ಕೆ.ಸುಧಾಕರ್ 
ರಾಜ್ಯ

ಬ್ರಿಟನ್‌ನಿಂದ ಬಂದ 26 ಮಂದಿಯಲ್ಲಿ ಕೋವಿಡ್ ಸೋಂಕು ದೃಢ: ಸುಧಾಕರ್

ಬ್ರಿಟನ್‌ನಿಂದ ರಾಜ್ಯಕ್ಕೆ ಬಂದ 1,614 ಜನರನ್ನು ಈವರೆಗೆ ತಪಾಸಣೆಗೆ ಒಳಪಡಿಸಲಾಗಿದ್ದು, ಈ ಪೈಕಿ 26 ಮಂದಿಯಲ್ಲಿ ಕೋವಿಡ್ ಸೋಂಕು ದೃಢಪಟ್ಟಿದೆ ಎಂದು ಆರೋಗ್ಯ ಸಚಿವ ಕೆ.ಸುಧಾಕರ್ ತಿಳಿಸಿದ್ದಾರೆ.

ಬೆಂಗಳೂರು: ಬ್ರಿಟನ್‌ನಿಂದ ರಾಜ್ಯಕ್ಕೆ ಬಂದ 1,614 ಜನರನ್ನು ಈವರೆಗೆ ತಪಾಸಣೆಗೆ ಒಳಪಡಿಸಲಾಗಿದ್ದು, ಈ ಪೈಕಿ 26 ಮಂದಿಯಲ್ಲಿ ಕೋವಿಡ್ ಸೋಂಕು ದೃಢಪಟ್ಟಿದೆ ಎಂದು ಆರೋಗ್ಯ ಸಚಿವ ಕೆ.ಸುಧಾಕರ್ ತಿಳಿಸಿದ್ದಾರೆ.

ಬೆಂಗಳೂರಿನಲ್ಲಿ ಮಾತನಾಡಿದ ಅವರು, ಬ್ರಿಟನ್ ನಿಂದ ಬಂದವರ ಆರೋಗ್ಯ ತಪಾಸಣೆ ನಿಮ್ಹಾನ್ಸ್‌ನಲ್ಲಿ ನಡೆದಿದ್ದು, ಈ ಮಾಹಿತಿಯನ್ನು ಕೇಂದ್ರಕ್ಕೆ ಕಳುಹಿಸಲಾಗಿದೆ ಎಂದು ಹೇಳಿದ್ದಾರೆ.

ಸೋಂಕು ಪತ್ತೆ ಆದ ಎಲ್ಲರಿಗೂ ಸರ್ಕಾರದ ಸುಪರ್ದಿಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಅವರಲ್ಲಿ ಯಾವೇ ಥರದ ಗಂಭೀರ ಲಕ್ಷಣಗಳು ಕಂಡುಬಂದಿಲ್ಲ. ಯಾರೂ ಹೋಮ್‌ ಐಸೋಲೇಷನ್‌ನಲ್ಲಿ ಇಲ್ಲ’ ಎಂದೂ ಅವರು ಸ್ಪಷ್ಟಪಡಿಸಿದರು. 

ವಿದೇಶದಿಂದ ಬಂದವರ ಪೈಕಿ ಅನೇಕರು ಇನ್ನೂ ಪತ್ತೆ ಆಗಿಲ್ಲ. ಅದರಲ್ಲೂ ಬ್ರಿಟನ್‌ನಿಂದ ಬಂದವರಿದ್ದಾರೆ. ಅನೇಕರು ಮೊಬೈಲ್‌ ಸ್ವಿಚ್ ಆಫ್‌ ಮಾಡಿಕೊಂಡಿದ್ದಾರೆ. ಅವರನ್ನು ಪತ್ತೆ ಮಾಡುವ ಕೆಲಸ ಮುಂದುವರಿದೆ, AWW, ಪ್ರತಿಕ್ರಿಯಿಸಿದ ಸಚಿವರು, ‘ವರದಿ ಬರಲು ಕನಿಷ್ಠ 48 ಗಂಟೆ ಬೇಕಾಗಿದೆ. ನಿಮ್ಹಾನ್ಸ್‌ ವರದಿಯನ್ನು ಕೇಂದ್ರ ಸರ್ಕಾರಕ್ಕೆ ಕಳುಹಿಸಿಲಾಗಿದೆ. ಇಡೀ ದೇಶದ ಎಲ್ಲ ರಾಜ್ಯಗಳಿಂದ ಬಂದ ವರದಿಯನ್ನು ಪರಿಶೀಲಿಸಿ, ಐಸಿಎಂಆರ್‌ನಿಂದ ವರದಿ. ದೆಹಲಿಯಿಂದ ಐಸಿಎಂಆರ್‌ ವರದಿ ಇಂದು ಪ್ರಕಟ ಆಗುವ ನಿರೀಕ್ಷೆ ಇದೆ. ನಾನು ಕೂಡಾ ಐಸಿಎಂಆರ್‌ ಜೊತೆ ಮಾತನಾಡುತ್ತೇನೆ’ ಎಂದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಜಮ್ಮುವಿನಲ್ಲಿ ಭೀಕರ ಮಳೆಯಿಂದ ಭಾರೀ ಅನಾಹುತ ಸೃಷ್ಟಿ: ವೈಷ್ಣೋದೇವಿ ಮಾರ್ಗದಲ್ಲಿ ಭೂಕುಸಿತ, ಕನಿಷ್ಠ 13 ಮಂದಿ ಸಾವು

ದೇಶಾದ್ಯಂತ ಗಣೇಶ ಚತುರ್ಥಿ ಸಂಭ್ರಮ: ದೇವಾಲಯಗಳಲ್ಲಿ ವಿಶೇಷ ಪೂಜೆ, ರಾಷ್ಟ್ರಪತಿ, ಪ್ರಧಾನಿ, ಮುಖ್ಯಮಂತ್ರಿಗಳಿಂದ ಶುಭಾಶಯ

ಬೂಕರ್ ಪ್ರಶಸ್ತಿ ಮಹತ್ವ ತಿಳಿದಿದ್ದರೆ ನನ್ನನ್ನು ಟೀಕಿಸುತ್ತಿರಲಿಲ್ಲ, ಸಾಹಿತ್ಯ ಸಮ್ಮೇಳನದ ವಿಡಿಯೋ ತಿರುಚಲಾಗಿದೆ: ಬಾನು ಮುಷ್ತಾಕ್

ಡಿಕೆಶಿ RSS ಗೀತೆ ಹೇಳಿದ್ದೂ ರಾಹುಲ್‌ ಗಾಂಧಿಗೆ ತಲುಪಲಿ: ಶಾಕ್ ಕೊಟ್ಟ ಸತೀಶ್‌ ಜಾರಕಿಹೊಳಿ ಹೇಳಿಕೆ

ಧರ್ಮಸ್ಥಳ ಕೇಸ್: ತನಿಖೆ ಶೀಘ್ರಗತಿ ಪೂರ್ಣಗೊಳಿಸಲು SIT ಪ್ರಯತ್ನ; ಗೃಹ ಸಚಿವ ಡಾ.ಜಿ.ಪರಮೇಶ್ವರ್

SCROLL FOR NEXT