ಸಂಗ್ರಹ ಚಿತ್ರ 
ರಾಜ್ಯ

ರಸ್ತೆಗಳಲ್ಲಿ ಭಿಕ್ಷೆ ಬೇಡುವ ಮಕ್ಕಳ ಸಮೀಕ್ಷೆಗೆ ಬಿಬಿಎಂಪಿ ಮುಂದು!

ಪಾಲಿಕೆ ವ್ಯಾಪ್ತಿಯಲ್ಲಿ ಭಿಕ್ಷೆ ಬೇಡುವ ಮತ್ತು ಟ್ರಾಫಿಕ್ ಸಿಗ್ನಲ್'ಗಳಲ್ಲಿ ಆಟಿಕೆ ವಸ್ತುಗಳನ್ನು ಮಾರಾಟ ಮಾಡುವ ಹಾಗೂ ಕೊಳಗೇರಿಗಳಲ್ಲಿ ವಾಸಿಸುವ ಮಕ್ಕಳ  ಬಗ್ಗೆ ಸಮೀಕ್ಷೆ ನಡೆಸಿ ತ್ವರಿತವಾಗಿ ಪಟ್ಟಿ ಸಿದ್ಧಪಡಿಸುವಂತೆ ಬಿಬಿಎಂಪಿ ಆಯುಕ್ತ ಎನ್.ಮಂಜುನಾಥ್ ಪ್ರಸಾದ್ ಅವರು ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ. 

ಬೆಂಗಳೂರು: ಪಾಲಿಕೆ ವ್ಯಾಪ್ತಿಯಲ್ಲಿ ಭಿಕ್ಷೆ ಬೇಡುವ ಮತ್ತು ಟ್ರಾಫಿಕ್ ಸಿಗ್ನಲ್'ಗಳಲ್ಲಿ ಆಟಿಕೆ ವಸ್ತುಗಳನ್ನು ಮಾರಾಟ ಮಾಡುವ ಹಾಗೂ ಕೊಳಗೇರಿಗಳಲ್ಲಿ ವಾಸಿಸುವ ಮಕ್ಕಳ  ಬಗ್ಗೆ ಸಮೀಕ್ಷೆ ನಡೆಸಿ ತ್ವರಿತವಾಗಿ ಪಟ್ಟಿ ಸಿದ್ಧಪಡಿಸುವಂತೆ ಬಿಬಿಎಂಪಿ ಆಯುಕ್ತ ಎನ್.ಮಂಜುನಾಥ್ ಪ್ರಸಾದ್ ಅವರು ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ. 

ಶುಕ್ರವಾರ ಭಿಕ್ಷೆ ಬೇಡುವ ಮತ್ತು ತಿರುಗು ವ್ಯಾಪಾರಿ ಮಕ್ಕಳ ಗುರುತಿಸುವಿಕೆ ಸಮೀಕ್ಷೆ ಕುರಿತು ನಡೆದ ಸಭೆಯಲ್ಲಿ ಮಾತನಾಡಿದ ಅವರು, ಎಲ್ಲಾ ವಲಯಗಳ ಜಂಟಿ ಆಯುಕ್ತರು ಹಾಗೂ ಆಯಾ ವಲಯಕ್ಕೆ ಸಂಬಂಧಿಸಿದ ಅಧಿಕಾರಿಗಳು ರಾತ್ರಿ 8 ರಿಂದ ಮಧ್ಯರಾತ್ರಿ 12 ಗಂಟೆವರೆಗೆ ತಪಾಸಣೆ ನಡೆಸಿ ರಸ್ತೆ, ಪಾದಚಾರಿ ಮಾರ್ಗ, ರೈಲ್ವೇ ನಿಲ್ದಾಣ, ಬಸ್ ನಿಲ್ದಾಣ, ತಂಗುದಾಣ, ಮಾರುಕಟ್ಟೆ ಸೇರಿದಂತೆ ಇನ್ನಿತರೆ ಸ್ಥಳಗಳಲ್ಲಿ ಮಲಗಿರುವವರನ್ನು ಗುರುತಿಸಿ ಪಟ್ಟಿ ಮಾಡಬೇಕೆಂದು ಸೂಚಿಸಿದ್ದಾರೆ. 

ಭಿಕ್ಷುಕ ಮತ್ತು ಆಟಿಕೆಗಳನ್ನು ಮಾರಾಟ ಮಾಡುವ ಮಕ್ಕಳು ಹಾಗೂ ಕೊಳಗೇರಿಗಳಲ್ಲಿ ಶಾಲೆಗೆ ಹೋಗದೆ ಮನೆಯಲ್ಲೇ ಇರುವ ಮಕ್ಕಳನ್ನು ಗುರುತಿಸಬೇಕು. ಶಾಲೆ ಬಿಟ್ಟ ಮಕ್ಕಳನ್ನು ಶಾಲೆಗಳಿಗೆ ಕಳುಹಿಸುವ ವ್ಯವಸ್ಥೆ ಮಾಡಬೇಕು. ಬಿಬಿಎಂಪಿ ವ್ಯಾಪ್ತಿಯಲ್ಲಿ ಇರುವ ಕೊಳಗೇರಿಗಳಲ್ಲಿ ಎಷ್ಟು ಮಕ್ಕಳು ಶಾಲೆಗೆ ಹೋಗುತ್ತಿದ್ದಾರೆ? ಎಷ್ಟು ಮಕ್ಕಳು ಮನೆಯಲ್ಲೇ ಇದ್ದಾರೆಂಬ ನಿಖರ ಮಾಹಿತಿ ಸಂಗ್ರಹಿಸಬೇಕು. ಅಂತಹ ಜಾಗಗಳಿಗೆ ಶಿಕ್ಷಕರನ್ನು ಕಳುಹಿಸಿ ಆ ಮಕ್ಕಳಿಗೆ ಶಿಕ್ಷಣ ನೀಡುವ  ವ್ಯವಸ್ಥೆ ಕಲ್ಪಿಸಬೇಕೆಂದು ತಿಳಿಸಿದ್ದಾರೆ. 

ನಗರದ ಪಾದಚಾರಿ ಮಾರ್ಗ, ರೈಲ್ವೇ ನಿಲ್ದಾಣ, ಬಸ್ ನಿಲ್ದಾಣ, ತಂಗುದಾಣ, ಸಬ್ ವೇ, ಮಾರುಕಟ್ಟೆ ಸೇರಿದಂತೆ ಇನ್ನಿತರೆ ಸ್ಥಳಗಳಲ್ಲಿ ಮಲಗುವ ಮಕ್ಕಳು, ವಯಸ್ಕರು ಎಲ್ಲಿಂದ ಬಂದಿದ್ದಾರೆ. ಯಾವ ಕಾರಣಕ್ಕಾಗಿ ಭಿಕ್ಷೆ ಬೇಡುತ್ತಿದ್ದಾರೆ, ರಾಜ್ಯದವರು ಹಾಗೂ ಹೊರ ರಾಜ್ಯದಿಂದ ಬಂದವರೆಷ್ಟು ಎಂಬಿತ್ಯಾದಿ ಸಮರ್ಪಕ ಮಾಹಿತಿಯನ್ನು ಛಾಯಾಚಿತ್ರದ ಸಮೇತ ಸಮೀಕ್ಷೆ ನಡೆಸಿ ವರದಿ ಮಾಡಬೇಕು. ಜೊತೆಗೆ ರಾತ್ರಿ ವೇಳೆ ಆಶ್ರಯ ಕಲ್ಪಿಸಲು ಇರುವ ಪಾಲಿಕೆಯ ರಾತ್ರಿ ತಂಗುದಾಣಗಳಲ್ಲಿ ಮಲಗಲು ವ್ಯವಸ್ಥೆ ಮಾಡಬೇಕೆಂದು ಸೂಚಿಸಿದ್ದಾರೆ. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

SCROLL FOR NEXT