ಸಂಗ್ರಹ ಚಿತ್ರ 
ರಾಜ್ಯ

ಹೊಸ ಸ್ವರೂಪದ ಕೊರೋನಾ ವೈರಸ್ ಆತಂಕ: ಧಾರವಾಡ ಜಿಲ್ಲೆಯಲ್ಲಿ ಬ್ರಿಟನ್‍ನಿಂದ ಆಗಮಿಸಿದ ಐವರಿಗೆ ಕ್ವಾರಂಟೈನ್‍ 

ಬ್ರಿಟನ್‌ನಿಂದ ಆಗಮಿಸಿದ ಐವರು ಅಂತಾರಾಷ್ಟ್ರೀಯ ಪ್ರಯಾಣಿಕರನ್ನು ಧಾರವಾಡ ಜಿಲ್ಲೆಯ ಅಧಿಕಾರಿಗಳು ಸೋಮವಾರ ಗೃಹ ಸಂಪರ್ಕತಡೆಗೆ ಕಳುಹಿಸಿದ್ದಾರೆ ಎಂದು ಅಧಿಕೃತ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಲಾಗಿದೆ.

ಹುಬ್ಬಳ್ಳಿ: ಬ್ರಿಟನ್‌ನಿಂದ ಆಗಮಿಸಿದ ಐವರು ಅಂತಾರಾಷ್ಟ್ರೀಯ ಪ್ರಯಾಣಿಕರನ್ನು ಧಾರವಾಡ ಜಿಲ್ಲೆಯ ಅಧಿಕಾರಿಗಳು ಸೋಮವಾರ ಗೃಹ ಸಂಪರ್ಕತಡೆಗೆ ಕಳುಹಿಸಿದ್ದಾರೆ ಎಂದು ಅಧಿಕೃತ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಲಾಗಿದೆ.

ಆದರೂ, ಬ್ರಿಟನ್‍ ನಿಂದ ಈ ಐವರು ಪ್ರಯಾಣಿಕರು ಯಾವ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಮೂಲಕ ಆಗಮಿಸಿದ್ದಾರೆ ಎಂಬ ವಿವರಗಳು ತಕ್ಷಣಕ್ಕೆ ಲಭ್ಯವಾಗಿಲ್ಲ.

ಎಲ್ಲಾ ಐವರು ಪ್ರಯಾಣಿಕರಿಂದ ಗಂಟಲು ಧ್ರವ ಸಂಗ್ರಹಿಸಿ ಕೋವಿಡ್ -19 ಪರೀಕ್ಷೆಗೆ ಕಳುಹಿಸಲಾಗಿದೆ. ಐದು ಮಾದರಿಗಳ ಪೈಕಿ ಒಂದರ ಪರೀಕ್ಷಾ ವರದಿಯನ್ನು ಪಡೆಯಲಾಗಿದ್ದು, ಸೋಂಕು ಇಲ್ಲದಿರುವುದು ದೃಢಪಟ್ಟಿದೆ. ಉಳಿದ ನಾಲ್ಕು ಮಾದರಿಗಳ ವರದಿಯನ್ನು ಕಾಯಲಾಗುತ್ತಿದೆ. ಪರೀಕ್ಷಾ ವರದಿಗಳಿಗೆ ಅನುಗುಣವಾಗಿ ಮುಂದಿನ ಕ್ರಮಗಳನ್ನು ತೆಗೆದುಕೊಳ್ಳಲಾಗುವುದು ಎಂದು ಧಾರವಾಡ ಜಿಲ್ಲಾಧಿಕಾರಿ ನಿತೇಶ್ ಪಾಟೀಲ್ ತಿಳಿಸಿದ್ದಾರೆ.

ಬ್ರಿಟನ್ ನಿಂದ ಬಂದವರಿಗೆ ಕ್ವಾರಂಟೈನ್
ಬ್ರಿಟನ್‌ ನಲ್ಲಿ ರೂಪಾಂತರಗೊಂಡ ಕೊರೋನ ವೈರಸ್ ಮತ್ತೊಂದು ಸುತ್ತಿನ ಕೋವಿಡ್ ಅಲೆಯ ಭೀತಿಯ ಹಿನ್ನೆಲೆಯಲ್ಲಿ ಬ್ರಿಟನ್ ನಿಂದ ಮಂಗಳೂರು ಮತ್ತು ಉಡುಪಿಗೆ ಬಂಧವರನ್ನು ಗುರುತಿಸಿ ಕ್ವಾರಂಟೈನ್ ನಲ್ಲಿಡಲಾಗಿದೆ.

ಬ್ರಿಟನ್‌ನಿಂದ‌ 15 ಮಂದಿ ನಗರಕ್ಕೆ ಬಂದಿದ್ದು, ಎಲ್ಲರೂ‌ ಕೋವಿಡ್‌ ನೆಗೆಟಿವ್ ಪ್ರಮಾಣಪತ್ರ ಹೊಂದಿದ್ದಾರೆ. ಆದಾಗ್ಯೂ ಅವರನ್ನು ಮತ್ತೊಮ್ಮೆ‌ ಪರೀಕ್ಷೆಗೆ ಒಳಪಡಿಸಲಾಗುವುದು ಎಂದು‌ ಜಿಲ್ಲಾ ಆರೋಗ್ಯಾಧಿಕಾರಿ ಡಾ.ರಾಮಚಂದ್ರ ಬಾಯರಿ‌ ತಿಳಿಸಿದ್ದಾರೆ.

ಬ್ರಿಟನ್ ಹಾಗೂ ಇತರ ದೇಶಗಳಿಂದ ಉಡುಪಿ ಜಿಲ್ಲೆಗೆ ಬಂದ ಎಂಟು ಮಂದಿಯನ್ನು ಇಂದು ಪರೀಕ್ಷೆಗೊಳಪಡಿಸಿದ್ದು, ಎಲ್ಲರನ್ನೂ ಸದ್ಯ ಹೋಮ್ ಕ್ವಾರಂಟೈನ್‌ ನಲ್ಲಿರಿಸಲಾಗಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಒಳ ಮೀಸಲಾತಿಗೆ ಮೂರು ಸೂತ್ರ: ವಿಶೇಷ ಸಂಪುಟ ಸಭೆಯಲ್ಲಿ ಮಹತ್ವದ ನಿರ್ಧಾರ; ಯಾರಿಗೆ ಎಷ್ಟು?

ಅದಕ್ಕಾಗಿ ನಾನು ತಮನ್ನಾ ಭಾಟಿಯಾ ಕಾಲಿಗೆ ಬೀಳಲು ಸಿದ್ಧ: ಬಾಲಿವುಡ್ ನಟ ಅನ್ನು ಕಪೂರ್

IPL 2026: ವಿರಾಟ್ ಕೊಹ್ಲಿ, ಪಡಿಕ್ಕಲ್ ಅಬ್ಬರಕ್ಕೆ GT ತತ್ತರ; RCB ಭರ್ಜರಿ ಗೆಲುವು

ಮಣಿಪಾಲದಲ್ಲಿ ಇದೆಂಥಾ ಅಸಹ್ಯ: ರಸ್ತೆಯಲ್ಲೇ ರೊಮ್ಯಾನ್ಸ್; ಉತ್ತರ ಭಾರತ ಜೋಡಿಗೆ ಕನ್ನಡದಲ್ಲೇ ಉಗಿದ ಸ್ಥಳೀಯರು, Video!

ರಾಘವ್ ಚಡ್ಡಾ, ಇತರರು ಎಎಪಿ ಬಿಟ್ಟು ಹೋಗುತ್ತಿರಲಿಲ್ಲ...: ಅಣ್ಣಾ ಹಜಾರೆ ಸ್ಫೋಟಕ ಹೇಳಿಕೆ

SCROLL FOR NEXT