ರಾಜ್ಯ

ತುಮಕೂರು: ಮದ್ಯ ಸೇವಿಸಿದ ಮೂವರು ಪೊಲೀಸರ ಅಮಾನತು

Vishwanath S

ತುಮಕೂರು: ಕರ್ತವ್ಯದಲ್ಲಿದ್ದಾಗ ಮದ್ಯ ಸೇವಿಸಿದ ಮೂವರು ಪೊಲೀಸರನ್ನು ಅಮಾನತುಗೊಳಿಸಲಾಗಿದೆ.

ಚಿಕ್ಕನಾಯಕನಹಳ್ಳಿ ಠಾಣೆ ಎಎಸ್‌ ಐ ಶ್ರೀನಿವಾಸ್, ತುರುವೇಕೆರೆ ತಾಲ್ಲೂಕು ದಂಡಿನಶಿವರ ಠಾಣೆ ಕಾನ್‌ ಸ್ಟೆಬಲ್‌ ಪರಮೇಶ್ ಮತ್ತು ಸಂತೋಷ್ ಎಂಬವರನ್ನು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ.ಕೆ.ವಂಶಿಕೃಷ್ಣ ಕೆಲಸದಿಂದ ಅಮಾನತುಗೊಳಿಸಿದ್ದಾರೆ.

ಕುಣಿಗಲ್ ತಾಲ್ಲೂಕಿನಲ್ಲಿ ಈ ಮೂವರು ಚುನಾವಣಾ ಕರ್ತವ್ಯಕ್ಕೆ ನಿಯೋಜಿತರಾಗಿದ್ದು ಚುನಾವಣಾ ಕೆಲಸ ಮುಗಿಸಿ ರಾತ್ರಿ ಮನೆಗಳಿಗೆ ಹೊರಟಿದ್ದರು. ಈ ವೇಳೆ 112 ಹೊಯ್ಸಳ ವಾಹನದಲ್ಲಿಯೇ ಕುಳಿತು ಮದ್ಯ ಸೇವಿಸಿದ್ದಾರೆ.

SCROLL FOR NEXT