ಈಶ್ವರ ಬಿದ್ರಿ 
ರಾಜ್ಯ

ಬಾಲಿವುಡ್ ಹಿರಿಯ ಛಾಯಾಗ್ರಾಹಕ ಈಶ್ವರ ಬಿದ್ರಿ ವಿಧಿವಶ

ಬಾಲಿವುಡ್‌ ಛಾಯಾಗ್ರಾಹಕರಾಗಿ 1990ರ ದಶಕದಲ್ಲಿ ದೊಡ್ಡ ಹೆಸರು ಮಾಡಿದ್ದ ಕನ್ನಡಿಗ ಈಶ್ವರ ಬಿದ್ರಿ (87) ಅನಾರೋಗ್ಯದಿಂದ ಭಾನುವಾರ ಬೆಳಗಾವಿಯಲ್ಲಿ ನಿಧನರಾದರು.

ಬೆಳಗಾವಿ: ಬಾಲಿವುಡ್‌ ಛಾಯಾಗ್ರಾಹಕರಾಗಿ 1990ರ ದಶಕದಲ್ಲಿ ದೊಡ್ಡ ಹೆಸರು ಮಾಡಿದ್ದ ಕನ್ನಡಿಗ ಈಶ್ವರ ಬಿದ್ರಿ (87) ಅನಾರೋಗ್ಯದಿಂದ ಭಾನುವಾರ ಬೆಳಗಾವಿಯಲ್ಲಿ ನಿಧನರಾದರು. 

ಅವರಿಗೆ ಪತ್ನಿ, ಪುತ್ರ ಇದ್ದಾರೆ, ವಿಜಯಪುರದಲ್ಲಿ ಸಂಜೆ ಅಂತ್ಯಕ್ರಿಯೆ ನೆರವೇರಿತು.ಬೆಂಗಳೂರಿನ ಎಸ್‌.ಜೆ. ಪಾಲಿಟೆಕ್ನಿಕ್‌ನಲ್ಲಿ ಸಿನಿಮಾಟೊಗ್ರಫಿ ಕಲಿತ ಅವರು, ಮುಂಬೈನಲ್ಲಿ ಕನ್ನಡಿಗರೇ ಆದ ವಿ.ಕೆ. ಮೂರ್ತಿ ಅವರ ಬಳಿ ಸಹಾಯಕರಾಗಿ ಕೆಲಸ ಮಾಡಿದ್ದರು. 

ಡಿಸೆಂಬರ್ 20 ರಂದು ವಿವಾಹ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದ ಈಶ್ವರ್ ಬಿದ್ರಿ ಅವರಿಗೆ ಹೃದಯಾಘಾತವಾಗಿತ್ತು, ಕೂಡಲೇ ಅವರನ್ನು ಕೆಎಲ್ ಇ ಆಸ್ಪತ್ರೆಗೆ ದಾಖಲಿಸಲಾಗಿತ್ತು. ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದ ಅವರಿಗೆ ಮತ್ತೆ ಹೃದಯಾಘಾತವಾದ್ದರಿಂದ ಭಾನುವಾರ ರಾತ್ರಿ 9.50 ಕ್ಕೆ ಇಹ ಲೋಕ ತ್ಯಜಿಸಿದ್ದಾರೆ ಎಂದು ಈಶ್ವರ ಅವರ ಪುತ್ರ ಸಂಜೀವ್ ಬಿದ್ರಿ ತಿಳಿಸಿದ್ದಾರೆ.

ವಿ.ಕೆ. ಮೂರ್ತಿ ಛಾಯಾಗ್ರಹಣ ಮಾಡಿರುವ ‘ಪ್ಯಾಸಾ’, ‘ಕಾಗಝ್‌ ಕೆ ಫೂಲ್‌’ ಸೇರಿದಂತೆ ಹಲವು  ಹಿಂದಿ ಚಿತ್ರಗಳಿಗೆ ಸಹಾಯಕ ಛಾಯಾಗ್ರಾಹಕರಾಗಿ ಕಾರ್ಯನಿರ್ವಹಿಸಿದ್ದರು. ‘ಬಾರ್ಡರ್‌’, ‘ಘಾತಕ್‌’, ‘ಅಂದಾಜ್‌’, ‘ಢಾಯಿ ಅಕ್ಷರ್ ಪ್ರೇಮ್‌ ಕೆ’, ‘ಅಂದಾಜ್‌ ಅಪ್ನಾ ಅಪ್ನಾ’, ‘ದಾಮಿನಿ’, ‘ಬಟ್ವಾರಾ’, ‘ಗುಲಾಮಿ’, ‘ಹತ್ಯಾರ್‌’, ‘ಯತೀಮ್‌’ ಸೇರಿದಂತೆ ಹಲವು ಹಿಂದಿ
ಚಿತ್ರಗಳಿಗೆ ಛಾಯಾಗ್ರಾಹಕರಾಗಿ ಕೆಲಸ ಮಾಡಿದ್ದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

Karnataka CM News LIVE Updates | ಭಾವುಕ ಕ್ಷಣಕ್ಕೆ ಸಾಕ್ಷಿಯಾದ ಬ್ರೇಕ್ ಫಾಸ್ಟ್ ಮೀಟಿಂಗ್: ಸಿದ್ದರಾಮಯ್ಯ ಕಾಲಿಗೆ ಬಿದ್ದು ಆಶೀರ್ವಾದ ಪಡೆದ ಡಿ.ಕೆ ಶಿವಕುಮಾರ್, ಪರಸ್ಪರ ಆಲಿಂಗನ..!

ಮಧ್ಯಪ್ರಾಚ್ಯದಲ್ಲಿ ಮತ್ತೆ ಯುದ್ಧದ ಕಾರ್ಮೋಡ: 4 ಇರಾನ್ ಡ್ರೋನ್‌ಗಳನ್ನು ಹೊಡೆದುರುಳಿಸಿದ ಅಮೆರಿಕಾ, ಹೋರ್ಮುಜ್‌ನಲ್ಲಿ ಉದ್ವಿಗ್ನತೆ ತೀವ್ರ..!

ಕ್ಲೈಮ್ಯಾಕ್ಸ್‌ ಹಂತಕ್ಕೆ ಕುರ್ಚಿ ಕದನ: ಸಿಎಂ ಸ್ಥಾನಕ್ಕೆ ಡಿಕೆ ಶಿವಕುಮಾರ್ ಹೆಸರು ಫೈನಲ್?, ಮೇ 31ಕ್ಕೆ ಪ್ರಮಾಣವಚನ ಸಾಧ್ಯತೆ

ಸಿದ್ದು ನಿರ್ಗಮನದ ಬಳಿಕ ಅಸಮಾಧಾನ ತಣಿಸಲು ಕಾಂಗ್ರೆಸ್ ಮಾಸ್ಟರ್‌ಪ್ಲ್ಯಾನ್: 4 DCM ಹುದ್ದೆ ಸೃಷ್ಟಿಗೆ ಚಿಂತನೆ, ಜಮೀರ್, ಪ್ರಿಯಾಂಕ್ ಖರ್ಗೆ, ಎಂಬಿ ಪಾಟೀಲ್ ಹೆಸರು ಫೈನಲ್?

ಕರ್ನಾಟಕ ಕಾಂಗ್ರೆಸ್‌ನಲ್ಲಿ ಮತ್ತೊಂದು ಪವರ್ ಶಿಫ್ಟ್: ಅಹಿಂದ ಸಮೀಕರಣಕ್ಕೆ ಮಾಸ್ಟರ್‌ಪ್ಲ್ಯಾನ್, ಸತೀಶ್‌ ಜಾರಕಿಹೊಳಿಗೆ KPCC ಜವಾಬ್ದಾರಿ?

SCROLL FOR NEXT