ಅನುದೀಪ್ ಮತ್ತು ಮಿನುಷಾ ಹೆಗ್ಡೆ 
ರಾಜ್ಯ

ಕುಂದಾಪುರ ಮೂಲದ ನವದಂಪತಿ ಅನುದೀಪ್ ಮತ್ತು ಮಿನುಷಾ ಹೆಗ್ಡೆಯವರನ್ನು ಮನಸಾರೆ ಹೊಗಳಿದ ಪ್ರಧಾನಿ ಮೋದಿ!

ಕುಂದಾಪುರದ ಬೈಂದೂರಿನ ನವದಂಪತಿ ಇಂದು ಪ್ರಧಾನಿ ಮೋದಿಯವರ ಮನ್ ಕಿ ಬಾತ್ ಕಾರ್ಯಕ್ರಮದಲ್ಲಿ ಅವರ ಪ್ರಶಂಸೆಗೆ ಪಾತ್ರವಾಗಿದ್ದಾರೆ.

ಬೆಂಗಳೂರು: ಕುಂದಾಪುರದ ಬೈಂದೂರಿನ ನವದಂಪತಿ ಇಂದು ಪ್ರಧಾನಿ ಮೋದಿಯವರ ಮನ್ ಕಿ ಬಾತ್ ಕಾರ್ಯಕ್ರಮದಲ್ಲಿ ಅವರ ಪ್ರಶಂಸೆಗೆ ಪಾತ್ರವಾಗಿದ್ದಾರೆ.

ಕಳೆದ ತಿಂಗಳು ನವೆಂಬರ್ 18ರಂದು ಕುಂದಾಪುರದ ಬೈಂದೂರಿನ ಅನುದೀಪ್ ಹೆಗ್ಡೆ ಮತ್ತು ಮಿನುಷಾ ಕಾಂಚನ್ ಮದುವೆಯಾಗಿದ್ದರು. ಮದುವೆಯಾದ ನವದಂಪತಿ ಸಾಮಾನ್ಯವಾಗಿ ತಮ್ಮದೇ ಲೋಕದಲ್ಲಿ ವಿಹರಿಸುತ್ತಿರುತ್ತಾರೆ. ಹನಿಮೂನ್ ಹೋಗುತ್ತಾರೆ.

ಆದರೆ ಈ ದಂಪತಿ ಮಾಡಿದ ಕೆಲಸ ಸೋಮೇಶ್ವರ ಬೀಚ್ ನ್ನು ಸ್ವಚ್ಛಗೊಳಿಸಿದ್ದು. ಅನುದೀಪ್ ಗೆ ಹಿಂದಿನಿಂದಲೂ ತಮ್ಮ ಮನೆಯಿಂದ 3 ಕಿಲೋ ಮೀಟರ್ ದೂರದಲ್ಲಿರುವ ಸೋಮೇಶ್ವರ ಸಮುದ್ರ ತೀರವನ್ನು ಸ್ವಚ್ಛಗೊಳಿಸುವುದು ಅಭ್ಯಾಸ. ಅದಕ್ಕೀಗ ಅವರ ಪತ್ನಿ ಕೂಡ ಸಾಥ್ ನೀಡುತ್ತಿದ್ದಾರೆ.

ಲಕ್ಷದ್ವೀಪ ಅಥವಾ ಹಿಮಾಚಲ ಪ್ರದೇಶಕ್ಕೆ ಹೋಗಿ ಅಲ್ಲಿ ಸ್ವಚ್ಛ ಮಾಡಬೇಕೆಂದು ಅಂದುಕೊಂಡಿದ್ದರು ಇವರು, ಆದರೆ ಕೊರೋನಾದಿಂದಾಗಿ ಹೋಗದೆ ತಮ್ಮ ಮನೆ ಹತ್ತಿರವೇ ಸ್ವಚ್ಛ ಮಾಡಿದ್ದಾರೆ. ಸಮುದ್ರ ತೀರದಲ್ಲಿ ಚಪ್ಪಲ್ ಗಳು, ಆಲ್ಕೋಹಾಲ್ ಬಾಟಲ್ ಗಳು, ವೈದ್ಯಕೀಯ ಬಾಟಲ್ ಗಳು, ಕಸಗಳು, ಪ್ಲಾಸ್ಟಿಕ್ ಗಳು ಬಿದ್ದುಕೊಂಡಿರುತ್ತವೆ. ಅವುಗಳನ್ನೆಲ್ಲಾ ಸ್ವಚ್ಛಗೊಳಿಸಿದ್ದೇವೆ ಎನ್ನುತ್ತಾರೆ ಅನುದೀಪ್.

31 ವರ್ಷದ ಅನುದೀಪ್ ಡಿಜಿಟಲ್ ಮಾರ್ಕೆಟಿಂಗ್ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದಾರೆ. ಕಳೆದ ನವೆಂಬರ್ 27ರಿಂದ ಡಿಸೆಂಬರ್ 5ರವರೆಗೆ ಇವರು ಸುಮಾರು 600 ಕಿಲೋ ತ್ಯಾಜ್ಯಗಳನ್ನು ಈ ದಂಪತಿ ಸೋಮೇಶ್ವರ ಬೀಚ್ ತೀರದಿಂದ ಹೊರತೆಗೆದಿದ್ದಾರಂತೆ. ಇವರ ಕೆಲಸ ಹಲವರ ಪ್ರಶಂಸೆಗೆ ಪಾತ್ರವಾಗಿದೆ.ಇದೀಗ ಪ್ರಧಾನಿಯೇ ಗುರುತಿಸಿ ಮನ್ ಕಿ ಬಾತ್ ನಲ್ಲಿ ಇಂದಿನ ಯುವ ಪೀಳಿಗೆಗೆ ದಂಪತಿ ದಾರಿದೀಪ ಎಂದಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

Aligarh Businessman Murder: ಹಿಂದೂ ಮಹಾಸಭಾ ನಾಯಕಿ ಪೂಜಾ ಶಕುನ್ ಪಾಂಡೆ ಬಂಧನ! ಉದ್ಯಮಿಗೆ ಲೈಂಗಿಕ ಕಿರುಕುಳ ನೀಡಿದ್ರಾ?

SCROLL FOR NEXT