ಸಾಂದರ್ಭಿಕ ಚಿತ್ರ 
ರಾಜ್ಯ

ದೇವಾಲಯಗಳಲ್ಲಿ ಹಣ ದುರ್ಬಳಕೆ, ಕ್ರಿಮಿನಲ್ ಮೊಕದ್ದಮೆ- ಮುಜರಾಯಿ ಇಲಾಖೆ ಎಚ್ಚರಿಕೆ

ರಾಜ್ಯದ ಧಾರ್ಮಿಕ ದತ್ತಿ ಇಲಾಖೆ ವ್ಯಾಪ್ತಿಗೆ ಒಳಪಡುವ ಅಧಿಸೂಚಿತ ದೇವಾಲಯಗಳಲ್ಲಿ ಸಂಗ್ರಹವಾಗುವ ಹಣವನ್ನು ಖಾಸಗಿ ವಲಯದಿಂದ ನಿರ್ವಹಣೆ ಮಾಡುತ್ತಿರುವ ಬಗ್ಗೆ ವ್ಯಾಪಕ ದೂರುಗಳು ಬಂದಿದ್ದು, ಹಣ ದುರ್ಬಳಕೆಯಾದರೆ ಕಠಿಣ ಕ್ರಿಮಿನಲ್ ಕ್ರಮ ಕೈಗೊಳ್ಳುವುದಾಗಿ ಮುಜರಾಯಿ ಇಲಾಖೆ ಎಚ್ಚರಿಕೆ ನೀಡಿದೆ.

ಬೆಂಗಳೂರು: ರಾಜ್ಯದ ಧಾರ್ಮಿಕ ದತ್ತಿ ಇಲಾಖೆ ವ್ಯಾಪ್ತಿಗೆ ಒಳಪಡುವ ಅಧಿಸೂಚಿತ ದೇವಾಲಯಗಳಲ್ಲಿ ಸಂಗ್ರಹವಾಗುವ ಹಣವನ್ನು ಖಾಸಗಿ ವಲಯದಿಂದ ನಿರ್ವಹಣೆ ಮಾಡುತ್ತಿರುವ ಬಗ್ಗೆ ವ್ಯಾಪಕ ದೂರುಗಳು ಬಂದಿದ್ದು, ಹಣ ದುರ್ಬಳಕೆಯಾದರೆ ಕಠಿಣ ಕ್ರಿಮಿನಲ್ ಕ್ರಮ ಕೈಗೊಳ್ಳುವುದಾಗಿ ಮುಜರಾಯಿ ಇಲಾಖೆ ಎಚ್ಚರಿಕೆ ನೀಡಿದೆ.

ಈ ಕುರಿತು ಸುತ್ತೋಲೆ ಹೊರಡಿಸಲಾಗಿದ್ದು, ಮುಜರಾಯಿ ದೇವಾಲಯಗಳ ವ್ಯಾಪ್ತಿಯಲ್ಲಿ ನಡೆಯುವ ಜಾತ್ರೆ, ರಥೋತ್ಸವ, ಉತ್ಸವ ಹಾಗೂ ಇತರೆ ವಿಶೇಷ ಕಾರ್ಯಕ್ರಮಗಳಂದು ಖಾಸಗಿ ವ್ಯಕ್ತಿಗಳು ಹುಂಡಿಗಳನ್ನು ಇಟ್ಟು ಹಣ ಸಂಗ್ರಹ ಮಾಡುತ್ತಿರುವ ಬಗ್ಗೆ ದೂರುಗಳು ಬಂದಿವೆ ಇದಕ್ಕೆ ಅವಕಾಶ ಕಲ್ಪಿಸಬಾರದು ಎಂದು ಹೇಳಿದೆ. 

ಯಾವುದೇ ವ್ಯಕ್ತಿ ಸಂಸ್ಥೆ, ಸಮಿತಿ ಅಥವಾ ಅಭಿವೃದ್ಧಿ ಸಂಸ್ಥೆಯ ಹೆಸರಿನಲ್ಲಿ ಸೇವಾ ನಿಧಿಯನ್ನು ಸಂಗ್ರಹಿಸುವ ಅಥವಾ ದೇಣಿಗೆಯನ್ನು ಕ್ರೋಢೀಕರಣ ಮಾಡಲು ಅವಕಾಶವಿಲ್ಲ. ಇಂತಹ ಪ್ರಕರಣಗಳು ಕಂಡು ಬಂದಲ್ಲಿ ಕ್ರಿಮಿನಲ್ ಮೊಕದ್ದಮೆಗಳನ್ನು ದಾಖಲಿಸುವಂತೆ ಧಾರ್ಮಿಕ ದತ್ತಿ ಇಲಾಖೆ ವ್ಯಾಪ್ತಿಗೆ ಒಳಪಡುವ ದೇವಾಲಯಗಳ ಕಾರ್ಯನಿರ್ವಾಹಕ ಅಧಿಕಾರಿಗಳು, ಆಡಳಿತಾಧಿಕಾರಿಗಳು, ವ್ಯವಸ್ಥಾಪನಾ ಸಮಿತಿಗೆ ಸೂಚನೆ ನೀಡಲಾಗಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಬಿಜೆಪಿ ಸಂಸದೀಯ ಮಂಡಳಿಯಲ್ಲಿ ಮಹತ್ತರ ಬದಲಾವಣೆ ಸಾಧ್ಯತೆ; ನಾಲ್ವರು ಮುಖ್ಯಮಂತ್ರಿಗಳಿಗೆ ಸ್ಥಾನ?

ಇರಾನ್‌ ತೈಲ ವಹಿವಾಟಿಗೆ ಅಮೆರಿಕಾ ಬ್ರೇಕ್: ಭಾರತದ 4 ಕಂಪನಿಗಳು ಕಪ್ಪುಪಟ್ಟಿಗೆ, 3 ಪ್ರಜೆಗಳ ಮೇಲೂ ನಿರ್ಬಂಧ..!

"ಮದುವೆ ಅಂದ್ರೆ ಗುಲಾಮಗಿರಿಯಲ್ಲ, ಮನೆಗೆಲಸ ಮಾಡು-ಅತ್ತೆ-ಮಾವನ ನೋಡ್ಕೋ ಅನ್ನೋಕೆ ಗಂಡನಿಗೆ ಹಕ್ಕಿಲ್ಲ": ಹೈಕೋರ್ಟ್ ಮಹತ್ವದ ತೀರ್ಪು..!

ಬಿಡದಿ ಟೌನ್‌ಶಿಪ್‌ ಯೋಜನೆ: ರೈತರ ಭೂಮಿ ಕಸಿಯಲ್ಲ, denotification ಮಾಡಲ್ಲ- ಸಿಎಂ ಡಿಕೆ. ಶಿವಕುಮಾರ್ ಸ್ಪಷ್ಟನೆ

Operation Sindoor; Kirana Hills ಪರಮಾಣು ನೆಲೆಗೆ ಅಪ್ಪಳಿಸಿದ ಭಾರತದ ಡ್ರೋನ್? ಬೆಚ್ಚಿಬಿದ್ದ ಪಾಕಿಸ್ತಾನ..! Indian Army ಹೇಳಿದ್ದೇನು?