ಸಂಗ್ರಹ ಚಿತ್ರ 
ರಾಜ್ಯ

ಹೊಸ ಸ್ವರೂಪದ ಕೊರೋನಾ ವೈರಸ್ ಆತಂಕ: ಧಾರವಾಡ ಜಿಲ್ಲೆಯಲ್ಲಿ ಬ್ರಿಟನ್‍ನಿಂದ ಆಗಮಿಸಿದ ಐವರಿಗೆ ಕ್ವಾರಂಟೈನ್‍ 

ಬ್ರಿಟನ್‌ನಿಂದ ಆಗಮಿಸಿದ ಐವರು ಅಂತಾರಾಷ್ಟ್ರೀಯ ಪ್ರಯಾಣಿಕರನ್ನು ಧಾರವಾಡ ಜಿಲ್ಲೆಯ ಅಧಿಕಾರಿಗಳು ಸೋಮವಾರ ಗೃಹ ಸಂಪರ್ಕತಡೆಗೆ ಕಳುಹಿಸಿದ್ದಾರೆ ಎಂದು ಅಧಿಕೃತ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಲಾಗಿದೆ.

ಹುಬ್ಬಳ್ಳಿ: ಬ್ರಿಟನ್‌ನಿಂದ ಆಗಮಿಸಿದ ಐವರು ಅಂತಾರಾಷ್ಟ್ರೀಯ ಪ್ರಯಾಣಿಕರನ್ನು ಧಾರವಾಡ ಜಿಲ್ಲೆಯ ಅಧಿಕಾರಿಗಳು ಸೋಮವಾರ ಗೃಹ ಸಂಪರ್ಕತಡೆಗೆ ಕಳುಹಿಸಿದ್ದಾರೆ ಎಂದು ಅಧಿಕೃತ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಲಾಗಿದೆ.

ಆದರೂ, ಬ್ರಿಟನ್‍ ನಿಂದ ಈ ಐವರು ಪ್ರಯಾಣಿಕರು ಯಾವ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಮೂಲಕ ಆಗಮಿಸಿದ್ದಾರೆ ಎಂಬ ವಿವರಗಳು ತಕ್ಷಣಕ್ಕೆ ಲಭ್ಯವಾಗಿಲ್ಲ.

ಎಲ್ಲಾ ಐವರು ಪ್ರಯಾಣಿಕರಿಂದ ಗಂಟಲು ಧ್ರವ ಸಂಗ್ರಹಿಸಿ ಕೋವಿಡ್ -19 ಪರೀಕ್ಷೆಗೆ ಕಳುಹಿಸಲಾಗಿದೆ. ಐದು ಮಾದರಿಗಳ ಪೈಕಿ ಒಂದರ ಪರೀಕ್ಷಾ ವರದಿಯನ್ನು ಪಡೆಯಲಾಗಿದ್ದು, ಸೋಂಕು ಇಲ್ಲದಿರುವುದು ದೃಢಪಟ್ಟಿದೆ. ಉಳಿದ ನಾಲ್ಕು ಮಾದರಿಗಳ ವರದಿಯನ್ನು ಕಾಯಲಾಗುತ್ತಿದೆ. ಪರೀಕ್ಷಾ ವರದಿಗಳಿಗೆ ಅನುಗುಣವಾಗಿ ಮುಂದಿನ ಕ್ರಮಗಳನ್ನು ತೆಗೆದುಕೊಳ್ಳಲಾಗುವುದು ಎಂದು ಧಾರವಾಡ ಜಿಲ್ಲಾಧಿಕಾರಿ ನಿತೇಶ್ ಪಾಟೀಲ್ ತಿಳಿಸಿದ್ದಾರೆ.

ಬ್ರಿಟನ್ ನಿಂದ ಬಂದವರಿಗೆ ಕ್ವಾರಂಟೈನ್
ಬ್ರಿಟನ್‌ ನಲ್ಲಿ ರೂಪಾಂತರಗೊಂಡ ಕೊರೋನ ವೈರಸ್ ಮತ್ತೊಂದು ಸುತ್ತಿನ ಕೋವಿಡ್ ಅಲೆಯ ಭೀತಿಯ ಹಿನ್ನೆಲೆಯಲ್ಲಿ ಬ್ರಿಟನ್ ನಿಂದ ಮಂಗಳೂರು ಮತ್ತು ಉಡುಪಿಗೆ ಬಂಧವರನ್ನು ಗುರುತಿಸಿ ಕ್ವಾರಂಟೈನ್ ನಲ್ಲಿಡಲಾಗಿದೆ.

ಬ್ರಿಟನ್‌ನಿಂದ‌ 15 ಮಂದಿ ನಗರಕ್ಕೆ ಬಂದಿದ್ದು, ಎಲ್ಲರೂ‌ ಕೋವಿಡ್‌ ನೆಗೆಟಿವ್ ಪ್ರಮಾಣಪತ್ರ ಹೊಂದಿದ್ದಾರೆ. ಆದಾಗ್ಯೂ ಅವರನ್ನು ಮತ್ತೊಮ್ಮೆ‌ ಪರೀಕ್ಷೆಗೆ ಒಳಪಡಿಸಲಾಗುವುದು ಎಂದು‌ ಜಿಲ್ಲಾ ಆರೋಗ್ಯಾಧಿಕಾರಿ ಡಾ.ರಾಮಚಂದ್ರ ಬಾಯರಿ‌ ತಿಳಿಸಿದ್ದಾರೆ.

ಬ್ರಿಟನ್ ಹಾಗೂ ಇತರ ದೇಶಗಳಿಂದ ಉಡುಪಿ ಜಿಲ್ಲೆಗೆ ಬಂದ ಎಂಟು ಮಂದಿಯನ್ನು ಇಂದು ಪರೀಕ್ಷೆಗೊಳಪಡಿಸಿದ್ದು, ಎಲ್ಲರನ್ನೂ ಸದ್ಯ ಹೋಮ್ ಕ್ವಾರಂಟೈನ್‌ ನಲ್ಲಿರಿಸಲಾಗಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಬ್ಯಾಂಕ್‌ಗೆ ನಕಲಿ ಗ್ಯಾರಂಟಿ: ರಿಲಯನ್ಸ್‌ ಪವರ್‌ನ ಮುಖ್ಯ ಹಣಕಾಸು ಅಧಿಕಾರಿ ಅಶೋಕ್ ಪಾಲ್ ಬಂಧನ

ಸಮಸ್ತ ಜನರಿಗೆ ಸುಗಮ ಆಡಳಿತ, ಶುದ್ಧ ನೀರಿನ ಪೂರೈಕೆ: ಸ್ವಚ್ಚತೆ- ಸಂಚಾರ ವ್ಯವಸ್ಥೆಗೆ ಸಿಎಂ ಸಿದ್ದರಾಮಯ್ಯ ಕಟ್ಟಪ್ಪಣೆ

ಸಿದ್ದರಾಮಯ್ಯ ಮೇಲೆ ತೂಗುಗತ್ತಿ: ಅಧಿಕಾರದಲ್ಲಿ ಉಳಿಯಲು ಸಂಪುಟ ಪುನಾರಚನೆ ಕಸರತ್ತು; ಬಿಹಾರ-ಕೇರಳ ಚುನಾವಣೆಯತ್ತ ಡಿಕೆಶಿ ಚಿತ್ತ!

ವೀರೇಂದ್ರ ಪಪ್ಪಿ ಕರ್ಮಕಾಂಡ ನೋಡುತ್ತಿದ್ದರೆ CM- DCM ಇನ್ಯಾವ ಪರಿ ಲೂಟಿ ಮಾಡಿ ಹೈಕಮಾಂಡ್ ಗೆ ಕಪ್ಪ ನೀಡುತ್ತಿರಬೇಡಾ?

ಈ ಬಾರಿ ನಾನು ಸಚಿವನಾಗುವ ಭರವಸೆ ಇದೆ: ಸಂಪುಟ ವಿಸ್ತರಣೆಯೇ ನವೆಂಬರ್ ಕ್ರಾಂತಿಯಿರಬಹುದು; ಸಲೀಂ ಅಹ್ಮದ್

SCROLL FOR NEXT