ಉಪ ರಾಷ್ಟ್ರಪತಿ ಎಂ.ವೆಂಕಯ್ಯನಾಯ್ಡು 
ರಾಜ್ಯ

ಪ್ರತಿಭಟನೆ ಇರಲಿ, ಹಿಂಸಾಚಾರ ಬೇಡ -ವೆಂಕಯ್ಯ ನಾಯ್ಡು

ಭಾರತ  ವಿಶ್ವದ ಅತಿದೊಡ್ಡ ಆರ್ಥಿಕ ಶಕ್ತಿಯಾಗಿ ಬೆಳೆಯುವ ಎಲ್ಲಾ ಅವಕಾಶಗಳಿದ್ದು, ಇಂದಹ ದೇಶದಲ್ಲಿ ವಿರೋಧಿಸುವ ನೆಪದಲ್ಲಿ ಯಾರೂ ಹಿಂಸಾತ್ಮಕ ಕೃತ್ಯಗಳಿಗೆ ಇಳಿಯಬಾರದು ಎಂದು ಉಪ ರಾಷ್ಟ್ರಪತಿ ಎಂ.ವೆಂಕಯ್ಯ ನಾಯ್ಡು ಕಿವಿ ಮಾತು ಹೇಳಿದ್ದಾರೆ

ಹುಬ್ಬಳ್ಳಿ: ಭಾರತ  ವಿಶ್ವದ ಅತಿದೊಡ್ಡ ಆರ್ಥಿಕ ಶಕ್ತಿಯಾಗಿ ಬೆಳೆಯುವ ಎಲ್ಲಾ ಅವಕಾಶಗಳಿದ್ದು, ಇಂದಹ ದೇಶದಲ್ಲಿ ವಿರೋಧಿಸುವ ನೆಪದಲ್ಲಿ ಯಾರೂ ಹಿಂಸಾತ್ಮಕ ಕೃತ್ಯಗಳಿಗೆ ಇಳಿಯಬಾರದು ಎಂದು ಉಪ ರಾಷ್ಟ್ರಪತಿ ಎಂ.ವೆಂಕಯ್ಯ ನಾಯ್ಡು ಕಿವಿ ಮಾತು ಹೇಳಿದ್ದಾರೆ

ನಗರದಲ್ಲಿಂದು ದೇಶಪಾಂಡೆ ಕೌಶಲ್ಯಾಭಿವೃದ್ಧಿ ಕೇಂದ್ರದಲ್ಲಿ ಏಕ ಕಾಲಕ್ಕೆ 1500 ವಿದ್ಯಾರ್ಥಿ ವಿದ್ಯಾರ್ಥಿನಿಯರಿಗೆ ಪ್ರತ್ಯೇಕ ವಸತಿ ಸೌಲಭ್ಯದೊಂದಿಗೆ ಔದ್ಯೋಗಿಕ ತರಬೇತಿ ನೀಡುವ ಕೇಂದ್ರ ಉದ್ಘಾಟಿಸಿ ಮಾತನಾಡಿದ ಅವರು, ದೇಶವೆಂದರೆ ಕೇವಲ ನರೇಂದ್ರ ಮೋದಿ, ರಾಜ್ಯವೆಂದರೆ ಕೇವಲ ಯಡಿಯೂರಪ್ಪ ಅಲ್ಲ. ಯಾವುದೇ ಸರ್ಕಾರವಾದರೂ ಪ್ರಜಾಸತ್ತಾತ್ಮಕ ರೀತಿಯಲ್ಲಿ ವಿರೋಧವಿರಲಿ, ಹೋರಾಟಗಳಿರಲಿ. ಆದರೆ ಹಿಂಸೆ ಬೇಡ ಎಂದರು. 

ಶಿಕ್ಷಣ ಕೇವಲ ಪದವಿ ಪಡೆಯಲು, ಉದ್ಯೋಗಕ್ಕೆ ಸೇರಲು ಅಲ್ಲ. ಶಿಕ್ಷಣದಿಂದ ಜ್ಞಾನಾಭಿವೃದ್ಧಿಯಾಗಬೇಕು. ಶಿಕ್ಷಣ ವ್ಯವಸ್ಥೆಯಲ್ಲಿ ನೈತಿಕ ವಿಷಯಗಳನ್ನು ಅಳವಡಿಸಬೇಕು. ಬ್ರಿಟಿಷ್ ಪ್ರಭಾವಿತ ಇತಿಹಾಸವನ್ನು ನಾವು ಕಲಿಯುತ್ತಿದ್ದೇವೆ. ಬ್ರಿಟೀಷರು ನಮ್ಮನ್ನು ಆಳಿ ಮೋಸ ಮಾಡಿದರು. ಇಂಗ್ಲೀಷ್ ಕಲಿಯಿರಿ. ಆದರೆ ಇಂಗ್ಲೀಷರಂತೆ ವರ್ತಿಸಬೇಡಿ. ಯಾವುದೇ ದೇಶದಲ್ಲಿ ಕೆಲಸ ಮಾಡಿ, ಆದರೆ ಮಾತೃಭೂಮಿಯ ಬಗ್ಗೆ ಗೌರವ ಬೆಳೆಸಿಕೊಳ್ಳಿ ಎಂದು ಹೇಳಿದರು. 

ನಂತರ ಸರ್ಕಾರಿ ಶಾಲೆಯ ಮಕ್ಕಳೊಂದಿಗೆ ಸಂವಾದ ನಡೆಸಿದ ಎಂ. ವೆಂಕಯ್ಯ ನಾಯ್ಡು, 21 ನೇ ಶತಮಾನದಲ್ಲಿ ಯುವ ಜನಾಂಗದಲ್ಲಿ ಕೌಶಲ್ಯಾಭಿವೃದ್ಧಿ ಪಡಿಸುವಲ್ಲಿ ಖಾಸಗಿ ವಲಯದ ಪಾತ್ರ ಮಹತ್ವದ್ದಾಗಿದೆ ಎಂದರು. ಬಳಿಕ ಮಹಾದಾಯಿ ವಿವಾದ ಬಗ್ಗೆ  ರೈತ ನಿಯೋಗದೊಂದಿಗೆ ಮಾತುಕತೆ ನಡೆಸಿದ ಬಳಿಕ ಹುಬ್ಬಳ್ಳಿ- ಧಾರವಾಡ ಕ್ಷಿಪ್ರ ಬಸ್ ಸೇವೆ- ಬಿಆರ್ ಟಿ ಯೋಜನೆಗೆ ಚಾಲನೆ ನೀಡಿದರು.

ಹುಬ್ಬಳ್ಳಿಯಿಂದ ಧಾರವಾಡದವರೆಗೂ ಬಸ್ ನಲ್ಲಿಯೇ ತೆರಳಿದ ಎಂ. ವೆಂಕಯ್ಯ ನಾಯ್ಡು , ದೇಶವಾಸಿಗಳು ಪ್ರಯಾಣಕ್ಕಾಗಿ ಸಾರ್ವಜನಿಕ ಬಸ್ ಗಳನ್ನು ಬಳಸುವಂತೆ ಕರೆ ನೀಡಿದರು.ಕೇಂದ್ರ ಸಚಿವ ಪ್ರಹ್ಲಾದ್ ಜೋಷಿ, ರಾಜ್ಯ ಸಚಿವರಾದ ಪ್ರಹ್ಲಾದ್ ಜೋಷಿ, ಲಕ್ಷ್ಮಣ್ ಸವದಿ ಮತ್ತಿತರರು ಉಪಸ್ಥಿತರಿದ್ದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಹಾರ್ಮುಜ್ ತೆರೆಯಲು ಇರಾನ್ ಪರದಾಟ: ಜಲಸಂಧಿ ನಿರ್ಬಂಧಿಸಲು ತಾನೇ ನೆಟ್ಟ ಮೈನ್ಸ್ ಹುಡುಕಲು ವಿಫಲ; ಹಾಗಾದ್ರೆ ಮುಂದೇನು?

ಇಸ್ಲಾಮಾಬಾದ್‌ಗೆ ಆಗಮಿಸಿದ ಜೆಡಿ ವ್ಯಾನ್ಸ್ ವಿಮಾನಕ್ಕೆ ಪಾಕ್‌ನ ಐದು ಎಫ್-16 ಎಸ್ಕಾರ್ಟ್; Video ನೋಡಿ

ಮಾತುಕತೆಗೆ ವ್ಯಾನ್ಸ್ ನೇತೃತ್ವದ ಅಮೆರಿಕಾ ತಂಡ ಇಸ್ಲಾಮಾಬಾದ್ ಗೆ ಆಗಮನ; ಲೆಬನಾನ್ ಕದನ ವಿರಾಮ, ಸ್ವತ್ತುಗಳ ಬಿಡುಗಡೆ ಪ್ರಮುಖ ಅಜೆಂಡಾ; Video

ಇರಾನ್‌ ಸರ್ವೋಚ್ಚ ನಾಯಕ ಮೊಜ್ತಾಬಾ ಖಮೇನಿ ಮುಖ ವಿರೂಪಗೊಂಡಿದೆ, ಕಾಲುಗಳಿಗೆ ತೀವ್ರ ಗಾಯವಾಗಿದೆ: ವರದಿ

IPL 2026: RCB ಸೋಲಿಸಿದ RRಗೆ ಬಿಗ್ ಶಾಕ್, ರೆಡ್ ಹ್ಯಾಂಡ್ ಆಗಿ ಸಿಕ್ಕಿಬಿದ್ದ ಸಿಬ್ಬಂದಿ, BCCI ಶಿಕ್ಷೆ..! Video

SCROLL FOR NEXT