ಶಿವರಾಮ ಕಾರಂತ ಲೇಔಟ್ ನಿವಾಸಿಗಳಿಗೆ ಸುಪ್ರೀಂ ರಿಲೀಫ್ ಬಳಿಕ ಬಿಡಿಎ ಎದುರು ಭಾರಿ ಸರತಿ ಸಾಲು! 
ರಾಜ್ಯ

ಶಿವರಾಮ ಕಾರಂತ ಲೇಔಟ್ ನಿವಾಸಿಗಳಿಗೆ ಸುಪ್ರೀಂ ರಿಲೀಫ್: ಈಗ ಬಿಡಿಎ ಎದುರು ಭಾರಿ ಸರತಿ ಸಾಲು!

ಶಿವರಾಮ ಕಾರಂತ ಲೇಔಟ್ ನಲ್ಲಿ ನಿವೇಶನ ಖರೀದಿಸಿರುವವರು ಹಾಗೂ ಮನೆ ನಿರ್ಮಿಸಿರುವವರಿಗೆ ಸುಪ್ರೀಂ ಕೋರ್ಟ್ ರಿಲೀಫ್ ನೀಡಿದ ಬೆನ್ನಲ್ಲೇ ಸಾರ್ವಜನಿಕರು ಬಿಡಿಎ ಕಚೇರಿ ಎದುರು ಸಾಲುಗಟ್ಟಿ ನಿಲ್ಲುತ್ತಿದ್ದಾರೆ! 

ಬೆಂಗಳೂರು: ಶಿವರಾಮ ಕಾರಂತ ಲೇಔಟ್ ನಲ್ಲಿ ನಿವೇಶನ ಖರೀದಿಸಿರುವವರು ಹಾಗೂ ಮನೆ ನಿರ್ಮಿಸಿರುವವರಿಗೆ ಸುಪ್ರೀಂ ಕೋರ್ಟ್ ರಿಲೀಫ್ ನೀಡಿದ ಬೆನ್ನಲ್ಲೇ ಸಾರ್ವಜನಿಕರು ಬಿಡಿಎ ಕಚೇರಿ ಎದುರು ಸಾಲುಗಟ್ಟಿ ನಿಲ್ಲುತ್ತಿದ್ದಾರೆ! 

ಡಾ.ಶಿವರಾಮ ಕಾರಂತ್ ಲೇಔಟ್ ನ ನಿರ್ದಿಷ್ಟ ಸರ್ವೇ ನಂಬರ್ ಗಳಿಗೆ ಸಂಬಂಧಿಸಿದಂತೆ, ಅಲ್ಲಿನ ಮನೆಗಳು ನಿವೇಶನಗಳನ್ನು ವಶಕ್ಕೆ ಪಡೆಯುವುದು ಅಥವಾ ತೆರವುಗೊಳಿಸುವುದರ ವಿರುದ್ಧ ಬಿಡಿಎ ಆಕ್ಷೇಪಣೆ ಸಲ್ಲಿಸುವುದಕ್ಕೆ ಅವಕಾಶ ಮಾಡಿಕೊಟ್ಟಿತ್ತು. ಈ ಹಿನ್ನೆಲೆಯಲ್ಲಿ ಸಾರ್ವಜನಿಕರು ಈ ರೀತಿ ಸರತಿ ಸಾಲಿನಲ್ಲಿ ನಿಲ್ಲುವುದಕ್ಕೆ ಕಾರಣವಾಗಿದೆ.

ಆ ಸ್ವತ್ತುಗಳ ಮೇಲೆ ಹಕ್ಕು ಪ್ರತಿಪಾದನೆ ಮಾಡುವ ನಿಟ್ಟಿನಲ್ಲಿ ಸಾರ್ವಜನಿಕರು ಸರತಿ ಸಾಲಿನಲ್ಲಿ ನಿಂತು ಆಕ್ಷೇಪಣೆ ಸಲ್ಲಿಸಿ ತಮ್ಮ ನಿವೇಶನ, ಮನೆಗಳ ಮೇಲೆ ಹಕ್ಕು ಪ್ರತಿಪಾದನೆ ಮಾಡಲು ಮುಂದಾಗಿದ್ದಾರೆ.

ಆಸ್ತಿಯ ಮಾಲಿಕರಿಗೆ ಆಕ್ಷೇಪಣೆಗಳನ್ನು ಸಲ್ಲಿಸುವುದಕ್ಕೆ ಡಿಸೆಂಬರ್ ಅಂತ್ಯದವರೆಗೂ ಅವಕಾಶ ನೀಡಲಾಗಿದೆ. 

"ಲೇಔಟ್ ನಲ್ಲಿ ಕಾನೂನುಬದ್ಧವಾಗಿ ನಿರ್ಮಾಣ ಮಾಡಲಾಗಿರುವ ಮನೆಗಳನ್ನು ತೆರವುಗೊಳಿಸುವುದರ ವಿರುದ್ಧವಾಗಿ ಸುಪ್ರೀಂ ಕೋರ್ಟ್ ನ ನ್ಯಾ. ಅಬ್ದುಲ್ ನಜೀರ್ ಹಾಗೂ ನ್ಯಾ. ಸಂಜೀವ್ ಖನ್ನಾ ಅವರಿದ್ದ ಪೀಠ ಆದೇಶ ನೀಡಿದ್ದು, ವಾಸಯೋಗ್ಯ ಮನೆಗಳನ್ನು ಧ್ವಂಸಗೊಳಿಸುವುದರ ವಿರುದ್ಧದ ತನ್ನ ಆದೇಶ ಸಮರ್ಥನೀಯವಾದದ್ದು" ಎಂದು ಸುಪ್ರೀಂ ಕೋರ್ಟ್ ಡಿ.03 ರ ಆದೇಶದಲ್ಲಿ ತಿಳಿಸಿತ್ತು. ಅಷ್ಟೇ ಅಲ್ಲದೇ ಕಾನೂನುಬದ್ಧವಾಗಿ ನಿರ್ಮಾಣಗೊಂಡಿರುವ ಮನೆಗಳನ್ನು ಗುರುತಿಸುವುದಕ್ಕಾಗಿ ಕೋರ್ಟ್ ಸಮಿತಿಯನ್ನೂ ನೇಮಕ ಮಾಡಿದೆ. ಆರು ತಿಂಗಳಲ್ಲಿ ಸಮಿತಿಯ ವರದಿ ಕೋರ್ಟ್ ಗೆ ಸಲ್ಲಿಕೆಯಾಗಬೇಕಿದೆ.  ಬಿಡಿಎಗೆ 6 ಮಂದಿ ಹೆಚ್ಚುವರಿ ಭೂ ಸ್ವಾಧೀನ ಅಧಿಕಾರಿಗಳನ್ನು 2 ವಾರಗಳಲ್ಲಿ ನೇಮಕ ಮಾಡುವುದಕ್ಕೆ ಸೂಚನೆ ನೀಡಲಾಗಿದ್ದು, ಜ.11 ರ ವೇಳೆಗೆ ಸ್ಥಿತಿ ವರದಿಯನ್ನು ಸಲ್ಲಿಸುವುದಕ್ಕೆ ಬಿಡಿಎಗೆ ಕೋರ್ಟ್ ಸೂಚನೆ ನೀಡಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ನ್ಯಾಯಾಂಗದಲ್ಲಿ ಭ್ರಷ್ಟಾಚಾರದ ಪಾಠ: ಕೇಂದ್ರ ಕ್ಷಮೆಯಾಚಿಸುತ್ತಿದ್ದಂತೆ NCERT ಪಠ್ಯ ಪುಸ್ತಕ ಬ್ಯಾನ್, ಪ್ರತಿಗಳನ್ನು ವಶಕ್ಕೆ ಪಡೆಯಲು ಸುಪ್ರೀಂ ಸೂಚನೆ

ನೀವು ಪಡೆದ IMF ಬೇಲ್ಔಟ್‌ಗಿಂತ 2 ಪಟ್ಟು ಹೆಚ್ಚು; ಜಾಗಬಿಟ್ಟು ಹೋಗುವುದೇ ಪಾಕ್​ಗಿರುವ ಒಂದೇ ಆಯ್ಕೆ: ವಿಶ್ವಸಂಸ್ಥೆಯಲ್ಲಿ ಭಾರತ ವಾಗ್ದಾಳಿ!

ಅಪ್ರಾಪ್ತ ಬಾಲಕಿಯೊಂದಿಗೆ ಅನುಚಿತ ವರ್ತನೆ: ಪೋಕ್ಸೋ ಕೇಸ್ ದಾಖಲಾಗುತ್ತಿದಂತೆ ಮಲ್ಲಿಕಾರ್ಜುನ ಮುತ್ಯಾ video ರಿಲೀಸ್!

'ನಿಮ್ಮ ಭಾಷಣ ನಾಚಿಕೆಯಿಲ್ಲದೆ ಸಮರ್ಥನೆ ಮಾಡಿಕೊಂಡಂತೆ ಇತ್ತು': ಐನ್ ಸ್ಟೈನ್ ನೆಹರೂಗೆ ಬರೆದ ಪತ್ರ ಉಲ್ಲೇಖಿಸಿ Modi ಟೀಕಿಸಿದ ಕಾಂಗ್ರೆಸ್

Ranji Trophy final: ಔಕಿಬ್ ನಬಿ ಬೌಲಿಂಗ್ ಮ್ಯಾಜಿಕ್‌ಗೆ ಬೆರಗಾದ ಕೆಎಲ್ ರಾಹುಲ್; ಆರಂಭದಲ್ಲೇ ಕರ್ನಾಟಕಕ್ಕೆ ಸಂಕಷ್ಟ!

SCROLL FOR NEXT