ಶಶಿಕಲಾ ಜೊಲ್ಲೆ 
ರಾಜ್ಯ

ಆಶ್ರಮ, ವೃದ್ದಾಶ್ರಮಗಳಿಗೆ ಹಿಂದಿನ ಸರ್ಕಾರದಲ್ಲಿಯೇ ಆಹಾಧಾನ್ಯ ನಿಂತಿತ್ತು: ಸಚಿವೆ ಶಶಿಕಲಾ ಜೊಲ್ಲೆ

ಆಶ್ರಮಗಳು, ವೃದ್ಧಾಶ್ರಮಗಳು, ಉಚಿತ ಊಟ ವಸತಿ ನೀಡುವ ಸಂಘ ಸಂಸ್ಥೆಗಳಿಗೆ ಹಿಂದಿನ ಕಾಂಗ್ರೆಸ್ ಸರ್ಕಾರದ ಅವಧಿಯಲ್ಲಿಯೇ ಆಹಾರ ಧಾನ್ಯ ಪೂರೈಕೆ ಸ್ಥಗಿತಗೊಂಡಿತ್ತು ಎಂದು ಆಹಾರ ಮತ್ತು ನಾಗರೀಕ ಪೂರೈಕೆ ಸಚಿವೆ ಶಶಿಕಲಾ ಜೊಲ್ಲೆ ಹೇಳಿದ್ದಾರೆ.

ಬೆಂಗಳೂರು: ಆಶ್ರಮಗಳು, ವೃದ್ಧಾಶ್ರಮಗಳು, ಉಚಿತ ಊಟ ವಸತಿ ನೀಡುವ ಸಂಘ ಸಂಸ್ಥೆಗಳಿಗೆ ಹಿಂದಿನ ಕಾಂಗ್ರೆಸ್ ಸರ್ಕಾರದ ಅವಧಿಯಲ್ಲಿಯೇ ಆಹಾರ ಧಾನ್ಯ ಪೂರೈಕೆ ಸ್ಥಗಿತಗೊಂಡಿತ್ತು ಎಂದು ಆಹಾರ ಮತ್ತು ನಾಗರೀಕ ಪೂರೈಕೆ ಸಚಿವೆ ಶಶಿಕಲಾ ಜೊಲ್ಲೆ ಹೇಳಿದ್ದಾರೆ.

ಸುದ್ದಿಗಾರರ ಜತೆ ಮಾತನಾಡಿದ ಅವರು, ಸಿದ್ದರಾಮಯ್ಯ ಸರ್ಕಾರದಲ್ಲಿ ಜಾರಿಯಾಗಿದ್ದ ದಾಸೋಹ ಕಾರ್ಯಕ್ರಮವನ್ನು ಅದೇ ಸರ್ಕಾರ ಸ್ಥಗಿತಗೊಳಿಸಿತ್ತು. ಆದರೆ ಈ ಕುರಿತು ಮಾಜಿ ಸಚಿವ ಯು ಟಿ ಖಾದರ್ ಮಾಡಿರುವ ಆರೋಪ ಆಧಾರರಹಿತ ಎಂದರು.

ರಾಜ್ಯದ 464 ಆಶ್ರಮಗಳು, ವೃದ್ಧಾಶ್ರಮಗಳು, ಸಂಘ, ಸಂಸ್ಥೆಗಳಿಗೆ ಅಕ್ಕಿ, ಗೋದಿ ಪೂರೈಕೆ ಮಾಡಲಾಗುತ್ತಿತ್ತು. ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬಂದ ಮೇಲೆ ಅಕ್ಕಿ, ಗೋದಿ ಪೂರೈಕೆ ನಿಂತಿದೆ ಎಂಬ ಖಾದರ್ ಆರೋಪ ಸುಳ್ಳು. ತಾವು ಸಚಿವೆ ಆಗುವುದಕ್ಕಿಂತ ಮುನ್ನವೇ ಆಹಾರ ಧಾನ್ಯ ಪೂರೈಕೆ ನಿಂತಿತ್ತು ಎಂದರು.

ದಾಸೋಹ ಕಾರ್ಯಕ್ರಮಕ್ಕಾಗಿ ವಾರ್ಷಿಕ 12.50 ಕೋಟಿ ರೂ ವೆಚ್ಚವಾಗುತ್ತಿತ್ತು. ವಿವಿಧ ಮಠಗಳು, ಮತ್ತು ಸಂಘ ಸಂಸ್ಥೆಗಳು ಮನವಿ ಮೇರೆಗೆ ಅಕ್ಕಿ ಗೋಧಿ ಕೊಡಲು ಮುಂದಾಗುತ್ತೇವೆ. ಈ ಸಂಬಂಧ ಮುಖ್ಯಮಂತ್ರಿ ಯಡಿಯೂರಪ್ಪ ಅವರ ಜೊತೆ ಚರ್ಚಿಸಿ ಆಹಾರ ಧಾನ್ಯಗಳ ಪೂರೈಕೆಗೆ ಕ್ರಮಕೈಗೊಂಡು ಮಠಗಳು, ಸಂಘ ಸಂಸ್ಥೆಗಳಿಗೆ ಅನ್ಯಾಯ ಆಗದಂತೆ ನೋಡಿಕೊಳ್ಳುವುದಾಗಿ ಸಚಿವರು ಭರವಸೆ ನೀಡಿದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಪ್ಯಾಕ್ಸ್ ಸಿಲಿಕಾ ಅಲೈಯನ್ಸ್‌ನ ಸದಸ್ಯ ದೇಶವಾಗಲಿದೆ; ಅಮೆರಿಕಕ್ಕೆ ಭಾರತಕ್ಕಿಂತ ಮುಖ್ಯ ದೇಶ ಮತ್ತೊಂದಿಲ್ಲ: ಸೆರ್ಗಿಯೊ ಗೋರ್

ಬಿಗ್ ಬಾಸ್ 12 ಫಿನಾಲೆ ಹೊತ್ತಲ್ಲಿ ಕಿಚ್ಚ ಸುದೀಪ್‌ಗೆ ಸಂಕಷ್ಟ ತಂದ 'ರಣಹದ್ದು'!

CM ಕುರ್ಚಿ ಗುದ್ದಾಟ: ಅಗತ್ಯವಿದ್ದಾಗ ಸಿದ್ದರಾಮಯ್ಯ, ಶಿವಕುಮಾರ್‌ರನ್ನು ಮಾತುಕತೆಗೆ ಕರೆಯಲಾಗುವುದು; ಮಲ್ಲಿಕಾರ್ಜುನ ಖರ್ಗೆ

ಉತ್ತರ ಪ್ರದೇಶ: "ಆಕ್ಷೇಪಾರ್ಹ" ಸ್ಥಿತಿಯಲ್ಲಿದ್ದ ಪ್ರೇಮಿಗಳನ್ನು ಹೊಡೆದು ಕೊಂದ ಕುಟುಂಬಸ್ಥರು!

ಮಹಾತ್ಮ ಗಾಂಧಿ ಸಂದೇಶಗಳು ಹಿಂದೆಂದಿಗಿಂತಲೂ ಈಗ ಹೆಚ್ಚು ಪ್ರಸ್ತುತ: ಸಬರಮತಿ ಆಶ್ರಮದಲ್ಲಿ ಜರ್ಮನ್ ಚಾನ್ಸೆಲರ್!

SCROLL FOR NEXT