ಎನ್ಐಎ 
ರಾಜ್ಯ

ಬೆಂಗಳೂರು ಗಲಭೆ ಪ್ರಕರಣ: ಎನ್‍ಐಎಯಿಂದ ಎಸ್‌ಡಿಪಿಐ, ಪಿಎಫ್‌ಐನ 17 ಆರೋಪಿಗಳ ಬಂಧನ

ಕಳೆದ ಆಗಸ್ಟ್ 11 ರಂದು ಬೆಂಗಳೂರಿನ ಕೆ ಜಿ ಹಳ್ಳಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದ ಹಿಂಸಾತ್ಮಕ ದಾಳಿ ಮತ್ತು ಭಾರೀ ಗಲಭೆಯಲ್ಲಿ ಭಾಗಿಯಾಗಿದ್ದ ಆರೋಪದ ಮೇಲೆ ಎಸ್‌ಡಿಪಿಐ ಮತ್ತು ಪಿಎಫ್‌ಐನ 17 ಮುಖಂಡರು ಮತ್ತು ಕಾರ್ಯಕರ್ತರನ್ನು ಬಂಧಿಸಲಾಗಿದೆ.

ನವದೆಹಲಿ: ಕಳೆದ ಆಗಸ್ಟ್ 11 ರಂದು ಬೆಂಗಳೂರಿನ ಕೆ ಜಿ ಹಳ್ಳಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದ ಹಿಂಸಾತ್ಮಕ ದಾಳಿ ಮತ್ತು ಭಾರೀ ಗಲಭೆಯಲ್ಲಿ ಭಾಗಿಯಾಗಿದ್ದ ಆರೋಪದ ಮೇಲೆ ಎಸ್‌ಡಿಪಿಐ ಮತ್ತು ಪಿಎಫ್‌ಐನ 17 ಮುಖಂಡರು ಮತ್ತು ಕಾರ್ಯಕರ್ತರನ್ನು ಬಂಧಿಸಲಾಗಿದೆ ಎಂದು ಭಯೋತ್ಪಾದನೆ ನಿಗ್ರಹ ತನಿಖಾ ಸಂಸ್ಥೆ(ಎನ್‌ಐಎ) ತಿಳಿಸಿದೆ.

ಪುಲಕೇಶಿ ನಗರದ ಕಾಂಗ್ರೆಸ್‍ ಶಾಸಕ ಅಖಂಡ ಶ್ರೀನಿವಾಸಮೂರ್ತಿ ಅವರ ಸೋದರಳಿಯ ನವೀನ್ ಕಳುಹಿಸಿದ್ದ ಫೇಸ್ ಬುಕ್ ಪೋಸ್ಟ್ ಹಿನ್ನೆಲೆಯಲ್ಲಿ ಗಲಭೆಗಳು ನಡೆದಿದ್ದವು.

ಈ ಪ್ರಕರಣ ಮೂಲತಃ ಕೆ ಜಿ ಹಳ್ಳಿ ಪೊಲೀಸ್ ಠಾಣೆಯಲ್ಲಿ ದಾಖಲಾಗಿದ್ದರೂ, ಸೆ 21 ರಂದು ಎನ್‍ಐಎ ಈ ಪ್ರಕರಣವನ್ನು ವಹಿಸಿಕೊಂಡು ತನಿಖೆ ಆರಂಭಿಸಿತ್ತು.

ಎಸ್ ಡಿಪಿಐ ನಾಯಕ, ಕೆಜೆ ಹಳ್ಳಿ ವಾರ್ಡ್ ನ ಅಧ್ಯಕ್ಷ ಇಮ್ರಾನ್ ಅಹ್ಮದ್, ರುಬಾ ವಕಾಸ್, ನಾಗವಾರ ವಾರ್ಡ್ ನ ಎಸ್ ಪಿಡಿಐ ಅಧ್ಯಕ್ಷ ಅಬ್ಬಾಸ್ ಆತನ ಸಹಚರರಾದ ಅಜಿಲ್ ಪಾಷಾ, ಇರ್ಫಾನ್ ಖಾನ್ ಮತ್ತು ಅಕ್ಬರ್ ಖಾನ್ ಸೇರಿದಂತೆ 17 ಮಂದಿಯನ್ನು ಬಂಧಿಸಲಾಗಿದೆ. 

ಬೆಂಗಳೂರು ಹಿಂಸಾಚಾರಕ್ಕೂ ಮುನ್ನ ಆಗಸ್ಟ್ 11ರ ಸಂಜೆ ಸಭೆ ನಡೆಸಿದ್ದಾರೆ. ಬೆಂಗಳೂರಿನ ಥಣಿಸಂದ್ರದ ಮತ್ತು ಕೆಜಿ ಹಳ್ಳಿ ವಾರ್ಡ್ ಗಳಲ್ಲಿ ನಡೆದ ಸಭೆಗಳಲ್ಲಿ ಪಿತೂರಿ ನಡೆಸಿ, ಗಲಭೆಗೆ ಜನರನ್ನು ಸಜ್ಜುಗೊಳಿಸಿದ್ದಾರೆ. 

ಇನ್ನು ಆರೋಪಿಗಳಾದ ಸದ್ದಾಂ, ಸಯೀದ್ ಸೊಹೆಲ್, ಕಲೀಮುಲ್ಲಾ ಅಲಿಯಾಸ್ ಶಾರುಖ್ ಖಾನ್ ಫೇಸ್ ಬುಕ್, ಇನ್ ಸ್ಟಾಗ್ರಾಮ್ ಮತ್ತು ವಾಟ್ಸ್ ಆ್ಯಪ್ ಮೂಲಕ ಕೃತ್ಯಕ್ಕೆ ಪ್ರಚೋದನೆ ನೀಡಿ ಜನರು ಸೇರುವಂತೆ ಮಾಡಿದ್ದರು ಎಂದು ಎನ್ಐಎ ಹೇಳಿದೆ. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Geneva ಸಭೆಯಲ್ಲಿ ಭಾರತದ ವಿರುದ್ಧ ಟೀಕೆ; ‘ರಾಜಕೀಯ ಪ್ರೇರಿತ ಹೇಳಿಕೆಗಳ ಒಪ್ಪಲ್ಲ’ ಎಂದ MEA, ವಿಶ್ವಸಂಸ್ಥೆ ಸಮಿತಿ ವಿರುದ್ಧ ಕಿಡಿ..!

'ವಿರೋಧವಿದ್ದರೂ ಮೋಹನ್ ಭಾಗವತ್ ಅಮೆರಿಕಕ್ಕೆ ಯಾಕೆ ಹೋದ್ರು? ಮಹಾರಾಷ್ಟ್ರ ಕಾಂಗ್ರೆಸ್ ಶಾಸಕ ನಾನಾ ಪಟೋಲೆ ಪ್ರಶ್ನೆ!

US ವಲಸೆ ನೀತಿ ಮತ್ತಷ್ಟು ಕಠಿಣ: ಅರ್ಜಿದಾರರಿಗೆ ಟ್ರಂಪ್‌ ಸರ್ಕಾರ ಶಾಕ್‌: ವಿಶ್ವದಾದ್ಯಂತ VISA ಸಂದರ್ಶನಗಳಿಗೆ ಬ್ರೇಕ್‌!

'ಟಾಕ್ಸಿಕ್' ಸಿನಿಮಾ ವಿರುದ್ಧ ಸುಳ್ಳು ಮಾಹಿತಿ ಪ್ರಕಟಿಸದಂತೆ ಕೋರ್ಟ್ ತಡೆಯಾಜ್ಞೆ!

TMCಗೆ ಸೆಡ್ಡು ಹೊಡೆದ ಬಂಡಾಯ ಸಂಸದರಿಗೆ ಶಾಕ್‌: 20 ಮಂದಿಗೆ ಲೋಕಸಭಾ ಸಚಿವಾಲಯ ನೋಟಿಸ್‌, 7 ದಿನಗಳೊಳಗೆ ಉತ್ತರಿಸುವಂತೆ ಸೂಚನೆ..!