ರಾಜ್ಯ

ರೆಸ್ಟೋರೆಂಟ್ ನಲ್ಲಿ ಬೆಂಕಿ ಅವಘಡ; ಅಪಾರ ಹಾನಿ

Nagaraja AB

ಬೆಂಗಳೂರು: ರೆಸ್ಟೋರೆಂಟ್ ಒಂದಕ್ಕೆ ಆಕಸ್ಮಿಕ ಬೆಂಕಿ ತಗುಲಿದ ಪರಿಣಾಮ 25 ಲಕ್ಷಕ್ಕೂ ಹೆಚ್ಚು ನಷ್ಟ ಸಂಭವಿಸಿದ ಘಟನೆ ಜ್ಞಾನಭಾರತಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಇಂದು ಮುಂಜಾನೆ ನಡೆದಿದೆ.

ಜ್ಞಾನಭಾರತಿಯ ಕಿಕ್ ಔಟ್ ರೆಸ್ಟೋರೆಂಟ್ ನಲ್ಲಿ ಈ ದುರಂತ ಸಂಭವಿಸಿದೆ. ಅದೃಷ್ಟವಶಾತ್ ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ. ಜ್ಞಾನಭಾರತಿಯ ಶಿರ್ಕೆ ಅಪಾರ್ಟ್ ಮೆಂಟ್ ಬಳಿಯ ಕಿಕ್ ಔಟ್ ರೆಸ್ಟೋರೆಂಟ್ ನಲ್ಲಿ ಮುಂಜಾನೆ 5.30ರ ವೇಳೆ ಶಾರ್ಟ್ ಸರ್ಕ್ಯೂಟ್ ನಿಂದ ಬೆಂಕಿ ತಗುಲಿದೆ ಎಂದು ಅಗ್ನಿಶಾಮಕ ಸಿಬ್ಬಂದಿ ತಿಳಿಸಿದ್ದಾರೆ.

ಬೆಂಕಿ ಕಟ್ಟಡದ ಎಲ್ಲಾ ಕಡೆ ಕ್ಷಣಾರ್ಧದಲ್ಲಿ ಆವರಿಸಿ‌ 25 ಲಕ್ಷಕ್ಕೂ ಅಧಿಕ ಮೌಲ್ಯದ ಪೀಠೋಪಕರಣಗಳು ಬೆಂಕಿಗಾಹುತಿಯಾಗಿವೆ. ಬೆಂಕಿ ನೋಡಿದ ಕಾರ್ಮಿಕರು ಹೊರಗೆ ಓಡಿ ಅಗ್ನಿಶಾಮಕದಳಕ್ಕೆ ಕರೆ ಮಾಡಿದ್ದಾರೆ. ಕೂಡಲೇ ಸ್ಥಳಕ್ಕೆ ಧಾವಿಸಿದ ಎರಡು ಅಗ್ನಿಶಾಮಕ ವಾಹನಗಳು ಕಾರ್ಯಾಚರಣೆ ನಡೆಸಿ ಬೆಂಕಿ ನಂದಿಸುವಲ್ಲಿ ಯಶಸ್ವಿಯಾಗಿದ್ದಾರೆ.

ಜ್ಞಾನಭಾರತಿ ಪೊಲೀಸರು ಪ್ರಕರಣ ದಾಖಲಿಸಿ ಮುಂದಿನ ತನಿಖೆ ಕೈಗೊಂಡಿದ್ದಾರೆ ಎಂದು ಡಿಸಿಪಿ ಸಂಜೀವ್ ಪಾಟೀಲ್ ‌ತಿಳಿಸಿದ್ದಾರೆ.

SCROLL FOR NEXT