ಹುಲಿ ಸಂರಕ್ಷಿತ ಪ್ರದೇಶ 
ರಾಜ್ಯ

ಚಾಮರಾಜನಗರ: 'ಹಕ್ಕಿ ಹಬ್ಬ'ಕ್ಕೆ ದಿನಾಂಕ ಫಿಕ್ಸ್

ಪಕ್ಷಿಗಳ ಸ್ವರ್ಗವೆಂದೇ ಕರೆಯಲ್ಪಡುವ ಬಿಳಿಗಿರಿರಂಗನಾಥ ಬೆಟ್ಟದ ಹುಲಿ ಸಂರಕ್ಷಿತ ಪ್ರದೇಶದಲ್ಲಿ ಇದೇ ಜನವರಿ 5 ರಿಂದ 7 ರವರೆಗೆ ಮೂರು ದಿನಗಳ ಕಾಲ ಹಕ್ಕಿ ಹಬ್ಬ ನಡೆಯಲಿದೆ.

ಚಾಮರಾಜನಗರ: ಪಕ್ಷಿಗಳ ಸ್ವರ್ಗವೆಂದೇ ಕರೆಯಲ್ಪಡುವ ಬಿಳಿಗಿರಿರಂಗನಾಥ ಬೆಟ್ಟದ ಹುಲಿ ಸಂರಕ್ಷಿತ ಪ್ರದೇಶದಲ್ಲಿ ಇದೇ ಜನವರಿ 5 ರಿಂದ 7 ರವರೆಗೆ ಮೂರು ದಿನಗಳ ಕಾಲ ಹಕ್ಕಿ ಹಬ್ಬ ನಡೆಯಲಿದೆ. 

ಅರಣ್ಯ ಇಲಾಖೆ ಹಾಗೂ ರಾಜ್ಯ ಪರಿಸರ ಪ್ರವಾಸೋದ್ಯಮ ಅಭಿವೃದ್ಧಿ ನಿಗಮವು ಜಂಟಿಯಾಗಿ ಈ ಹಬ್ಬವನ್ನು ಆಯೋಜಿಸಿದ್ದು, ಈ ಬಾರಿ ಹೊಸ ಪ್ರಬೇಧದ ಹಕ್ಕಿಗಳು ಜನರ ಕಣ್ಮನ ಸೆಳೆಯಲಿವೆ. 

ಪಕ್ಷಿಗಳ ಸಂತತಿ ಸಂರಕ್ಷಣೆ, ಅಧ್ಯಯನ ಹಾಗೂ ಪಕ್ಷಿ ವೀಕ್ಷಣೆಯನ್ನು ಉತ್ತೇಜಿಸುವ ಸಲುವಾಗಿ ಪ್ರತಿ ವರ್ಷ ರಾಜ್ಯ ಮಟ್ಟದಲ್ಲಿ ಕಾರ್ಯಕ್ರಮವನ್ನು ಆಯೋಜಿಸಲಾಗುತ್ತಿದ್ದು, ಇದು 7 ವರ್ಷದ ಹಕ್ಕಿ ಹಬ್ಬವಾಗಿದೆ. 

ಈಗಾಗಲೇ ರಂಗನತಿಟ್ಟು, ದಾಂಡೇಲಿ, ಬಳ್ಳಾರಿ, ಮಂಗಳೂರು, ಚಿಕ್ಕಬಳ್ಳಾಪುರ, ಕಾರವಾರಗಳಲ್ಲಿ ಹಕ್ಕಿ ಹಬ್ಬ ನಡೆದಿದ್ದು, ಚಾಮರಾಜನಗರ ಜಿಲ್ಲೆಯಲ್ಲಿ ನಡೆಯುತ್ತಿರುವುದು ಇದೇ ಮೊದಲಾಗಿದೆ. 

ಮೂರು ದಿನಗಳ ಕಾಲ ನಡೆಯುವ ಈ ಕಾರ್ಯಕ್ರಮದಲ್ಲಿ ಪಕ್ಷಿಗಳ ಬಗ್ಗೆ ಸಂವಾದ, ಉಪನ್ಯಾಸ ಹಾಗೂ ಅರಣ್ಯದ ವಿವಿಧ ಕಡೆಗಳಲ್ಲಿ ಹಕ್ಕಿಗಳ ವೀಕ್ಷಣೆಗೆ ಅವಕಾಶ ಇರಲಿದೆ. ರಾಜ್ಯ ಹಾಗೂ ಹೊರ ರಾಜ್ಯಗಳ ಪಕ್ಷಿ ವೀಕ್ಷಕರು, ಸಂಶೋಧಕರು, ಛಾಯಾಗ್ರಾಹಕರು ಇದರಲ್ಲಿ ಭಾಗವಹಿಸುವ ನಿರೀಕ್ಷೆ ಇದೆ. 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

30 ನಿಮಿಷಗಳಲ್ಲಿ ಹಿಂದಕ್ಕೆ ಹೋಗಿ: ಶಾಂತಿ ಮಾತುಕತೆ ಮಧ್ಯೆ ಹಾರ್ಮುಜ್'ಗೆ ನುಗ್ಗಿದ ಅಮೆರಿಕದ Destroyer ಯುದ್ಧನೌಕೆಗೆ ಇರಾನ್ ಎಚ್ಚರಿಕೆ!

"ಇರಾನ್ ದೊಡ್ಡ ಮಟ್ಟದಲ್ಲಿ ಸೋಲುತ್ತಿದೆ": ಮಾತುಕತೆ ಮುಕ್ತಾಯಕ್ಕೂ ಮುನ್ನ ಟ್ರಂಪ್ ಘೋಷಣೆ

IPL 2026: ಸ್ಯಾಮ್ಸನ್ ಬ್ಯಾಟಿಂಗ್ ಅಬ್ಬರ; DC ವಿರುದ್ಧ CSK ಗೆ 23 ರನ್ ಗಳ ಭರ್ಜರಿ ಜಯ

ಖ್ಯಾತ ಗಾಯಕಿ ಆಶಾ ಭೋಸ್ಲೆಗೆ ಹೃದಯಾಘಾತ: ಮುಂಬೈನ ಬ್ರೀಚ್ ಕ್ಯಾಂಡಿ ಆಸ್ಪತ್ರೆಗೆ ದಾಖಲು

IPL 2026: ಚೆನ್ನೈ ಪರ ಸಂಜು ಸ್ಯಾಮ್ಸನ್ ಸ್ಫೋಟಕ ಬ್ಯಾಟಿಂಗ್; MS ಧೋನಿ ದಾಖಲೆ ಪುಡಿ; ದಿಗ್ಗಜರ ಗುಂಪಿಗೆ ಸೇರ್ಪಡೆ

SCROLL FOR NEXT