ಸಾಂದರ್ಭಿಕ ಚಿತ್ರ 
ರಾಜ್ಯ

ಜನವರಿ 15ರೊಳಗೆ ಮಕ್ಕಳಿಗೆ ಬಿಸಿಯೂಟ ಪಡಿತರ ವಿತರಿಸಲು ಸೂಚನೆ

ಬಿಸಿಯೂಟ ಯೋಜನೆಯಡಿ ಮಕ್ಕಳಿಗೆ ಜನವರಿ 15 2021ರೊಳಗೆ ಮೂರು ತಿಂಗಳ ಆಹಾರ ಧಾನ್ಯವನ್ನು ಮಕ್ಕಳಿಗೆ ವಿತರಿಸುವುದಾಗಿ ಹೈಕೋರ್ಟ್ ಗೆ ರಾಜ್ಯ ಸರ್ಕಾರ ಮಾಹಿತಿ ನೀಡಿದೆ.

ಬೆಂಗಳೂರು: ಬಿಸಿಯೂಟ ಯೋಜನೆಯಡಿ ಮಕ್ಕಳಿಗೆ ಜನವರಿ 15 2021ರೊಳಗೆ ಮೂರು ತಿಂಗಳ ಆಹಾರ ಧಾನ್ಯವನ್ನು ಮಕ್ಕಳಿಗೆ ವಿತರಿಸುವುದಾಗಿ ಹೈಕೋರ್ಟ್ ಗೆ ರಾಜ್ಯ ಸರ್ಕಾರ ಮಾಹಿತಿ ನೀಡಿದೆ.

ಅಭಯ್ ಶ್ರೀನಿವಾಸ್ ಓಕಾ ಮತ್ತು ಅರವಿಂದ್ ಕುಮಾರ್ ಅವರನ್ನೊಳಗೊಂಡ ವಿಭಾಗೀಯ ಪೀಠಕ್ಕೆ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಇಲಾಖೆ ಕಾರ್ಯದರ್ಶಿ ಸಲ್ಲಿಸಿದ ಭರವಸೆ ಮನವಿಯನ್ನು ಪೀಠ ಅಂಗೀಕರಿಸಿತು.

2020 ರ ಡಿಸೆಂಬರ್‌ನಲ್ಲಿ ಹೊರಡಿಸಲಾದ ಕೊರಿಜೆನ್‌ಕಮ್ ಆದೇಶದಲ್ಲಿ ನಿರ್ದಿಷ್ಟಪಡಿಸಿದ ಸಮಯವನ್ನು ಕಟ್ಟುನಿಟ್ಟಾಗಿ ಪಾಲಿಸಲು ರಾಜ್ಯವು ಪ್ರಯತ್ನಿಸುತ್ತದೆ ಎಂದು ಉಮಾ ಶಂಕರ್ ಹೇಳಿದ್ದಾರೆ.

ವಿತರಿಸಬೇಕಾದ ಆಹಾರ ಪದಾರ್ಥಗಳ ಅಂತಿಮಗೊಳಿಸುವಿಕೆ ಮತ್ತು ಪ್ರಮಾಣೀಕರಣವು ವಿಳಂಬವಾಗಿದ್ದರಿಂದ, ಸೆಪ್ಟೆಂಬರ್, ಆಗಸ್ಟ್ ಮತ್ತು ಅಕ್ಟೋಬರ್ ತಿಂಗಳ ಹಿನ್ನಲೆ ತಿಂಗಳುಗಳ ವಿತರಣಾ ಪ್ರಕ್ರಿಯೆಯನ್ನು ಪೂರ್ಣಗೊಳಿಸಲು ಸ್ವಲ್ಪ ವಿಳಂಬವಾಗಿತ್ತು.  ಮುಖ್ಯವಾಗಿ ಡಿಸೆಂಬರ್ 31 2020ರೊಳಗೆ ಆಹಾರ ವಿತರಣೆ ಕಾರ್ಯ ಪೂರ್ಣಗೊಳ್ಳಬೇಕಾಗಿತ್ತು. ವಿಳಂಬವನ್ನು ಸಾಧ್ಯವಾದಷ್ಟು ಮಟ್ಟಿಗೆ ಕಡಿಮೆ ಮಾಡಲು ರಾಜ್ಯ ಸರ್ಕಾರದ ಪ್ರಯತ್ನಗಳು ಮುಂದುವರಿದಿದೆ ಎಂದು ಹೇಳಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಲಾಲ್ ಬಾಗ್ ಗೆ ರೂ.10 ಕೋಟಿ: ಸುರಂಗ ರಸ್ತೆ ಯೋಜನೆಯಿಂದ 'ಸಸ್ಯೋದ್ಯಾನ'ದ ಮೇಲೆ ಯಾವುದೇ ಎಫೆಕ್ಟ್ ಆಗಲ್ಲ- ಡಿಕೆ ಶಿವಕುಮಾರ್

US tariff: ಚೀನಾ ಮೇಲೆ ಅಮೆರಿಕ ಶೇ.100 ರಷ್ಟು ಸುಂಕ; ಭಾರತಕ್ಕೆ ಎಚ್ಚರಿಕೆಯ ಗಂಟೆ!

Shocking: ಹೆಣ್ಣಿನ ಶವ ಎಳೆದೊಯ್ದು ಶವಾಗಾರದಲ್ಲೇ ಅತ್ಯಾಚಾರ, 25ರ ಯುವಕನಿಂದ ಪೈಶಾಚಿಕ ಕೃತ್ಯ, CCTV Video

Belagavi: ಲವರ್ ಜೊತೆ ಮಗಳು ಪರಾರಿ; ಇಡೀ ಊರಿಗೆ 'ತಿಥಿ' ಊಟ ಹಾಕಿಸಿದ ತಂದೆ!

ಬೆಳಗಾವಿ ಡಿಸಿಸಿ ಬ್ಯಾಂಕ್ ಚುನಾವಣೆ: ಒಂದಾದ ಜಾರಕಿಹೊಳಿ ಬ್ರದರ್ಸ್‌ಗೆ ಜಾಕ್‌ಪಾಟ್; ರಮೇಶ್ ಕತ್ತಿ ಬಣಕ್ಕೆ ಶಾಕ್!

SCROLL FOR NEXT