ಯಡಿಯೂರಪ್ಪ 
ರಾಜ್ಯ

ಸಾಹಸಸಿಂಹ ಡಾ. ವಿಷ್ಣುವರ್ಧನ್ ಪುಣ್ಯಸ್ಮರಣೆ: ಮುಖ್ಯಮಂತ್ರಿ ಗೌರವ ನಮನ

ಸಾಹಸಸಿಂಹ ಡಾ. ವಿಷ್ಣುವರ್ಧನ್ ಅವರ ಪುಣ್ಯಸ್ಮರಣೆಯ ಅಂಗವಾಗಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಗೌರವ ನಮನ ಸಲ್ಲಿಸಿದ್ದಾರೆ.

ಬೆಂಗಳೂರು: ಸಾಹಸಸಿಂಹ ಡಾ. ವಿಷ್ಣುವರ್ಧನ್ ಅವರ ಪುಣ್ಯಸ್ಮರಣೆಯ ಅಂಗವಾಗಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಗೌರವ ನಮನ ಸಲ್ಲಿಸಿದ್ದಾರೆ.

ಈ ಬಗ್ಗೆ ಟ್ವೀಟ್ ಮಾಡಿರುವ ಮುಖ್ಯಮಂತ್ರಿ ಯಡಿಯೂರಪ್ಪ, ಇಂದು ಕನ್ನಡ ಚಿತ್ರರಂಗದ ಮೇರು ನಟ, ಅಭಿಮಾನಿಗಳ ಪಾಲಿನ ಸಾಹಸಸಿಂಹ ಡಾ. ವಿಷ್ಣುವರ್ಧನ್ ಅವರ ಪುಣ್ಯಸ್ಮರಣೆಯ ದಿನ. ತಮ್ಮ ನೂರಾರು ಉತ್ತಮ ಚಿತ್ರಗಳ ಮೂಲಕ ಕನ್ನಡಿಗರ ನೆಚ್ಚಿನ ನಟನಾಗಿಯೇ ಉಳಿದಿರುವ ಡಾ.ವಿಷ್ಣುವರ್ಧನ್ ಕನ್ನಡ ನಾಡು ನುಡಿಗಳ ಸಾಂಸ್ಕೃತಿಕ ಏಕತೆಯ ರಾಯಭಾರಿಯಾಗಿ ಜನಮಾನಸದಲ್ಲಿ ಚಿರಸ್ಥಾಯಿಯಾಗಿದ್ದಾರೆ ಎಂದು ತಿಳಿಸಿದ್ದಾರೆ.

ಸಾಹಸಸಿಂಹ ಡಾ.ವಿಷ್ಣುವರ್ಧನ್ ಪುಣ್ಯತಿಥಿ ಹಿನ್ನೆಲೆಯಲ್ಲಿ ಶ್ರೇಷ್ಠ ಕಲಾವಿದನನ್ನು ಸಚಿವ ರಮೇಶ್ ಜಾರಕಿಹೊಳಿ‌ ಸ್ಮರಿಸಿದ್ದಾರೆ.

ಕನ್ನಡ ಚಲನಚಿತ್ರ ರಂಗದ ಧೃವತಾರೆಯಾಗಿ ಮಿಂಚಿದ ಸಾಹಸಸಿಂಹ ಡಾ.ವಿಷ್ಣುವರ್ಧನ್ ಅವರ ಪುಣ್ಯತಿಥಿಯ ದಿನವಾದ ಇಂದು ಈ ಮೇರುನಟನನ್ನು ಗೌರವಪೂರ್ವಕವಾಗಿ ಸ್ಮರಿಸೋಣ.

ಬಹುಭಾಷಾ ತಾರೆಯಾಗಿ ಕಲಾ ರಸಿಕರ ಮನದಲ್ಲಿ ಶಾಶ್ವತ ಸ್ಥಾನ ಪಡೆದಿರುವ ಡಾ. ವಿಷ್ಣುವರ್ಧನ್ ಅವರ ಕಲಾ ಪ್ರೌಢಿಮೆ, ನಟನಾ ಶ್ರೀಮಂತಿಕೆ ಹಾಗೂ ಸರ್ವಶ್ರೇಷ್ಠ ವ್ಯಕ್ತಿತ್ವದ ಪ್ರಭಾವ ಸದಾ ಜೀವಂತವಾಗಿದೆ.

ಸಾಮಾಜಿಕ ಸಂದೇಶಗಳನ್ನು ಸಾರುವ ಚಲನಚಿತ್ರಗಳಲ್ಲಿ ನಟಿಸುವ ಮೂಲಕ ರಾಜ್ಯದ ಜನಮನಗೆದ್ದ ಡಾ. ವಿಷ್ಣುವರ್ಧನ್ ಅವರು ಇಂದಿಗೂ ನಮ್ಮ ಮನೆ, ಮನದಲ್ಲಿ ಹಚ್ಚಹಸಿರಾಗಿ ಉಳಿದಿದ್ದಾರೆ.

ಡಾ. ವಿಷ್ಣುವರ್ಧನ್ ಅವರ 11 ನೇ ಪುಣ್ಯಸ್ಮರಣೆ ಯ ಈ‌ ದಿನ‌ ಅವರ ಪಾದಪದ್ಮಗಳಿಗೆ ನನ್ನ ಪ್ರಣಾಮಗಳು ಎಂದು ರಮೇಶ್ ಜಾರಕಿಹೊಳಿ‌ ಹೇಳಿಕೆಯಲ್ಲಿ ತಿಳಿಸಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ನ್ಯಾಯಾಂಗದಲ್ಲಿ ಭ್ರಷ್ಟಾಚಾರದ ಪಾಠ: ಕೇಂದ್ರ ಕ್ಷಮೆಯಾಚಿಸುತ್ತಿದ್ದಂತೆ NCERT ಪಠ್ಯ ಪುಸ್ತಕ ಬ್ಯಾನ್, ಪ್ರತಿಗಳನ್ನು ವಶಕ್ಕೆ ಪಡೆಯಲು ಸುಪ್ರೀಂ ಸೂಚನೆ

ಅಪ್ರಾಪ್ತ ಬಾಲಕಿಯೊಂದಿಗೆ ಅನುಚಿತ ವರ್ತನೆ: ಪೋಕ್ಸೋ ಕೇಸ್ ದಾಖಲಾಗುತ್ತಿದಂತೆ ಮಲ್ಲಿಕಾರ್ಜುನ ಮುತ್ಯಾ video ರಿಲೀಸ್!

'ನಿಮ್ಮ ಭಾಷಣ ನಾಚಿಕೆಯಿಲ್ಲದೆ ಸಮರ್ಥನೆ ಮಾಡಿಕೊಂಡಂತೆ ಇತ್ತು': ಐನ್ ಸ್ಟೈನ್ ನೆಹರೂಗೆ ಬರೆದ ಪತ್ರ ಉಲ್ಲೇಖಿಸಿ Modi ಟೀಕಿಸಿದ ಕಾಂಗ್ರೆಸ್

Ranji Trophy final: ಔಕಿಬ್ ನಬಿ ಬೌಲಿಂಗ್ ಮ್ಯಾಜಿಕ್‌ಗೆ ಬೆರಗಾದ ಕೆಎಲ್ ರಾಹುಲ್; ಆರಂಭದಲ್ಲೇ ಕರ್ನಾಟಕಕ್ಕೆ ಸಂಕಷ್ಟ!

T20 World cup 2026: 'ಆಕ್ರಮಣಕಾರಿ ಶೈಲಿ ಮುಂದುವರಿಸಿ': ಜಿಂಬಾಬ್ವೆ ವಿರುದ್ಧದ ಪಂದ್ಯಕ್ಕೂ ಮುನ್ನ ಟೀಂ ಇಂಡಿಯಾಗೆ ಅನಿಲ್ ಕುಂಬ್ಳೆ ಎಚ್ಚರಿಕೆ

SCROLL FOR NEXT