ರಾಜ್ಯ

ಇಂದು ವೈಕುಂಠ ಏಕಾದಶಿ: ವೆಂಕಟೇಶ್ವರ ದೇವಾಲಯಗಳಲ್ಲಿ ವಿಶೇಷ ಪೂಜೆ 

Sumana Upadhyaya

ಬೆಂಗಳೂರು: ಇಂದು ವೈಕುಂಠ ಏಕಾದಶಿ. ತಿರುಪತಿ ಸೇರಿದಂತೆ ದೇಶದ ವಿವಿಧ ವೆಂಕಟೇಶ್ವರ ದೇಗುಲಗಳಲ್ಲಿ ವಿಶೇಷ ಪೂಜಾ ಹಾಗೂ ಧಾರ್ಮಿಕ ವಿಧಿವಿಧಾನ ಹಾಗೂ ಹಲವು ಕಾರ್ಯಕ್ರಮಗಳನ್ನು ಆಯೋಜಿಸಲಾಗಿದೆ.

ಈ ದಿನ ವಿಷ್ಣು ದೇವಾಲಯಗಳಲ್ಲಿ ದರ್ಶನ ಪಡೆದರೆ ಸ್ವರ್ಗ ಪ್ರಾಪ್ತಿಯಾಗುತ್ತದೆ ಎಂಬ ನಂಬಿಕೆ ಇದೆ.ಹೀಗಾಗಿ ಭಕ್ತಾಧಿಗಳು ಇಂದು ಬೆಳಗಿನ ಜಾವದಿಂದಲೇ ದೇಗುಲಗಳಿಗೆ ತೆರಳಿ ದರ್ಶನ ಪಡೆಯುತ್ತಿದ್ದಾರೆ. ಬೆಂಗಳೂರಿನ ಹಲವು ದೇವಾಲಯಗಳಲ್ಲಿ ದರ್ಶನಕ್ಕೆ ಆಗಮಿಸಿರುವ ಭಕ್ತಾಧಿಗಳು ಕೋವಿಡ್ ಮಾರ್ಗಸೂಚಿಗಳನ್ನು ಪಾಲಿಸುವಂತೆ ಸೂಚಿಸಲಾಗಿದೆ.

ಇಸ್ಕಾನ್ ದೇವಾಲಯದಲ್ಲಿ ಭಕ್ತಾದಿಗಳಿಗೆ ಇಂದು ಪ್ರವೇಶ ನಿರ್ಬಂಧಿಸಲಾಗಿದ್ದು, ಆನ್ ಲೈನ್ ದರ್ಶನ ವ್ಯವಸ್ಥೆ ಕಲ್ಪಿಸಲಾಗಿದೆ.

ರಾಜಕೀಯ ನಾಯಕರು, ಗಣ್ಯರು ವೈಕುಂಠ ಏಕಾದಶಿ ಪ್ರಯುಕ್ತ ನಾಡಿನ ಜನತೆಗೆ ಶುಭಾಶಯ ತಿಳಿಸಿದ್ದಾರೆ. ಭಗವಾನ್ ಶ್ರೀಮನ್ನಾರಾಯಣ ಎಲ್ಲರ ಬದುಕಲ್ಲಿ ಸನ್ಮಂಗಳವನ್ನುಂಟುಮಾಡಲಿ ಎಂದು ಕೋರಿದ್ದಾರೆ.

SCROLL FOR NEXT