ಯಡಿಯೂರಪ್ಪ 
ರಾಜ್ಯ

ಸಾಹಸಸಿಂಹ ಡಾ. ವಿಷ್ಣುವರ್ಧನ್ ಪುಣ್ಯಸ್ಮರಣೆ: ಮುಖ್ಯಮಂತ್ರಿ ಗೌರವ ನಮನ

ಸಾಹಸಸಿಂಹ ಡಾ. ವಿಷ್ಣುವರ್ಧನ್ ಅವರ ಪುಣ್ಯಸ್ಮರಣೆಯ ಅಂಗವಾಗಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಗೌರವ ನಮನ ಸಲ್ಲಿಸಿದ್ದಾರೆ.

ಬೆಂಗಳೂರು: ಸಾಹಸಸಿಂಹ ಡಾ. ವಿಷ್ಣುವರ್ಧನ್ ಅವರ ಪುಣ್ಯಸ್ಮರಣೆಯ ಅಂಗವಾಗಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಗೌರವ ನಮನ ಸಲ್ಲಿಸಿದ್ದಾರೆ.

ಈ ಬಗ್ಗೆ ಟ್ವೀಟ್ ಮಾಡಿರುವ ಮುಖ್ಯಮಂತ್ರಿ ಯಡಿಯೂರಪ್ಪ, ಇಂದು ಕನ್ನಡ ಚಿತ್ರರಂಗದ ಮೇರು ನಟ, ಅಭಿಮಾನಿಗಳ ಪಾಲಿನ ಸಾಹಸಸಿಂಹ ಡಾ. ವಿಷ್ಣುವರ್ಧನ್ ಅವರ ಪುಣ್ಯಸ್ಮರಣೆಯ ದಿನ. ತಮ್ಮ ನೂರಾರು ಉತ್ತಮ ಚಿತ್ರಗಳ ಮೂಲಕ ಕನ್ನಡಿಗರ ನೆಚ್ಚಿನ ನಟನಾಗಿಯೇ ಉಳಿದಿರುವ ಡಾ.ವಿಷ್ಣುವರ್ಧನ್ ಕನ್ನಡ ನಾಡು ನುಡಿಗಳ ಸಾಂಸ್ಕೃತಿಕ ಏಕತೆಯ ರಾಯಭಾರಿಯಾಗಿ ಜನಮಾನಸದಲ್ಲಿ ಚಿರಸ್ಥಾಯಿಯಾಗಿದ್ದಾರೆ ಎಂದು ತಿಳಿಸಿದ್ದಾರೆ.

ಸಾಹಸಸಿಂಹ ಡಾ.ವಿಷ್ಣುವರ್ಧನ್ ಪುಣ್ಯತಿಥಿ ಹಿನ್ನೆಲೆಯಲ್ಲಿ ಶ್ರೇಷ್ಠ ಕಲಾವಿದನನ್ನು ಸಚಿವ ರಮೇಶ್ ಜಾರಕಿಹೊಳಿ‌ ಸ್ಮರಿಸಿದ್ದಾರೆ.

ಕನ್ನಡ ಚಲನಚಿತ್ರ ರಂಗದ ಧೃವತಾರೆಯಾಗಿ ಮಿಂಚಿದ ಸಾಹಸಸಿಂಹ ಡಾ.ವಿಷ್ಣುವರ್ಧನ್ ಅವರ ಪುಣ್ಯತಿಥಿಯ ದಿನವಾದ ಇಂದು ಈ ಮೇರುನಟನನ್ನು ಗೌರವಪೂರ್ವಕವಾಗಿ ಸ್ಮರಿಸೋಣ.

ಬಹುಭಾಷಾ ತಾರೆಯಾಗಿ ಕಲಾ ರಸಿಕರ ಮನದಲ್ಲಿ ಶಾಶ್ವತ ಸ್ಥಾನ ಪಡೆದಿರುವ ಡಾ. ವಿಷ್ಣುವರ್ಧನ್ ಅವರ ಕಲಾ ಪ್ರೌಢಿಮೆ, ನಟನಾ ಶ್ರೀಮಂತಿಕೆ ಹಾಗೂ ಸರ್ವಶ್ರೇಷ್ಠ ವ್ಯಕ್ತಿತ್ವದ ಪ್ರಭಾವ ಸದಾ ಜೀವಂತವಾಗಿದೆ.

ಸಾಮಾಜಿಕ ಸಂದೇಶಗಳನ್ನು ಸಾರುವ ಚಲನಚಿತ್ರಗಳಲ್ಲಿ ನಟಿಸುವ ಮೂಲಕ ರಾಜ್ಯದ ಜನಮನಗೆದ್ದ ಡಾ. ವಿಷ್ಣುವರ್ಧನ್ ಅವರು ಇಂದಿಗೂ ನಮ್ಮ ಮನೆ, ಮನದಲ್ಲಿ ಹಚ್ಚಹಸಿರಾಗಿ ಉಳಿದಿದ್ದಾರೆ.

ಡಾ. ವಿಷ್ಣುವರ್ಧನ್ ಅವರ 11 ನೇ ಪುಣ್ಯಸ್ಮರಣೆ ಯ ಈ‌ ದಿನ‌ ಅವರ ಪಾದಪದ್ಮಗಳಿಗೆ ನನ್ನ ಪ್ರಣಾಮಗಳು ಎಂದು ರಮೇಶ್ ಜಾರಕಿಹೊಳಿ‌ ಹೇಳಿಕೆಯಲ್ಲಿ ತಿಳಿಸಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

Aligarh Businessman Murder: ಹಿಂದೂ ಮಹಾಸಭಾ ನಾಯಕಿ ಪೂಜಾ ಶಕುನ್ ಪಾಂಡೆ ಬಂಧನ! ಉದ್ಯಮಿಗೆ ಲೈಂಗಿಕ ಕಿರುಕುಳ ನೀಡಿದ್ರಾ?

SCROLL FOR NEXT