ಬಸವರಾಜ ಬೊಮ್ಮಾಯಿ 
ರಾಜ್ಯ

ಹೊಸ ವರ್ಷಾಚರಣೆ ದಿನ ನೈಟ್ ಕರ್ಫ್ಯೂ ಇಲ್ಲ, ಬಹಿರಂಗ ಆಚರಣೆಗೆ ನಿಷೇಧ: ಬೊಮ್ಮಾಯಿ

ಹೊಸ ವರ್ಷಾಚರಣೆ ಹಿನ್ನೆಲೆ ಎರಡು ದಿನಗಳಿಗೆ ಸೀಮಿತವಾಗಿ ಯಾವುದೇ ನೈಟ್ ಕರ್ಫ್ಯೂ ಹೇರುವುದಿಲ್ಲ. ಆದರೆ ಬಹಿರಂಗ ಆಚರಣೆ ನಿಷೇಧಿಸಲಾಗುತ್ತದೆ ಎಂದು ಗೃಹ ಸಚಿವ ಬಸವರಾಜ್ ಬೊಮ್ಮಾಯಿ ಅವರು ಸೋಮವಾರ ಹೇಳಿದ್ದಾರೆ.

ಬೆಂಗಳೂರು: ಹೊಸ ವರ್ಷಾಚರಣೆ ಹಿನ್ನೆಲೆ ಎರಡು ದಿನಗಳಿಗೆ ಸೀಮಿತವಾಗಿ ಯಾವುದೇ ನೈಟ್ ಕರ್ಫ್ಯೂ ಹೇರುವುದಿಲ್ಲ. ಆದರೆ ಬಹಿರಂಗ ಆಚರಣೆ ನಿಷೇಧಿಸಲಾಗುತ್ತದೆ ಎಂದು ಗೃಹ ಸಚಿವ ಬಸವರಾಜ್ ಬೊಮ್ಮಾಯಿ ಅವರು ಸೋಮವಾರ ಹೇಳಿದ್ದಾರೆ.

ವಿಧಾನಸೌಧದಲ್ಲಿ ಸಭೆ ಬಳಿಕ ಮಾತನಾಡಿದ ಅವರು, ಹೊಸ ಆಚರಣೆ ಸಂಬಂಧ ಆರೋಗ್ಯಾಧಿಕಾರಿ, ಪೊಲೀಸ್ ಅಧಿಕಾರಿ ಜೊತೆ ಸಭೆ ನಡೆಸಿದ್ದೇವೆ. ಡಿ.17ರಂದು ಹೊರಡಿಸಿರುವ ಮಾರ್ಗಸೂಚಿಗೆ ಕೆಲ ಮಾರ್ಪಾಡು‌ ಮಾಡಿ ಅಂತಿಮ ಮಾರ್ಗಸೂಚಿ ಹೊರಡಿಸುತ್ತೇವೆ. ನಗರ ಪೊಲೀಸ್ ಆಯುಕ್ತರು ಬೆಂಗಳೂರಿಗೆ ಸೀಮಿತವಾಗಿ ಮಾರ್ಗಸೂಚಿ ಹೊರಡಿಸಲಿದ್ದಾರೆ. ಪೊಲೀಸ್ ಮಹಾ ನಿರ್ದೇಶಕರು ಇತರ ಜಿಲ್ಲೆಯ ನಗರಗಳಿಗೆ ಅನ್ವಯವಾಗುವ ಮಾರ್ಗಸೂಚಿ ಹೊರಡಿಸುತ್ತಾರೆ ಎಂದರು.

ರೆಸಾರ್ಟ್ ಗಳಲ್ಲಿ ಹೊಸ ವರ್ಷಾಚರಣೆಗೆ ನಿಷೇಧ ಇರಲಿದೆ. ಮ್ಯೂಸಿಕ್, ಬ್ಯಾಂಡ್ ಬಳಕೆ ನಿಷೇಧಿಸಲಾಗಿದೆ. ಸಾರ್ವಜನಿಕ ಬಹಿರಂಗ ಆಚರಣೆಯನ್ನು ನಿಷೇಧಿಸಲಾಗುತ್ತದೆ. ಆಂತರಿಕವಾಗಿ ಆಚರಣೆಗೆ ನಿರ್ಬಂಧ ಇಲ್ಲ. ಪ್ರಮುಖ ರಸ್ತೆ, ಪ್ರದೇಶವಾರು ನಿರ್ಬಂಧ ಹಾಕಲಾಗುತ್ತದೆ ಎಂದು ಸ್ಪಷ್ಟಪಡಿಸಿದರು.

ರೂಪಾಂತರಿತ ವೈರಸ್ ಹರಡದಂತೆ ಕ್ರಮ ಕೈಗೊಳ್ಳುವ ಬಗ್ಗೆ ಚರ್ಚೆ ನಡೆದಿದೆ. 27 ಮಂದಿಗೆ ಕೋವಿಡ್ ಪಾಸಿಟಿವ್ ಬಂದಿದೆ. ಯುಕೆಯಿಂದ‌ ಬಂದವರು ಕಡ್ಡಾಯ ಟೆಸ್ಟ್ ಮಾಡಿಸಬೇಕು. ತಪ್ಪು ವಿಳಾಸ ಕೊಟ್ಟವರನ್ನು ಟ್ರ್ಯಾಕ್ ಮಾಡಿ ಟ್ರೇಸ್‌ ಮಾಡುವ ಬಗ್ಗೆ ಚರ್ಚೆ ನಡೆದಿದೆ. ಅವರನ್ನು ಆದಷ್ಟು ಬೇಗ ಟ್ರೇಸ್ ಮಾಡುತ್ತೇವೆ ಎಂದು ಹೇಳಿದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಎಸ್ ಜಾನಕಿ ಇನ್ನಿಲ್ಲ: ದಕ್ಷಿಣ ಭಾರತದ ಗಾನ ಕೋಗಿಲೆ ಮೈಸೂರಿನಲ್ಲಿ ನಿಧನ!

5th T20I: ಬಟ್ಲರ್, ಬ್ರೂಕ್ ಅರ್ಭಟ; ಇಂಗ್ಲೆಂಡ್ ವಿರುದ್ಧ ಭಾರತಕ್ಕೆ ಹೀನಾಯ ಸೋಲು, ಸರಣಿ ವೈಟ್‌ವಾಶ್

ಖಿನ್ನತೆಗೆ ಜಾರಿದ್ದೆ, ಗುಣಪಡಿಸಲು ಮಗು ಮಾಡಿಕೊಳ್ಳಿ ಎಂದು ವೈದ್ಯರು ಹೇಳಿದ್ರು; ಹುಡುಗನ ಎಲ್ಲಿ ಹುಡುಕಲಿ?: Endometriosis ಭಯಾನಕತೆ ಬಿಚ್ಚಿಟ್ಟ ಶಮಿತಾ ಶೆಟ್ಟಿ

17 ಭಾಷೆಗಳಲ್ಲಿ 48 ಸಾವಿರ ಹಾಡುಗಳಿಗೆ ಧ್ವನಿ: 2013ರಲ್ಲಿ ಪದ್ಮಭೂಷಣ ತಿರಸ್ಕರಿಸಿದ್ದ ದಿಟ್ಟ ಗಾಯಕಿ ಎಸ್ ಜಾನಕಿ!

ಪುಣೆಯಲ್ಲಿ ತ್ಯಾಜ್ಯದ ಗುಡ್ಡ ಬಿದ್ದು ಕಟ್ಟಡ ಕುಸಿತ: 8 ಮಂದಿ ಸಾವು; 14 ಜನರ ರಕ್ಷಣೆ, ಒಬ್ಬರು ಇನ್ನೂ ನಾಪತ್ತೆ!