ಅನಂತ್ ಕುಮಾರ್ ಹೆಗಡೆ 
ರಾಜ್ಯ

ರಸ್ತೆಗಳಿಗೆ ಮುಸ್ಲಿಂ ನಾಯಕರ ಹೆಸರಿಡುವುದಕ್ಕೆ ಅನಂತಕುಮಾರ್ ಹೆಗಡೆ ವಿರೋಧ

ಪಾದರಾಯನಪುರದ ಅಡ್ಡ ರಸ್ತೆಗಳಿಗೆ ಮುಸ್ಲಿಮರ ಹೆಸರುಗಳನ್ನಿಡುವ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ -ಬಿಬಿಎಂಪಿ ತೀರ್ಮಾನಕ್ಕೆ ಸಂಸದ ಹಾಗೂ ಕೇಂದ್ರದ ಮಾಜಿ ಸಚಿವ ಅನಂತಕುಮಾರ ಹೆಗಡೆ ಆಕ್ಷೇಪ ವ್ಯಕ್ತಪಡಿಸಿದ್ದಾರೆ.

ಬೆಂಗಳೂರು: ಪಾದರಾಯನಪುರದ ಅಡ್ಡ ರಸ್ತೆಗಳಿಗೆ ಮುಸ್ಲಿಮರ ಹೆಸರುಗಳನ್ನಿಡುವ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ )ತೀರ್ಮಾನಕ್ಕೆ ಸಂಸದ ಹಾಗೂ ಕೇಂದ್ರದ ಮಾಜಿ ಸಚಿವ ಅನಂತಕುಮಾರ ಹೆಗಡೆ ಆಕ್ಷೇಪ ವ್ಯಕ್ತಪಡಿಸಿದ್ದಾರೆ.

ಪಾದರಾಯನಪುರದ ಅಡ್ಡ ರಸ್ತೆಗಳಿಗೆ ಸಮಾಜ ಸೇವಕರ ಹೆಸರಿಡಬೇಕೆನ್ನುವ ನಿರ್ಣಯ ಕೈಗೊಳ್ಳಲಾಗಿತ್ತು. ಆದರೆ, ಈಗ ಸಮಾಜ ಸೇವಕರ ಹೆಸರಿನಲ್ಲಿ ಮುಸ್ಲಿಮರ ಹೆಸರುಗಳನ್ನು ಮಾತ್ರ ಶಿಫಾರಸ್ಸು ಮಾಡಲಾಗಿದೆ. ಒಂದು ಕೋಮಿನ ತುಷ್ಟೀಕರಣಕ್ಕೆ ಮುಂದಾಗಲಾಗಿದೆ ಎಂದು ಬಿಬಿಎಂಪಿ ಆಯುಕ್ತರಿಗೆ ಬರೆದಿರುವ ಪತ್ರದಲ್ಲಿ ಅನಂತಕುಮಾರ ಹೆಗಡೆ ಆಕ್ಷೇಪ ವ್ಯಕ್ತಪಡಿಸಿದ್ದಾರೆ.

ಸ್ವಾತಂತ್ರ್ಯ ಹೋರಾಟಗಾರರು, ದೇಶಕ್ಕಾಗಿ ಹೋರಾಡಿದ ವೀರ ಸೈನಿಕರು, ರಾಷ್ಟ್ರದ ಮಹಾನ್ ವ್ಯಕ್ತಿಗಳ ಹೆಸರನ್ನು ಇಡಬಹುದು. ಆದರೆ, ಮುಸ್ಲಿಮರ ಹೆಸರನ್ನು ಇಡುವುದಕ್ಕೆ ನನ್ನ ತೀವ್ರ ವಿರೋಧವಿದೆ ಎಂದು ಅನಂತಕುಮಾರ ಹೆಗಡೆ ಹೇಳಿದ್ದಾರೆ.

ಒಂದೊಮ್ಮೆ ರಾಜ್ಯದ ಇತರ ನಗರಸಭೆ, ಪುರಸಭೆ, ಪಟ್ಟಣ ಪಂಚಾಯತ್ ಗಳೂ ಇದೇ ರೀತಿಯ ನಿರ್ಣಯ ತೆಗೆದುಕೊಂಡಲ್ಲಿ ಪರಿಸ್ಥಿತಿ ಊಹೆಗೂ ನಿಲುಕದಂತಿರುತ್ತದೆ. ಇದು ಕೋಮುಸಾಮರಸ್ಯ ಕೆಡುವುದಕ್ಕೆ ದಾರಿ ಮಾಡಿಕೊಡುತ್ತದೆ ಎಂದು ಅನಂತಕುಮಾರ ಹೆಗಡೆ ಪತ್ರದಲ್ಲಿ ತಿಳಿಸಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ನ್ಯಾಯಾಂಗದಲ್ಲಿ ಭ್ರಷ್ಟಾಚಾರದ ಪಾಠ: ಕೇಂದ್ರ ಕ್ಷಮೆಯಾಚಿಸುತ್ತಿದ್ದಂತೆ NCERT ಪಠ್ಯ ಪುಸ್ತಕ ಬ್ಯಾನ್, ಪ್ರತಿಗಳನ್ನು ವಶಕ್ಕೆ ಪಡೆಯಲು ಸುಪ್ರೀಂ ಸೂಚನೆ

T20 World Cup 2026: ವೆಸ್ಟ್ ಇಂಡೀಸ್ ವಿರುದ್ಧ ದಕ್ಷಿಣ ಆಫ್ರಿಕಾಕ್ಕೆ ಭರ್ಜರಿ ಜಯ; ಈ ಗೆಲುವಿಗಾಗಿ ಪರಿತಪಿಸುತ್ತಿತ್ತು ಭಾರತ!

ಕನ್ನಡ ಸಿನಿಮಾ ನಿರ್ದೇಶಕನ ಅಪಹರಿಸಿ, ಹಲ್ಲೆ: ನಟಿ ಸೇರಿದಂತೆ 11 ಜನರ ಬಂಧನ

ಉರ್ದು ಭಾಷೆಯಲ್ಲಿ ಸರ್ಕಾರದ ಜಾಹೀರಾತು: ಸಿಎಂ ಸಿದ್ದರಾಮಯ್ಯ ಸಮರ್ಥನೆ ಹೇಗಿದೆ ಗೊತ್ತಾ?

ಬಿಕಿನಿ ಧರಿಸಿರುವ ಮಹಿಳೆಯರ ಜೊತೆಗೆ ಸ್ಟೀಫನ್ ಹಾಕಿಂಗ್! Epstein ಫೈಲ್ಸ್ ನಲ್ಲಿ ಪೋಟೋ ಬಿಡುಗಡೆ

SCROLL FOR NEXT