ಸಿದ್ದರಾಮಯ್ಯ 
ರಾಜ್ಯ

ಬೀಫ್ ಸೇವನೆ ಹೇಳಿಕೆ: ಕೊಡವ ಸಮುದಾಯಕ್ಕೆ ನೋವಾಗಿದ್ದರೆ ವಿಷಾದಿಸುತ್ತೇನೆ - ಮಾಜಿ ಸಿಎಂ ಸಿದ್ದರಾಮಯ್ಯ

ಕೊಡವರು ಬೀಫ್ ತಿನ್ನುತ್ತಾರೆ ಎನ್ನುವ ತಮ್ಮ ಹೇಳಿಕೆ ತಪ್ಪು ಗ್ರಹಿಕೆಯಿಂದ ವರದಿಯಾಗಿದ್ದು, ಇದರಿಂದ ಕೊಡವ ಸಮುದಾಯಕ್ಕೆ ನೋವಾಗಿದ್ದರೆ ವಿಷಾದಿಸುತ್ತೇನೆ ಎಂದು ಪ್ರತಿಪಕ್ಷದ ನಾಯಕ ಸಿದ್ದರಾಮಯ್ಯ ಹೇಳಿದ್ದಾರೆ.

ಬೆಂಗಳೂರು: ಕೊಡವರು ಬೀಫ್ ತಿನ್ನುತ್ತಾರೆ ಎನ್ನುವ ತಮ್ಮ ಹೇಳಿಕೆ ತಪ್ಪು ಗ್ರಹಿಕೆಯಿಂದ ವರದಿಯಾಗಿದ್ದು, ಇದರಿಂದ ಕೊಡವ ಸಮುದಾಯಕ್ಕೆ ನೋವಾಗಿದ್ದರೆ ವಿಷಾದಿಸುತ್ತೇನೆ ಎಂದು ಪ್ರತಿಪಕ್ಷದ ನಾಯಕ ಸಿದ್ದರಾಮಯ್ಯ ಹೇಳಿದ್ದಾರೆ.

ಈ ಕುರಿತು ಟ್ವೀಟ್ ಮಾಡಿರುವ ಅವರು, ನನ್ನ ನೆರೆಯ ಜಿಲ್ಲೆಯಾದ ಕೊಡಗಿನ ಸಂಸ್ಕೃತಿಯ ಬಗ್ಗೆ  ಅರಿವಿದೆ. ವಿಶೇಷವಾದ ಗೌರವವೂ ಇದೆ. ಆಡು, ಕುರಿ, ಕೋಳಿ, ಹಂದಿ, ದನ ಹೀಗೆ ನಮ್ಮಲ್ಲಿ ಭಿನ್ನ ಆಹಾರ ಸಂಸ್ಕೃತಿ ಇದೆ. ಆಹಾರಕ್ಕೆ ಜಾತಿ ಧರ್ಮಗಳನ್ನು ಗಂಟು ಹಾಕುವುದು ತಪ್ಪು ಎಂಬರ್ಥದಲ್ಲಿ ನಾನು ಹೇಳಿದ್ದೇನೆಯೇ ಹೊರತು ಕೊಡವರು ಬೀಫ್ ತಿನ್ನುತ್ತಾರೆ ಎಂದು ಹೇಳಿಲ್ಲ ಎಂದು ಸಿದ್ದರಾಮಯ್ಯ ಸ್ಪಷ್ಟನೆ ನೀಡಿದ್ದಾರೆ.

ಮುಸಲ್ಮಾನರು ಮಾತ್ರವಲ್ಲ, ದಲಿತರು, ಕೊಡವರು ಬೀಫ್ ತಿನ್ನುತ್ತಾರೆ ಎಂದು ನಿನ್ನೆ ಹೇಳಿಕೆ ನೀಡಿದ್ದರು. ಇದಕ್ಕೆ ಸಂಸದ ಪ್ರತಾಪ್ ಸಿಂಹ, ಶಾಸಕ ಅಪ್ಪಚ್ಚು ರಂಜನ್ ಸೇರಿದಂತೆ ಹಲವರು ಟೀಕಾಪ್ರಹಾರ ನಡೆಸಿದ್ದರು. ಇದರಿಂದ ಎಚ್ಚೆತ್ತುಕೊಂಡ ಸಿದ್ದರಾಮಯ್ಯ ಕ್ಷಮೆಯಾಚಿಸಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಜಮ್ಮುವಿನಾದ್ಯಂತ ಭಾರೀ ಮಳೆ: ಪ್ರವಾಹ, ಭೂಕುಸಿತದಿಂದ ಮೂವರು ಸಾವು; ಕೊಚ್ಚಿ ಹೋದ ಸೇತುವೆ; Video

Indian Navyಗೆ ಮತ್ತಷ್ಟು ಬಲ: INS Udaygiri, INS Himgiri ಯುದ್ಧನೌಕೆಗಳು ಸೇರ್ಪಡೆ!

ಬಿಹಾರ: ಇನ್ನು 40-50 ವರ್ಷ ಅಧಿಕಾರದಲ್ಲಿ ಇರ್ತೀವಿ ಅಂತಾ ಅಮಿತ್ ಶಾ ಗೆ ಹೇಗೆ ಗೊತ್ತು? ರಾಹುಲ್ ಗಾಂಧಿ

ಭ್ರಷ್ಟಾಚಾರ ಪ್ರಕರಣ: ಬಂಧಿತ ಶ್ರೀಲಂಕಾ ಮಾಜಿ ಅಧ್ಯಕ್ಷ ವಿಕ್ರಮಸಿಂಘೆಗೆ ಜಾಮೀನು

ನನ್ನ-ಕಾಂಗ್ರೆಸ್ ಮಧ್ಯೆ ಭಕ್ತ-ಭಗವಂತನ ಸಂಬಂಧ ಇದೆ; RSS ಗೀತೆ ಹಾಡಿದ್ದಕ್ಕೆ ನೋವಾಗಿದ್ದರೆ ಕ್ಷಮೆ ಕೇಳುತ್ತೇನೆ: ಡಿ.ಕೆ ಶಿವಕುಮಾರ್; Video

SCROLL FOR NEXT