ಬಂಧಿತ ಆರೋಪಿಗಳು 
ರಾಜ್ಯ

ಬಿಜೆಪಿ ರಾಷ್ಟ್ರೀಯ ಕಾರ್ಯದರ್ಶಿ ಬಿಎಲ್ ಸಂತೋಷ್ ಹೆಸರಲ್ಲಿ ವಂಚಿಸಿದ್ದ ಇಬ್ಬರ ಸೆರೆ

ಬಿಜೆಪಿ ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿ ಬಿ.ಎಲ್. ಸಂತೋಷ್ ಹೆಸರಲ್ಲಿ ನಕಲಿ ಫೇಸ್​ಬುಕ್ ಖಾತೆ ಸೃಷ್ಟಿಸಿ ಜನರಿಂದ ಹಣ ಪಡೆದು ವಂಚಿಸುತ್ತಿದ್ದ ಇಬ್ಬರನ್ನು ಸಿಲಿಕಾನ್ ಸಿಟಿ ಪೋಲೀಸರು ಸೆರೆಹಿಡಿದಿದ್ದಾರೆ.

ಬೆಂಗಳೂರು: ಬಿಜೆಪಿ ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿ ಬಿ.ಎಲ್. ಸಂತೋಷ್ ಹೆಸರಲ್ಲಿ ನಕಲಿ ಫೇಸ್​ಬುಕ್ ಖಾತೆ ಸೃಷ್ಟಿಸಿ ಜನರಿಂದ ಹಣ ಪಡೆದು ವಂಚಿಸುತ್ತಿದ್ದ ಇಬ್ಬರನ್ನು ಸಿಲಿಕಾನ್ ಸಿಟಿ ಪೋಲೀಸರು ಸೆರೆಹಿಡಿದಿದ್ದಾರೆ.

ಉತ್ತರ ಪ್ರದೇಶದ ಮಥುರಾ ಜಿಲ್ಲೆಯ ಚೌಕಿ ಬಂಗಾರ ಗ್ರಾಮದ ಇಬ್ರಾಹಿಂ ಹಾಗೂ ಮೊಹಮ್ಮದ್ ಶೋಕಿನ್ ಬಂಧಿತರು

ಕೇಂದ್ರ ವಿಭಾಗದ ಪೋಲೀಸರು ಕಾರ್ಯಾಚರಣೆ ನಡೆಸಿ ಆರೋಪಿಗಳನ್ನು ಬಂಧಿಸಿದ್ದು ಬಂಧಿತರಿಂದ ಐದು ಮೊಬೈಲ್, ಹತ್ತಕ್ಕೆ ಹೆಚ್ಚು ಸಿಮ್ ಕಾರ್ಡ್, ಬ್ಯಾಂಕ್ ಪಾಸ್ ಬುಕ್ ಗಳನ್ನು ಜಪ್ತಿ ಮಾಡಲಾಗಿದೆ.

ಆರೋಪಿಗಳು ಬಿ.ಎಲ್‌.ಸಂತೋಷ್ ಹೆಸರಿನಲ್ಲಿ ನಕಲಿ‌‌ ಫೇಸ್​ಬುಕ್ ಖಾತೆ ತೆರೆದು ಅವರ ಪರಿಚಿತರು, ಸ್ನೇಹಿತರಿಗೆ ಮೆಸೆಂಜರ್ ಮೂಲಕ ಸಂದೇಶ ಕಳಿಸಿ 15 ಸಾವಿರ ಹಣ ನೀಡುವಂತೆ ಬೇಡಿಕೆ ಇಡುತ್ತಿದ್ದರು, ಇದನ್ನು ನಂಬಿದ ಸಂತೋಷ್ ಅವರ ಸ್ನೇಹಿತರು, ಪರಿಚಿತರು ಅವರು ನೀಡೀದ ಖಾತೆಗೆ ಆನ್​ಲೈನ್ ಮೂಲಕ ಹಣ ಸಂದಾಯ ಮಾಡುತ್ತಿದ್ದರು. ಈ ಕುರಿತಂತೆ ಸಂತೋಷ್ ಸಹ ತಮ್ಮ ಸಾಮಾಜಿಕ ತಾಣದಲ್ಲಿ ಎಚ್ಚರಿಕೆ ನೀಡಿದ್ದರು. 

ನಗರ ಕೇಂದ್ರ ವಲಯದ ಸೈಬರ್ ಕ್ರೈಂ ಪೊಲೀಸ್ ಠಾಣೆಗೆ ದೂರು ಸಲ್ಲಿಸಿದ ನಂತರ ಪೋಲೀಸರು ಇದೀಗ ಇಬ್ಬರು ವಂಚಕರನ್ನು ಬಂಧಿಸಿದ್ದಾರೆ. ಇನ್ಸ್​ಪೆಕ್ಟರ್​ ಪ್ರವೀಣ್ ಬಾಬು‌ ನೇತೃತ್ವದ ತಂಡ ಈ ಕಾರ್ಯಾಚರಣೆ ನಡೆಸಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

G20 Summit: ಭಯೋತ್ಪಾದನೆ- ಮಾದಕ ದ್ರವ್ಯ ಸಾಗಾಟ ತಡೆಗೆ ಜಾಗತಿಕ ಕ್ರಮ, ನಾಲ್ಕು ಉಪ ಕ್ರಮ ಪ್ರಸ್ತಾಪಿಸಿದ ಪ್ರಧಾನಿ ಮೋದಿ!

"ಗಾಳ ಹಾಕಿ ಮೀನು ಹಿಡಿಯುವ ಕಲೆಗಾರಿಕೆ ನನಗಿದೆ": ಸಿಎಂ ಎದುರೇ DK Shivakumar ಮಾರ್ಮಿಕ ಮಾತು!

Ashes: ಎರಡೇ ದಿನಕ್ಕೇ Australia vs England ಮೊದಲ ಟೆಸ್ಟ್ ಮುಕ್ತಾಯ; 104 ವರ್ಷಗಳ ಬಳಿಕ ಅತ್ಯಪರೂಪದ ದಾಖಲೆ!

ನೀವು ಮತ ನೀಡದಿದ್ದರೆ ನಾನು ನಿಮ್ಮ ನಗರಕ್ಕೆ ಹಣ ನೀಡುವುದಿಲ್ಲ: ಅಜಿತ್ ಪವಾರ್ ಬಹಿರಂಗ ಬೆದರಿಕೆ

ಶಾಸಕರ ಖರೀದಿ ನಡೆಯುತ್ತಿದೆ; ಆದ್ರೆ ಕಾಂಗ್ರೆಸ್‌ನಿಂದ ಹೊರಬರುವವರ ಜತೆ ಸರ್ಕಾರ ರಚಿಸಲ್ಲ: ಪ್ರಹ್ಲಾದ್ ಜೋಶಿ

SCROLL FOR NEXT