ಕೊಲೆಯಾದ ಯುವಕ 
ರಾಜ್ಯ

ಬೀದರ್: ಪೆಟ್ರೋಲ್ ಸುರಿದು ಬೆಂಕಿ ಹಚ್ಚಿ ಯುವಕನ ಭೀಕರ ಕೊಲೆ

ಯುವಕನೊಬ್ಬನನ್ನು ಬರ್ಬರವಾಗಿ ಹತ್ಯೆ ಮಾಡಿದ್ದಲ್ಲದೆ ಪೆಟ್ರೋಲ್ ಹಾಕಿ ಬೆಂಕಿಯಿಂದ ಸುಟ್ಟಿರುವ ಭೀಕರ ಘಟನೆ ಬೀದರ್ ಜಿಲ್ಲೆ ಔರಾದ್ ತಾಲೂಕಿನಲ್ಲಿ ನಡೆದಿದೆ.

ಬೀದರ್: ಯುವಕನೊಬ್ಬನನ್ನು ಬರ್ಬರವಾಗಿ ಹತ್ಯೆ ಮಾಡಿದ್ದಲ್ಲದೆ ಪೆಟ್ರೋಲ್ ಹಾಕಿ ಬೆಂಕಿಯಿಂದ ಸುಟ್ಟಿರುವ ಭೀಕರ ಘಟನೆ ಬೀದರ್ ಜಿಲ್ಲೆ ಔರಾದ್ ತಾಲೂಕಿನಲ್ಲಿ ನಡೆದಿದೆ.

ಔರಾದ್ ನ ಕೋಟಗ್ಯಾಳ ಗ್ರಾಮದ ಶಿವಕುಮಾರ್ ಹಾವಪ್ಪಗೋಡೆ (17) ಮೃತ ದುರ್ದೈವಿ.

ಯುವಕನನ್ನು ಚಾಕುವಿನಿಂದ ಚುಚ್ಚಿ ಕೊಲ್ಲಲಾಗಿದ್ದು ಬಳಿಕ ಪೆಟ್ರೋಲ್ ಸುರಿದು ಬೆಂಕಿ ಹಚ್ಚಲಾಗಿದೆ. 

ಯುವಕ ಶಿವಕುಮಾರ್ ಮಹಾರಾಷ್ಟ್ರದ ಲಾತೂರ್ ಜಿಲ್ಲೆಯ ದೇವಣಿ ಪಟ್ಟಣದಲ್ಲಿದ್ದ ಸೋದರಿ ಮನೆಯಿಂದ ಹೊಂತಿರುಗಿತ್ತಿದ್ದ. ಮಗ ತಡರಾತ್ರಿಯಾದರೂ ಮನೆಗೆ ಬಾರದ್ದಕ್ಕೆ ಪೋಷಕರಿಗೆ ಅನುಮಾನ ಬಂದಿದ್ದು ಹುಡುಕಾಟ ನಡೆಸಿದಾಗ ಯುವಕನ ಬೈಕ್ ಪತ್ತೆಯಾಗಿದೆ. ಆ ನಂತರ ಪೋಲೀಸ್ ಸಹಕಾರದೊಡನೆ ಹುಡುಕಿದಾಗ ಮೃತದೇಹ ಸಿಕ್ಕಿದೆ.  

ಸ್ಥಳಕ್ಕೆ ಹೆಚ್ಚುವರಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ.ಗೋಪಾಲ ಬ್ಯಾಕೋಡ್, ಡಿವೈಎಸ್​ಪಿ ಡಾ. ದೇವರಾಜ್ ಬಿ ಅವರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.ಮಲನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

SCROLL FOR NEXT