ್ದೇನು?

ನಾವು ಹಿಂಸಾಚಾರನ ಬೆಂಬಲಿಸಲ್ಲ; ವಿದ್ಯಾರ್ಥಿಗಳ ಮೇಲೆ ಲಾಠಿ ಚಾರ್ಜ್‌ ಸರಿಯಲ್ಲ: ಜಾರ್ಖಂಡ್ ನಡೆ ಖಂಡಿಸಿದ ರಾಹುಲ್!

ಕೊಲಂಬಿಯಾದಲ್ಲಿ 7.4 ತೀವ್ರತೆಯ ಪ್ರಬಲ ಭೂಕಂಪ: ಕನಿಷ್ಠ 47 ಮಂದಿ ಸಾವು, ಡಜನ್ಗಟ್ಟಲೆ ಕಟ್ಟಡಗಳು ಕುಸಿತ!