ಹುಲಿ ಸಂರಕ್ಷಿತ ಪ್ರದೇಶ 
ರಾಜ್ಯ

ಚಾಮರಾಜನಗರ: 'ಹಕ್ಕಿ ಹಬ್ಬ'ಕ್ಕೆ ದಿನಾಂಕ ಫಿಕ್ಸ್

ಪಕ್ಷಿಗಳ ಸ್ವರ್ಗವೆಂದೇ ಕರೆಯಲ್ಪಡುವ ಬಿಳಿಗಿರಿರಂಗನಾಥ ಬೆಟ್ಟದ ಹುಲಿ ಸಂರಕ್ಷಿತ ಪ್ರದೇಶದಲ್ಲಿ ಇದೇ ಜನವರಿ 5 ರಿಂದ 7 ರವರೆಗೆ ಮೂರು ದಿನಗಳ ಕಾಲ ಹಕ್ಕಿ ಹಬ್ಬ ನಡೆಯಲಿದೆ.

ಚಾಮರಾಜನಗರ: ಪಕ್ಷಿಗಳ ಸ್ವರ್ಗವೆಂದೇ ಕರೆಯಲ್ಪಡುವ ಬಿಳಿಗಿರಿರಂಗನಾಥ ಬೆಟ್ಟದ ಹುಲಿ ಸಂರಕ್ಷಿತ ಪ್ರದೇಶದಲ್ಲಿ ಇದೇ ಜನವರಿ 5 ರಿಂದ 7 ರವರೆಗೆ ಮೂರು ದಿನಗಳ ಕಾಲ ಹಕ್ಕಿ ಹಬ್ಬ ನಡೆಯಲಿದೆ. 

ಅರಣ್ಯ ಇಲಾಖೆ ಹಾಗೂ ರಾಜ್ಯ ಪರಿಸರ ಪ್ರವಾಸೋದ್ಯಮ ಅಭಿವೃದ್ಧಿ ನಿಗಮವು ಜಂಟಿಯಾಗಿ ಈ ಹಬ್ಬವನ್ನು ಆಯೋಜಿಸಿದ್ದು, ಈ ಬಾರಿ ಹೊಸ ಪ್ರಬೇಧದ ಹಕ್ಕಿಗಳು ಜನರ ಕಣ್ಮನ ಸೆಳೆಯಲಿವೆ. 

ಪಕ್ಷಿಗಳ ಸಂತತಿ ಸಂರಕ್ಷಣೆ, ಅಧ್ಯಯನ ಹಾಗೂ ಪಕ್ಷಿ ವೀಕ್ಷಣೆಯನ್ನು ಉತ್ತೇಜಿಸುವ ಸಲುವಾಗಿ ಪ್ರತಿ ವರ್ಷ ರಾಜ್ಯ ಮಟ್ಟದಲ್ಲಿ ಕಾರ್ಯಕ್ರಮವನ್ನು ಆಯೋಜಿಸಲಾಗುತ್ತಿದ್ದು, ಇದು 7 ವರ್ಷದ ಹಕ್ಕಿ ಹಬ್ಬವಾಗಿದೆ. 

ಈಗಾಗಲೇ ರಂಗನತಿಟ್ಟು, ದಾಂಡೇಲಿ, ಬಳ್ಳಾರಿ, ಮಂಗಳೂರು, ಚಿಕ್ಕಬಳ್ಳಾಪುರ, ಕಾರವಾರಗಳಲ್ಲಿ ಹಕ್ಕಿ ಹಬ್ಬ ನಡೆದಿದ್ದು, ಚಾಮರಾಜನಗರ ಜಿಲ್ಲೆಯಲ್ಲಿ ನಡೆಯುತ್ತಿರುವುದು ಇದೇ ಮೊದಲಾಗಿದೆ. 

ಮೂರು ದಿನಗಳ ಕಾಲ ನಡೆಯುವ ಈ ಕಾರ್ಯಕ್ರಮದಲ್ಲಿ ಪಕ್ಷಿಗಳ ಬಗ್ಗೆ ಸಂವಾದ, ಉಪನ್ಯಾಸ ಹಾಗೂ ಅರಣ್ಯದ ವಿವಿಧ ಕಡೆಗಳಲ್ಲಿ ಹಕ್ಕಿಗಳ ವೀಕ್ಷಣೆಗೆ ಅವಕಾಶ ಇರಲಿದೆ. ರಾಜ್ಯ ಹಾಗೂ ಹೊರ ರಾಜ್ಯಗಳ ಪಕ್ಷಿ ವೀಕ್ಷಕರು, ಸಂಶೋಧಕರು, ಛಾಯಾಗ್ರಾಹಕರು ಇದರಲ್ಲಿ ಭಾಗವಹಿಸುವ ನಿರೀಕ್ಷೆ ಇದೆ. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

SCROLL FOR NEXT