ಬಸವರಾಜ ಬೊಮ್ಮಾಯಿ 
ರಾಜ್ಯ

ಹೊಸ ವರ್ಷಾಚರಣೆ ದಿನ ನೈಟ್ ಕರ್ಫ್ಯೂ ಇಲ್ಲ, ಬಹಿರಂಗ ಆಚರಣೆಗೆ ನಿಷೇಧ: ಬೊಮ್ಮಾಯಿ

ಹೊಸ ವರ್ಷಾಚರಣೆ ಹಿನ್ನೆಲೆ ಎರಡು ದಿನಗಳಿಗೆ ಸೀಮಿತವಾಗಿ ಯಾವುದೇ ನೈಟ್ ಕರ್ಫ್ಯೂ ಹೇರುವುದಿಲ್ಲ. ಆದರೆ ಬಹಿರಂಗ ಆಚರಣೆ ನಿಷೇಧಿಸಲಾಗುತ್ತದೆ ಎಂದು ಗೃಹ ಸಚಿವ ಬಸವರಾಜ್ ಬೊಮ್ಮಾಯಿ ಅವರು ಸೋಮವಾರ ಹೇಳಿದ್ದಾರೆ.

ಬೆಂಗಳೂರು: ಹೊಸ ವರ್ಷಾಚರಣೆ ಹಿನ್ನೆಲೆ ಎರಡು ದಿನಗಳಿಗೆ ಸೀಮಿತವಾಗಿ ಯಾವುದೇ ನೈಟ್ ಕರ್ಫ್ಯೂ ಹೇರುವುದಿಲ್ಲ. ಆದರೆ ಬಹಿರಂಗ ಆಚರಣೆ ನಿಷೇಧಿಸಲಾಗುತ್ತದೆ ಎಂದು ಗೃಹ ಸಚಿವ ಬಸವರಾಜ್ ಬೊಮ್ಮಾಯಿ ಅವರು ಸೋಮವಾರ ಹೇಳಿದ್ದಾರೆ.

ವಿಧಾನಸೌಧದಲ್ಲಿ ಸಭೆ ಬಳಿಕ ಮಾತನಾಡಿದ ಅವರು, ಹೊಸ ಆಚರಣೆ ಸಂಬಂಧ ಆರೋಗ್ಯಾಧಿಕಾರಿ, ಪೊಲೀಸ್ ಅಧಿಕಾರಿ ಜೊತೆ ಸಭೆ ನಡೆಸಿದ್ದೇವೆ. ಡಿ.17ರಂದು ಹೊರಡಿಸಿರುವ ಮಾರ್ಗಸೂಚಿಗೆ ಕೆಲ ಮಾರ್ಪಾಡು‌ ಮಾಡಿ ಅಂತಿಮ ಮಾರ್ಗಸೂಚಿ ಹೊರಡಿಸುತ್ತೇವೆ. ನಗರ ಪೊಲೀಸ್ ಆಯುಕ್ತರು ಬೆಂಗಳೂರಿಗೆ ಸೀಮಿತವಾಗಿ ಮಾರ್ಗಸೂಚಿ ಹೊರಡಿಸಲಿದ್ದಾರೆ. ಪೊಲೀಸ್ ಮಹಾ ನಿರ್ದೇಶಕರು ಇತರ ಜಿಲ್ಲೆಯ ನಗರಗಳಿಗೆ ಅನ್ವಯವಾಗುವ ಮಾರ್ಗಸೂಚಿ ಹೊರಡಿಸುತ್ತಾರೆ ಎಂದರು.

ರೆಸಾರ್ಟ್ ಗಳಲ್ಲಿ ಹೊಸ ವರ್ಷಾಚರಣೆಗೆ ನಿಷೇಧ ಇರಲಿದೆ. ಮ್ಯೂಸಿಕ್, ಬ್ಯಾಂಡ್ ಬಳಕೆ ನಿಷೇಧಿಸಲಾಗಿದೆ. ಸಾರ್ವಜನಿಕ ಬಹಿರಂಗ ಆಚರಣೆಯನ್ನು ನಿಷೇಧಿಸಲಾಗುತ್ತದೆ. ಆಂತರಿಕವಾಗಿ ಆಚರಣೆಗೆ ನಿರ್ಬಂಧ ಇಲ್ಲ. ಪ್ರಮುಖ ರಸ್ತೆ, ಪ್ರದೇಶವಾರು ನಿರ್ಬಂಧ ಹಾಕಲಾಗುತ್ತದೆ ಎಂದು ಸ್ಪಷ್ಟಪಡಿಸಿದರು.

ರೂಪಾಂತರಿತ ವೈರಸ್ ಹರಡದಂತೆ ಕ್ರಮ ಕೈಗೊಳ್ಳುವ ಬಗ್ಗೆ ಚರ್ಚೆ ನಡೆದಿದೆ. 27 ಮಂದಿಗೆ ಕೋವಿಡ್ ಪಾಸಿಟಿವ್ ಬಂದಿದೆ. ಯುಕೆಯಿಂದ‌ ಬಂದವರು ಕಡ್ಡಾಯ ಟೆಸ್ಟ್ ಮಾಡಿಸಬೇಕು. ತಪ್ಪು ವಿಳಾಸ ಕೊಟ್ಟವರನ್ನು ಟ್ರ್ಯಾಕ್ ಮಾಡಿ ಟ್ರೇಸ್‌ ಮಾಡುವ ಬಗ್ಗೆ ಚರ್ಚೆ ನಡೆದಿದೆ. ಅವರನ್ನು ಆದಷ್ಟು ಬೇಗ ಟ್ರೇಸ್ ಮಾಡುತ್ತೇವೆ ಎಂದು ಹೇಳಿದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT