ರೈತರ ಪ್ರತಿಭಟನೆಗೆ ಪ್ರಸನ್ನ ಬೆಂಬಲ 
ರಾಜ್ಯ

ಕೃಷಿ ಮಸೂದೆ ವಿರೋಧಿಸಿ ಪ್ರತಿಭಟನೆ: ರೈತರಿಗೆ ರಂಗಕರ್ಮಿ ಪ್ರಸನ್ನ ಬೆಂಬಲ

ಕೃಷಿ ಮಸೂದೆಗಳನ್ನು ವಿರೋಧಿಸಿ ದೆಹಲಿಯಲ್ಲಿ ನಡೆಯುತ್ತಿರುವ ರೈತರ ಪ್ರತಿಭಟನೆ ಬೆಂಬಲಿಸಲು ರಾಜ್ಯದಲ್ಲು ಅನಿರ್ಧಿಷ್ಟಾವಧಿ ಧರಣಿ ಮುಂದುವರಿದಿದೆ, ರೈತರ ಈ ಧರಣಿಗೆ ಹಿರಿಯ ರಂಗಕರ್ಮಿ ಪ್ರಸನ್ನ ತಮ್ಮ ಬೆಂಬಲ ಸೂಚಿಸಿದ್ದಾರೆ.

ಬೆಂಗಳೂರು: ಕೃಷಿ ಮಸೂದೆಗಳನ್ನು ವಿರೋಧಿಸಿ ದೆಹಲಿಯಲ್ಲಿ ನಡೆಯುತ್ತಿರುವ ರೈತರ ಪ್ರತಿಭಟನೆ ಬೆಂಬಲಿಸಲು ರಾಜ್ಯದಲ್ಲು ಅನಿರ್ಧಿಷ್ಟಾವಧಿ ಧರಣಿ ಮುಂದುವರಿದಿದೆ, ರೈತರ ಈ ಧರಣಿಗೆ ಹಿರಿಯ ರಂಗಕರ್ಮಿ ಪ್ರಸನ್ನ ತಮ್ಮ ಬೆಂಬಲ ಸೂಚಿಸಿದ್ದಾರೆ.

‘ದೆಹಲಿಯಲ್ಲಿ ನಡೆಯುತ್ತಿರುವ ರೈತರ ಮಹಾ ಪ್ರತಿಭಟನೆ, ದೇಶವನ್ನು ಮುನ್ನಡೆಸುವ ಮಹತ್ವದ ಹೋರಾಟ. ಇದು ಶ್ರಮ ಸಂಸ್ಕೃತಿಯ ಗ್ರಾಮೀಣ ಬದುಕಿನ ರಕ್ಷಣೆಗಾಗಿ ನಡೆಯುತ್ತಿರುವ ಹೋರಾಟ’ ಎಂದು ಬಣ್ಣಿಸಿದರು.

‘ಇಂದು ನಮ್ಮನ್ನು ಆಳುತ್ತಿರುವವರದು ಕಾರ್ಪೊರೇಟ್ ಸಂಸ್ಕೃತಿ ಪರ ಧೋರಣೆಯಾಗಿದೆ. ಈ ಕಾರಣಕ್ಕಾಗಿ ನಗರಗಳು, ಮಹಾನಗರಗಳು ಬೃಹತ್ ತಿಪ್ಪೆಗುಂಡಿಗಳಾಗಿವೆ. ಸರ್ಕಾರಗಳ ಹೊಸ ಕೃಷಿ ಕಾಯ್ದೆಗಳು ಈ ತಿಪ್ಪೆಗುಂಡಿಗಳನ್ನು ಮತ್ತಷ್ಟು ಬೆಳೆಸುವ ದುರುದ್ದೇಶ ಹೊಂದಿದೆ’ ಎಂದು ಟೀಕಿಸಿದರು. ‘ರೈತರು, ಕರಕುಶಲ ಕರ್ಮಿಗಳು, ಕೃಷಿ ಕೂಲಿಕಾರರು ಯಾವುದೇ ಅಂಜಿಕೆ, ಆತಂಕ, ಕೀಳರಿಮೆ ಇಟ್ಟುಕೊಳ್ಳದೇ ಹೋರಾಟ ಮುಂದುವರಿಸಬೇಕು’ ಎಂದರು.

ಕರ್ನಾಟಕ ಪ್ರಾಂತ ಕೃಷಿ ಕೂಲಿಕಾರರ ಸಂಘದ ರಾಜ್ಯ ಘಟಕದ ಅಧ್ಯಕ್ಷ ನಿತ್ಯಾನಂದಸ್ವಾಮಿ, ‘ಕೇಂದ್ರ ಮತ್ತು ರಾಜ್ಯ ಸರ್ಕಾರ ತಂದಿರುವ ಕೃಷಿ ಕಾಯ್ದೆಗಳು ಕೂಲಿಕಾರರನ್ನು ನಿರುದ್ಯೋಗಿಯಾಗಿಸಿ ಹಸಿವಿಗೆ ತಳ್ಳುವ ಕಾನೂನುಗಳಾಗಿವೆ. ಈಗಾಗಲೇ 25 ರೈತ ಹೋರಾಟಗಾರರು ಚಳಿ ಮತ್ತಿತರ ಕಾರಣದಿಂದ ನಿಧನರಾಗಿದ್ದರೂ ನರೇಂದ್ರ ಮೋದಿನೇತೃತ್ವದ ಸರ್ಕಾರ ರೈತರೊಂದಿಗೆ ಮಾತುಕತೆಗೆ ಮುಂದಾಗುತ್ತಿಲ್ಲ’ ಎಂದು ದೂರಿದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಪಾಕಿಸ್ತಾನ-ಅಫ್ಘಾನಿಸ್ತಾನ ಯುದ್ಧ: 58 ಪಾಕ್ ಸೈನಿಕರು ಹತ, ತಾಲಿಬಾನ್ ಸರ್ಕಾರದ 'ದೊಡ್ಡ' ಹೇಳಿಕೆ

ಯುದ್ಧ ತೀವ್ರ: ಪಾಕಿಸ್ತಾನದ ಏರ್ ಸ್ಟ್ರೈಕ್ ಗೆ ಅಫ್ಘಾನಿಸ್ತಾನದಿಂದ ಕ್ಷಿಪಣಿ ದಾಳಿ ಉತ್ತರ

'ಬ್ಲೂ ಸ್ಟಾರ್ ಆಪರೇಷನ್' ಕಾರ್ಯಾಚರಣೆ ತಪ್ಪಿಗೆ ಇಂದಿರಾ ಗಾಂಧಿ ಪ್ರಾಣ ತೆತ್ತರು: ಪಿ ಚಿದಂಬರಂ

ದೇಶದ ಮುಸ್ಲಿಂರನ್ನು ಗುರಿಯಾಗಿಸಿಕೊಳ್ಳುವ ಬಿಜೆಪಿ ಅಫ್ಘಾನಿಸ್ತಾನದ ಜೊತೆ ಸಂಬಂಧ ಬೆಳೆಸುವುದು 'ಬೂಟಾಟಿಕೆ': ಮೆಹಬೂಬಾ ಮುಫ್ತಿ

20 ವರ್ಷ ಸಾಕಿ ಬೆಳೆಸಿದ 'ಅಶ್ವತ್ಥ'ಕ್ಕೆ ಕಿಡಿಗೇಡಿಗಳ ಕೊಡಲಿ ಪೆಟ್ಟು, ಬಿಕ್ಕಿ ಬಿಕ್ಕಿ ಅತ್ತ 'ವೃಕ್ಷಮಾತೆ', ಇಬ್ಬರ ಬಂಧನ, video viral

SCROLL FOR NEXT