ರಾಜು ತಳವಾರ ಮನೆಯಲ್ಲಿ ಸಿಕ್ಕ ಮಾರಾಕಾಸ್ತ್ರಗಳು 
ರಾಜ್ಯ

ಗ್ರಾಮ ಪಂಚಾಯತ್ ಚುನಾವಣೆ ವೈಷಮ್ಯ: ಸತೀಶ ಜಾರಕಿಹೊಳಿ ಆಪ್ತರ ಮೇಲೆ ಗುಂಡಿನ ದಾಳಿ

ಗ್ರಾಮ ಪಂಚಾಯತ್ ಚುನಾವಣೆಗೆ ದಿನಗಣನೆ ಆರಂಭವಾಗಿರುವ ನಡುವಲ್ಲೇ ಶಾಸಕ, ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ ಜಾರಕಿಹೊಳಿ ಆಪ್ತ ಸೇರಿದಂತೆ ಇಬ್ಬರ ಮೇಲೆ ಮುಸುಕುಧಾರಿ ವ್ಯಕ್ತಿಯೊಬ್ಬ ಗುಂಡುಹಾರಿಸಿ ಪರಾರಿಯಾಗಿರುವ ಘಟನೆ ನಡೆದಿದೆ. 

ಬೆಳಗಾವಿ: ಗ್ರಾಮ ಪಂಚಾಯತ್ ಚುನಾವಣೆಗೆ ದಿನಗಣನೆ ಆರಂಭವಾಗಿರುವ ನಡುವಲ್ಲೇ ಶಾಸಕ, ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ ಜಾರಕಿಹೊಳಿ ಆಪ್ತ ಸೇರಿದಂತೆ ಇಬ್ಬರ ಮೇಲೆ ಮುಸುಕುಧಾರಿ ವ್ಯಕ್ತಿಯೊಬ್ಬ ಗುಂಡುಹಾರಿಸಿ ಪರಾರಿಯಾಗಿರುವ ಘಟನೆ ನಡೆದಿದೆ. 

ಶಾಸಕರ ಆಪ್ತ ಕಾರ್ಯದರ್ಶಿ ಕಿರಣಸಿಂಗ್ ರಜಪೂತ ಮತ್ತು ಕಾಂಗ್ರೆಸ್ ಮುಖಂಡ ಭರಮಾದೂಪದಾಳೆ ಎಂಬುವವರ ಮೇಲೆ ಗುಂಡಿನ ದಾಳಿ ನಡೆದಿದ್ದು, ಅದೃಷ್ಟವಶಾತ್ ಇಬ್ಬರೂ ಪ್ರಾಣಾಪಾಯದಿಂದ ಪಾರಾಗಿದ್ದಾರೆ. 

ಭರಮಾ ದೂಪದಾಳೆ ಮತ್ತು ಕಿರಣ ಸಿಂಗ್ ರಜಪೂತ, ಅಲತಾಪ ಚಜೆದಾರ ಅವರು ಗ್ರಾಮದ ಬಸ್ತಿ ಮಂದಿರ ಹತ್ತಿರ ಕುಳಿತು ಚುನಾವಣೆ ವಿಚಾರವಾಗಿ ಚರ್ಚೆ ಮಾಡುತ್ತಿದ್ದರು. ಈ ವೇಳೆ ಸ್ಥಳಕ್ಕೆ ಕಾಲ್ನಡಿಗೆ ಮೂಲಕ ಬಂದಿರುವ ಅನಾಮಧೇಯ ವ್ಯಕ್ತಿ ಕಂಟ್ರಿ ಮೇಡ್ ಪಿಸ್ತೂಲಿನಿಂದ ಗುಂಡಿನ ದಾಳಿ ನಡೆಸಿದ್ದಾನೆ. ಸಣ್ಣ ಪುಟ್ಟ ಗಾಯಗಳಾಗಿದ್ದರಿಂದ ಮೂವರು ಪ್ರಾಣಾಪಾಯದಿಂದ ಪಾರಾಗಿದ್ದಾರೆ. 

ದಾಳಿಗೆ ಪ್ರಮುಖ ಕಾರಣಗಳು ತಿಳಿದುಬಂದಿಲ್ಲ. ಈ ಕುರಿತು ತನಿಖೆ ನಡೆಸಲಾಗುತ್ತಿದೆ. ಪ್ರಕರಣವನ್ನು ಶೀಘ್ರಗತಿಯಲ್ಲಿ ಭೇದಿಸಲಾಗುತ್ತದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. 

ಈ ನಡುವೆ ದಾಳಿ ಘಟನೆಯನ್ನು ಸತೀಶ್ ಜಾರಕಿಹೊಳಿಯವರು ತೀವ್ರವಾಗಿ ಖಂಡಿಸಿದ್ದಾರೆ. 

ಯಮಕನಮರಡಿ ಗ್ರಾಮ ಪಂಚಾಯಿತಿ ಚುನಾವಣೆಯಲ್ಲಿ ಸಾಕಷ್ಟು ಜನರು ಕಣದಲ್ಲಿದ್ದಾರೆ. ಚುನಾವಣೆ ಹಿನ್ನೆಲೆಯಲ್ಲಿ ದಾಳಿ ನಡೆದಿದೆ ಎಂದು ಕಾಂಗ್ರೆಸ್ ಶಂಕೆ ವ್ಯಕ್ತಪಡಿಸಿದೆ. 

ಅಂಕಲಗಿಯಲ್ಲಿ ಮತ್ತೊಂದು ಘಟನೆ ನಡೆದಿದ್ದು, ಗ್ರಾಮದಲ್ಲಿ ಮತ್ತೆ ಗೂಂಡಾಗಿರಿ ನಡೆದಿರುವುದು ವರದಿಯಾಗಿದೆ. ಕುಟುಂಬಗಳ ನಡುವೆ ಮಾರಾಮಾರಿ ನಡೆದಿದೆ. ರಾಜು ತಳವಾರ ಎಂಬುವವರು ಮೂವರು ವ್ಯಕ್ತಿಗಳ ಮೇಲೆ ಮೇಲೆ ಮಾರಕಾಸ್ತ್ರಗಳಿಂದ ಹಲ್ಲೆ ನಡೆಸಿದ್ದಾರೆ. 

ಹಲ್ಲೆಗೊಳಗಾದವರನ್ನು ಸಂಜು ಚಿಕ್ಕುಗೋಲ್, ಆಕಾಶ್ ಚಿಕ್ಕಿಗೋಲ್, ಅಕ್ಷಯ್ ಚಿಕ್ಕುಗೋಲ್ ಎಂದು ಗುರ್ತಿಸಲಾಗಿದ್ದು, ಮೂವರ ಸ್ಥಿತಿ ಚಿಂತಾಜನಕವಾಗಿದೆ ಎಂದು ತಿಳಿದುಬಂದಿದೆ. 

ಘಟನೆ ಬಳಿಕ ರಾಜು ತಳವಾರ್ ತಲೆಮರೆಸಿಕೊಂಡಿದ್ದು, ಆತನ ವಿರುದ್ಧ ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ಹುಡುಕಾಟ ಆರಂಭಿಸಿದ್ದಾರೆ. 

ಈ ನಡುವೆ ಅಂಕಲಗಿಯಲ್ಲಿರುವ ತಳವಾರ್ ಕುಟುಂಬದ ಮೇಲೆ ಪೊಲೀಸರು ದಾಳಿ ನಡೆಸಿದ್ದು, ದಾಳಿ ವೇಶೆ 20 ಕುಡಗೋಲ ಹಾಗೂ ಹಲವು ಮಾರಕಾಸ್ತ್ರಗಳನ್ನು ವಶಕ್ಕೆ ಪಡೆದಿದ್ದಾರೆ. ಅಲ್ಲದೆ ದಾಖಲೆ ಇಲ್ಲದ ರೂ.83 ಲಕ್ಷ ನಗದನ್ನೂ ವಶಪಡಿಸಿಕೊಂಡಿದ್ದಾರೆಂದು ತಿಳಿದುಬಂದಿದೆ. 

ರಾಜು ತಳವಾರಗೆ ರಾಜಕೀಯ ರಕ್ಷಣೆ ಇದೆ. ಅಂಕಲಗಿ ಗ್ರಾಮದಲ್ಲಿ ಮತ್ತೆ ಗೂಂಡಾಗಿರಿ ನಡೆದಿದೆ. ಕಳೆದ 6 ತಿಂಗಳಿನಲ್ಲಿ ಮೂರು ಬಾರಿ ಇಂತಹ ಘಟನೆ ನಡೆದಿದೆ. ಇಲ್ಲಿ ಭಯದ ವಾತಾವರಣ ಮುಂದುವರೆದಿದ್ದು, ಪೊಲೀಸರು ಕಟ್ಟುನಿಟ್ಟಾಗಿ ಕ್ರಮ ಕೈಗೊಳ್ಳಬೇಕು. ಮಾರಾಮಾರಿ ಎರಡು ಕುಟುಂಬಗಳ ನಡುವೆ ನಡೆದಿದೆ ಹೌದು, ಆದರೆ, ಎರಡು ಕುಟುಂಬಗಳೂ ಪ್ರತ್ಯೇಕ ಪಕ್ಷಗಳಿಗೆ ಸಂಬಂಧಿಸಿದ್ದಾಗಿವೆ ಎಂದು ಸತೀಶ್ ಜಾರಕಿಹೊಳಿಯವರು ಹೇಳಿದ್ದಾರೆ. 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ವೆನೆಜುವೆಲಾ ಪರಿಸ್ಥಿತಿ ನಿಮಗೂ ಬರಬಹುದು.. ತಡ ಮಾಡದೇ ನಮ್ ಜೊತೆ ಒಪ್ಪಂದ ಮಾಡ್ಕೊಳ್ಳಿ': ಕ್ಯೂಬಾಗೂ Donald Trump ಎಚ್ಚರಿಕೆ!

ಒಂದು ವಾರದ ಚಿಕಿತ್ಸೆ ಬಳಿಕ ಆಸ್ಪತ್ರೆಯಿಂದ ಸೋನಿಯಾ ಗಾಂಧಿ ಡಿಸ್ಚಾರ್ಜ್!

Tubelight in his head: ಹಿಮಂತಾ ಬಿಸ್ವಾ ಶರ್ಮಾ ವಿರುದ್ಧ AIMIM ಮುಖ್ಯಸ್ಥ ಓವೈಸಿ ಕಿಡಿ! ಏನಿದು ವಿವಾದ?

'ಒಬ್ಬ ಅಲ್ಲ.. ಭಾರತದ ಮೇಲೆ ದಾಳಿಗೆ ಸಾವಿರಾರು ಆತ್ಮಹತ್ಯಾ ಬಾಂಬರ್‌ಗಳು ಸಿದ್ಧ': ಪಾಕ್ ಮೂಲದ ಉಗ್ರ Masood Azhar ಆಡಿಯೋ ವೈರಲ್!

1st ODI: ನ್ಯೂಜಿಲೆಂಡ್ ವಿರುದ್ಧ ಭರ್ಜರಿ ಬ್ಯಾಟಿಂಗ್, ಸಚಿನ್ ತೆಂಡೂಲ್ಕರ್, ಸಂಗಕ್ಕಾರ ದಾಖಲೆ ಮುರಿದ Virat Kohli

SCROLL FOR NEXT