ರಾಜ್ಯ

ತಮಿಳುನಾಡಿನಲ್ಲಿ ಟ್ರ್ಯಾಕ್ಟರ್ ಮಗುಚಿ ರಾಮನಗರದ ಐವರು ಮಹಿಳೆಯರು ದುರ್ಮರಣ

Vishwanath S

ರಾಮನಗರ: ತಮಿಳುನಾಡಿನಲ್ಲಿ ಟ್ರ್ಯಾಕ್ಟರ್ ಒಂದು ಮಗುಚಿ ಬಿದ್ದು ಅದರಲ್ಲಿದ್ದ ರಾಜ್ಯದ ಐವರು ಮಹಿಳೆಯರು ಸ್ಥಳದಲ್ಲೇ ಸಾವನ್ನಪ್ಪಿ, ಇತರ 15 ಮಂದಿ ಗಾಯಗೊಂಡಿರುವ ಘಟನೆ ಸೋಮವಾರ ನಡೆದಿದೆ.

ಕನಕಪುರ ತಾಲೂಕಿನ ಕಸಬಾ ಹೋಬಳಿ ಕೆರಳಾಳುಸಂದ್ರ ಗ್ರಾಮದ ನಿವಾಸಿಗಳಾದ ಮಲ್ಲಯ್ಯನವರ ಪತ್ನಿ ಈರಮ್ಮ(85), ಹಳೆಬೀದಿಯ ಹೊಸಬಮ್ಮ(75), ವೆಂಕಟೇಗೌಡರ ಪತ್ನಿ ಪುಟ್ಟನಿಂಗಮ್ಮ(60), ಜಗದೀಶ್‌ ಎಂಬವರ ಪತ್ನಿ ಗೌರಮ್ಮ(60), ಮಂಜುನಾಥ್‌ ಎಂಬವರ ಪತ್ನಿ ಮಂಗಳಾ(25) ಮೃತಪಟ್ಟವರು ಎಂದು ಗುರುತಿಸಲಾಗಿದೆ.

ಕೆರಳಾಳುಸಂದ್ರ ಗ್ರಾಮದ 15 ಮಂದಿ ಟ್ರ್ಯಾಕ್ಟರ್ ಮೂಲಕ ತಮಿಳುನಾಡಿನ ದಬ್ಬಗುಳೇಶ್ವರ ದೇವಾಲಯಕ್ಕೆ ಹೋಗಿದ್ದಾಗ  ಈ ದುರ್ಘಟನೆ ಸಂಭವಿಸಿದೆ.

SCROLL FOR NEXT