ಎನ್ಐಎ 
ರಾಜ್ಯ

ಬೆಂಗಳೂರು ಗಲಭೆ ಪ್ರಕರಣ: ಎನ್‍ಐಎಯಿಂದ ಎಸ್‌ಡಿಪಿಐ, ಪಿಎಫ್‌ಐನ 17 ಆರೋಪಿಗಳ ಬಂಧನ

ಕಳೆದ ಆಗಸ್ಟ್ 11 ರಂದು ಬೆಂಗಳೂರಿನ ಕೆ ಜಿ ಹಳ್ಳಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದ ಹಿಂಸಾತ್ಮಕ ದಾಳಿ ಮತ್ತು ಭಾರೀ ಗಲಭೆಯಲ್ಲಿ ಭಾಗಿಯಾಗಿದ್ದ ಆರೋಪದ ಮೇಲೆ ಎಸ್‌ಡಿಪಿಐ ಮತ್ತು ಪಿಎಫ್‌ಐನ 17 ಮುಖಂಡರು ಮತ್ತು ಕಾರ್ಯಕರ್ತರನ್ನು ಬಂಧಿಸಲಾಗಿದೆ.

ನವದೆಹಲಿ: ಕಳೆದ ಆಗಸ್ಟ್ 11 ರಂದು ಬೆಂಗಳೂರಿನ ಕೆ ಜಿ ಹಳ್ಳಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದ ಹಿಂಸಾತ್ಮಕ ದಾಳಿ ಮತ್ತು ಭಾರೀ ಗಲಭೆಯಲ್ಲಿ ಭಾಗಿಯಾಗಿದ್ದ ಆರೋಪದ ಮೇಲೆ ಎಸ್‌ಡಿಪಿಐ ಮತ್ತು ಪಿಎಫ್‌ಐನ 17 ಮುಖಂಡರು ಮತ್ತು ಕಾರ್ಯಕರ್ತರನ್ನು ಬಂಧಿಸಲಾಗಿದೆ ಎಂದು ಭಯೋತ್ಪಾದನೆ ನಿಗ್ರಹ ತನಿಖಾ ಸಂಸ್ಥೆ(ಎನ್‌ಐಎ) ತಿಳಿಸಿದೆ.

ಪುಲಕೇಶಿ ನಗರದ ಕಾಂಗ್ರೆಸ್‍ ಶಾಸಕ ಅಖಂಡ ಶ್ರೀನಿವಾಸಮೂರ್ತಿ ಅವರ ಸೋದರಳಿಯ ನವೀನ್ ಕಳುಹಿಸಿದ್ದ ಫೇಸ್ ಬುಕ್ ಪೋಸ್ಟ್ ಹಿನ್ನೆಲೆಯಲ್ಲಿ ಗಲಭೆಗಳು ನಡೆದಿದ್ದವು.

ಈ ಪ್ರಕರಣ ಮೂಲತಃ ಕೆ ಜಿ ಹಳ್ಳಿ ಪೊಲೀಸ್ ಠಾಣೆಯಲ್ಲಿ ದಾಖಲಾಗಿದ್ದರೂ, ಸೆ 21 ರಂದು ಎನ್‍ಐಎ ಈ ಪ್ರಕರಣವನ್ನು ವಹಿಸಿಕೊಂಡು ತನಿಖೆ ಆರಂಭಿಸಿತ್ತು.

ಎಸ್ ಡಿಪಿಐ ನಾಯಕ, ಕೆಜೆ ಹಳ್ಳಿ ವಾರ್ಡ್ ನ ಅಧ್ಯಕ್ಷ ಇಮ್ರಾನ್ ಅಹ್ಮದ್, ರುಬಾ ವಕಾಸ್, ನಾಗವಾರ ವಾರ್ಡ್ ನ ಎಸ್ ಪಿಡಿಐ ಅಧ್ಯಕ್ಷ ಅಬ್ಬಾಸ್ ಆತನ ಸಹಚರರಾದ ಅಜಿಲ್ ಪಾಷಾ, ಇರ್ಫಾನ್ ಖಾನ್ ಮತ್ತು ಅಕ್ಬರ್ ಖಾನ್ ಸೇರಿದಂತೆ 17 ಮಂದಿಯನ್ನು ಬಂಧಿಸಲಾಗಿದೆ. 

ಬೆಂಗಳೂರು ಹಿಂಸಾಚಾರಕ್ಕೂ ಮುನ್ನ ಆಗಸ್ಟ್ 11ರ ಸಂಜೆ ಸಭೆ ನಡೆಸಿದ್ದಾರೆ. ಬೆಂಗಳೂರಿನ ಥಣಿಸಂದ್ರದ ಮತ್ತು ಕೆಜಿ ಹಳ್ಳಿ ವಾರ್ಡ್ ಗಳಲ್ಲಿ ನಡೆದ ಸಭೆಗಳಲ್ಲಿ ಪಿತೂರಿ ನಡೆಸಿ, ಗಲಭೆಗೆ ಜನರನ್ನು ಸಜ್ಜುಗೊಳಿಸಿದ್ದಾರೆ. 

ಇನ್ನು ಆರೋಪಿಗಳಾದ ಸದ್ದಾಂ, ಸಯೀದ್ ಸೊಹೆಲ್, ಕಲೀಮುಲ್ಲಾ ಅಲಿಯಾಸ್ ಶಾರುಖ್ ಖಾನ್ ಫೇಸ್ ಬುಕ್, ಇನ್ ಸ್ಟಾಗ್ರಾಮ್ ಮತ್ತು ವಾಟ್ಸ್ ಆ್ಯಪ್ ಮೂಲಕ ಕೃತ್ಯಕ್ಕೆ ಪ್ರಚೋದನೆ ನೀಡಿ ಜನರು ಸೇರುವಂತೆ ಮಾಡಿದ್ದರು ಎಂದು ಎನ್ಐಎ ಹೇಳಿದೆ. 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ಆ ದೇಶಕ್ಕೂ ನಾನೇ 'ಹಂಗಾಮಿ' ಸರ್ವೋಚ್ಛ ನಾಯಕ': Donald Trump ಘೋಷಣೆ, ಬೆಚ್ಚಿಬಿದ್ದ ವೆನೆಜುವೆಲಾ!

PSLV-C62 ಮಿಷನ್ ವಿಫಲ: ಕೊನೆಯ ಹಂತದಲ್ಲಿ ಎದುರಾದ ಸಮಸ್ಯೆ, ISROಗೆ ಹಿನ್ನಡೆ

ಇತಿಹಾಸ ಕಲಿಯಬೇಕಿದ್ದರೆ ಕಾಲೇಜಿಗೆ ಹೋಗುತ್ತಾರೆ, ನಿಮ್ಮ ಬೋಧನೆಯ ಅಗತ್ಯವಿಲ್ಲ: ಪ್ರಧಾನಿ ಮೋದಿ ವಿರುದ್ಧ ಪ್ರಿಯಾಂಕ್ ಖರ್ಗೆ ವಾಗ್ದಾಳಿ

MGNREGA Row: ಯಾವಾಗ-ಎಲ್ಲಿ ಬೇಕಾದರೂ ಚರ್ಚೆಗೆ ಸಿದ್ಧ, ಡೈಲಾಗ್‌ ವೀರ HDK ಬಂದರೆ ಒಳ್ಳೆಯದು; ಡಿ.ಕೆ.ಶಿವಕುಮಾರ್

Positive Vibes ಗಾಗಿ ಮನೆಯಲ್ಲಿ ಯಾವ ಗಿಡ ಬೆಳಸಬೇಕು: ಮುಳ್ಳಿನ ಗಿಡಗಳಲ್ಲಿದೆಯೇ ನಕರಾತ್ಮಕ ಶಕ್ತಿ; ಮಲ್ಲಿಗೆ ಮತ್ತು ತುಳಸಿಗೆ ಸೂಕ್ತ ಸ್ಥಳ ಯಾವುದು?

SCROLL FOR NEXT