ಸಾಂದರ್ಭಿಕ ಚಿತ್ರ 
ರಾಜ್ಯ

ದೇವಾಲಯಗಳಲ್ಲಿ ಹಣ ದುರ್ಬಳಕೆ, ಕ್ರಿಮಿನಲ್ ಮೊಕದ್ದಮೆ- ಮುಜರಾಯಿ ಇಲಾಖೆ ಎಚ್ಚರಿಕೆ

ರಾಜ್ಯದ ಧಾರ್ಮಿಕ ದತ್ತಿ ಇಲಾಖೆ ವ್ಯಾಪ್ತಿಗೆ ಒಳಪಡುವ ಅಧಿಸೂಚಿತ ದೇವಾಲಯಗಳಲ್ಲಿ ಸಂಗ್ರಹವಾಗುವ ಹಣವನ್ನು ಖಾಸಗಿ ವಲಯದಿಂದ ನಿರ್ವಹಣೆ ಮಾಡುತ್ತಿರುವ ಬಗ್ಗೆ ವ್ಯಾಪಕ ದೂರುಗಳು ಬಂದಿದ್ದು, ಹಣ ದುರ್ಬಳಕೆಯಾದರೆ ಕಠಿಣ ಕ್ರಿಮಿನಲ್ ಕ್ರಮ ಕೈಗೊಳ್ಳುವುದಾಗಿ ಮುಜರಾಯಿ ಇಲಾಖೆ ಎಚ್ಚರಿಕೆ ನೀಡಿದೆ.

ಬೆಂಗಳೂರು: ರಾಜ್ಯದ ಧಾರ್ಮಿಕ ದತ್ತಿ ಇಲಾಖೆ ವ್ಯಾಪ್ತಿಗೆ ಒಳಪಡುವ ಅಧಿಸೂಚಿತ ದೇವಾಲಯಗಳಲ್ಲಿ ಸಂಗ್ರಹವಾಗುವ ಹಣವನ್ನು ಖಾಸಗಿ ವಲಯದಿಂದ ನಿರ್ವಹಣೆ ಮಾಡುತ್ತಿರುವ ಬಗ್ಗೆ ವ್ಯಾಪಕ ದೂರುಗಳು ಬಂದಿದ್ದು, ಹಣ ದುರ್ಬಳಕೆಯಾದರೆ ಕಠಿಣ ಕ್ರಿಮಿನಲ್ ಕ್ರಮ ಕೈಗೊಳ್ಳುವುದಾಗಿ ಮುಜರಾಯಿ ಇಲಾಖೆ ಎಚ್ಚರಿಕೆ ನೀಡಿದೆ.

ಈ ಕುರಿತು ಸುತ್ತೋಲೆ ಹೊರಡಿಸಲಾಗಿದ್ದು, ಮುಜರಾಯಿ ದೇವಾಲಯಗಳ ವ್ಯಾಪ್ತಿಯಲ್ಲಿ ನಡೆಯುವ ಜಾತ್ರೆ, ರಥೋತ್ಸವ, ಉತ್ಸವ ಹಾಗೂ ಇತರೆ ವಿಶೇಷ ಕಾರ್ಯಕ್ರಮಗಳಂದು ಖಾಸಗಿ ವ್ಯಕ್ತಿಗಳು ಹುಂಡಿಗಳನ್ನು ಇಟ್ಟು ಹಣ ಸಂಗ್ರಹ ಮಾಡುತ್ತಿರುವ ಬಗ್ಗೆ ದೂರುಗಳು ಬಂದಿವೆ ಇದಕ್ಕೆ ಅವಕಾಶ ಕಲ್ಪಿಸಬಾರದು ಎಂದು ಹೇಳಿದೆ. 

ಯಾವುದೇ ವ್ಯಕ್ತಿ ಸಂಸ್ಥೆ, ಸಮಿತಿ ಅಥವಾ ಅಭಿವೃದ್ಧಿ ಸಂಸ್ಥೆಯ ಹೆಸರಿನಲ್ಲಿ ಸೇವಾ ನಿಧಿಯನ್ನು ಸಂಗ್ರಹಿಸುವ ಅಥವಾ ದೇಣಿಗೆಯನ್ನು ಕ್ರೋಢೀಕರಣ ಮಾಡಲು ಅವಕಾಶವಿಲ್ಲ. ಇಂತಹ ಪ್ರಕರಣಗಳು ಕಂಡು ಬಂದಲ್ಲಿ ಕ್ರಿಮಿನಲ್ ಮೊಕದ್ದಮೆಗಳನ್ನು ದಾಖಲಿಸುವಂತೆ ಧಾರ್ಮಿಕ ದತ್ತಿ ಇಲಾಖೆ ವ್ಯಾಪ್ತಿಗೆ ಒಳಪಡುವ ದೇವಾಲಯಗಳ ಕಾರ್ಯನಿರ್ವಾಹಕ ಅಧಿಕಾರಿಗಳು, ಆಡಳಿತಾಧಿಕಾರಿಗಳು, ವ್ಯವಸ್ಥಾಪನಾ ಸಮಿತಿಗೆ ಸೂಚನೆ ನೀಡಲಾಗಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ನನ್ನ-ಕಾಂಗ್ರೆಸ್ ಮಧ್ಯೆ ಭಕ್ತ- ಭಗವಂತನ ಸಂಬಂಧ ಇದೆ, RSS ಗೀತೆ ಹಾಡಿದ್ದಕ್ಕೆ ನೋವಾಗಿದ್ದರೆ ಕ್ಷಮೆ ಕೇಳುತ್ತೇನೆ: ಡಿಕೆ ಶಿವಕುಮಾರ್

ಭಾರತದ ಮೇಲೆ ಶೇ. 50 ರಷ್ಟು ಸುಂಕ ನಾಳೆ ಜಾರಿ, ಅಮೆರಿಕ ಕರಡು ಸೂಚನೆ; ಔಷಧ, ಎಲೆಕ್ಟ್ರಾನಿಕ್ಸ್‌ ವಸ್ತುಗಳಿಗೆ ವಿನಾಯಿತಿ

ಪದಕ ಹಾಕಿಸಿಕೊಳ್ಳಲು ನಿರಾಕರಿಸಿದ DMK ಸಚಿವನ ಪುತ್ರ, BJP ನಾಯಕ Annamalai ಹೇಳಿದ್ದೇನು? Video

ಧರ್ಮಸ್ಥಳ ಬುರುಡೆ ಕೇಸು: ಮಹೇಶ್ ತಿಮರೋಡಿ ನಿವಾಸದಲ್ಲಿ ಆರೋಪಿ ಚಿನ್ನಯ್ಯನ ಮೊಬೈಲ್ ಪತ್ತೆ

Gaza Hospital Strike: ಹಮಾಸ್ ಸೋಲಿಸುವುದಷ್ಟೇ ನಮ್ಮ ಗುರಿ, ನಾಗರೀಕರನ್ನು ಗೌರವಿಸುತ್ತೇವೆ; ದಾಳಿ ಕುರಿತು ಮೊದಲ ಬಾರಿಗೆ ಇಸ್ರೇಲ್ ವಿಷಾದ

SCROLL FOR NEXT