ಹೈಕೋರ್ಟ್ 
ರಾಜ್ಯ

ಶಾಸಕರು, ಸಂಸದರ ವಿರುದ್ಧದ ಕ್ರಿಮಿನಲ್ ಕೇಸುಗಳನ್ನು ಹಿಂಪಡೆಯಲು ರಾಜ್ಯ ಸರ್ಕಾರಕ್ಕೆ ಹೈಕೋರ್ಟ್ ನಿರ್ಬಂಧ

ಸಂಸದರು, ಶಾಸಕರು ಸೇರಿದಂತೆ ಚುನಾಯಿತ ಪ್ರತಿನಿಧಿಗಳ ವಿರುದ್ಧದ ಕ್ರಿಮಿನಲ್ ಪ್ರಕರಣಗಳನ್ನು ಸಾಮೂಹಿಕವಾಗಿ ಹಿಂತೆಗೆದುಕೊಳ್ಳುವ ನಿರ್ಧಾರಕ್ಕೆ ಬಿಜೆಪಿ ನೇತೃತ್ವದ ಸರ್ಕಾರಕ್ಕೆ ಹೈಕೋರ್ಟ್ ತಡೆ ನೀಡಿದೆ. 

ಬೆಂಗಳೂರು: ಸಂಸದರು, ಶಾಸಕರು ಸೇರಿದಂತೆ ಚುನಾಯಿತ ಪ್ರತಿನಿಧಿಗಳ ವಿರುದ್ಧದ ಕ್ರಿಮಿನಲ್ ಪ್ರಕರಣಗಳನ್ನು ಸಾಮೂಹಿಕವಾಗಿ ಹಿಂತೆಗೆದುಕೊಳ್ಳುವ ನಿರ್ಧಾರಕ್ಕೆ ಬಿಜೆಪಿ ನೇತೃತ್ವದ ಸರ್ಕಾರಕ್ಕೆ ಹೈಕೋರ್ಟ್ ತಡೆ ನೀಡಿದೆ. 

ಮುಖ್ಯ ನ್ಯಾಯಮೂರ್ತಿ ಅಭಯ್ ಶ್ರೀನಿವಾಸ್ ಒಕಾ ಮತ್ತು ನ್ಯಾಯಮೂರ್ತಿ ಎಸ್ ವಿಶ್ವಜಿತ್ ಶೆಟ್ಟಿ ನೇತೃತ್ವದ ವಿಭಾಗೀಯ ಪೀಠ ಮಧ್ಯಂತರ ಆದೇಶ ನೀಡಿ, ಆರೋಪಿಗಳ ವಿರುದ್ಧ ಕೇಸನ್ನು ಆಗಸ್ಟ್ 31,2020ರ ಆದೇಶದ ಆಧಾರದ ಮೇಲೆ ಹಿಂತೆಗೆದುಕೊಳ್ಳದಂತೆ ರಾಜ್ಯ ಸರ್ಕಾರವನ್ನು ತಡೆದಿದೆ.

ಕೋರ್ಟ್ ಆದೇಶವನ್ನು ಪಾಲಿಸಲು ಸಮಯಾವಕಾಶವನ್ನು ಸರ್ಕಾರ ಕೇಳಿದೆ ಎಂದು ನ್ಯಾಯಪೀಠ ಹೇಳಿದೆ. ಅರ್ಜಿದಾರರಿಂದ ಮಧ್ಯಂತರ ಪರಿಹಾರಕ್ಕಾಗಿ ಕೋರಲಾಗಿದೆ. ಅದರಂತೆ, ಆಗಸ್ಟ್ 31, 2020 ರ ಆದೇಶದ ಆಧಾರದ ಮೇಲೆ ಯಾವುದೇ ಕ್ರಮಗಳನ್ನು ತೆಗೆದುಕೊಳ್ಳಬಾರದು ಎಂದು ನಿರ್ದೇಶಿಸುತ್ತೇವೆ ಎಂದು ನ್ಯಾಯಪೀಠ ಹೇಳಿದೆ.

61 ಕೇಸುಗಳನ್ನು ಹಿಂತೆಗೆದುಕೊಳ್ಳುವಂತೆ ಸಂಪುಟ ಸಮಿತಿಯಲ್ಲಿ ಸರ್ಕಾರ ತೆಗೆದುಕೊಂಡ ತೀರ್ಮಾನವನ್ನು ಪ್ರಶ್ನಿಸಿ ಪೀಪಲ್ಸ್ ಯೂನಿಯನ್ ಫಾರ್ ಸಿವಿಲ್ ಲಿಬರ್ಟೀಸ್ ಕರ್ನಾಟಕ(ಪಿಯುಸಿಎಲ್-ಕೆ) ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಸಿದ್ದರು. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ರಾಜ್ಯದಲ್ಲಿ ಮಳೆ ಅಭಾವ: ನಾಲ್ಕು ಕಂದಾಯ ವಿಭಾಗಗಳಲ್ಲಿ ಮೋಡ ಬಿತ್ತನೆ; 27 ಕೋಟಿ ರೂ ವೆಚ್ಚ- ಜಲ ಸಂಪನ್ಮೂಲ ಸಚಿವ ಚಲುವರಾಯಸ್ವಾಮಿ!

ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಪ್ರದೋಶ್ ಮಾಫಿ ಸಾಕ್ಷಿ ಅರ್ಜಿ ಅಂಗೀಕರಿಸಿದ ಕೋರ್ಟ್; 'ದಾಸ'ನಿಗೆ ಬಿಗ್ ಶಾಕ್!

Congress ಶಾಸಕ ಪ್ರದೀಪ್ ಈಶ್ವರ್ ವಿರುದ್ಧ ಜಾಮೀನು ರಹಿತ ಬಂಧನ ವಾರಂಟ್ ಜಾರಿ, ಬಂಧನ ಭೀತಿ!

ಭಾರತದಲ್ಲಿ ಫುಡ್‌ ಕಂಪನಿಗಳ ಲಾಬಿ: ಚಿಪ್ಸ್ ಮತ್ತು ಕೂಲ್ ಡ್ರಿಂಕ್ಸ್ ಮೇಲೆ ‘ರೆಡ್‌ ಅಲರ್ಟ್’ ಪ್ರಸ್ತಾವ ಕೈಬಿಟ್ಟ FSSAI, ಆಗಿದ್ದೇನು?

'ಬ್ರೋ, ನೀವು ಸುಮ್ಮನೆ ಸಮಯ ವ್ಯರ್ಥ ಮಾಡುತ್ತಿದ್ದೀರಿ': ಎರಡನೇ ಟೆಸ್ಟ್ ಪಂದ್ಯದಲ್ಲಿ ಶ್ರೀಲಂಕಾ ನಾಯಕನ ಕಾಲೆಳೆದ ಸರ್ಫರಾಜ್ ಖಾನ್!