ಸಿದ್ದಲಿಂಗಯ್ಯ 
ರಾಜ್ಯ

ಪ್ರಸಿದ್ದ ಕವಿ ಸಿದ್ದಲಿಂಗಯ್ಯಗೆ ಪಂಪ ಪ್ರಶಸ್ತಿ

ಪ್ರಸಿದ್ದ ಕವಿ ಡಾ. ಸಿದ್ದಲಿಂಗಯ್ಯ್ ಅವರಿಗೆ ಈ ಸಾಲಿನ ಪಂಪ ಪ್ರಶಸ್ತಿ ಒಲಿದು ಬಂದಿದೆ. ಕರ್ನಾಟಕ ರಾಜ್ಯ ಸರ್ಕಾರ ಕೊಡಮಾಡುವ ಈ ಪ್ರಶಸ್ತಿ ಪ್ರಧಾನ ಸಮಾರಂಭ ಫೆ.೮ಕ್ಕೆ ಬನವಾಸಿಯಲ್ಲಿ ನಡೆಯಲಿದೆ. 

ಬೆಂಗಳೂರು: ಪ್ರಸಿದ್ದ ಕವಿ ಡಾ. ಸಿದ್ದಲಿಂಗಯ್ಯ್ ಅವರಿಗೆ ಈ ಸಾಲಿನ ಪಂಪ ಪ್ರಶಸ್ತಿ ಒಲಿದು ಬಂದಿದೆ. ಕರ್ನಾಟಕ ರಾಜ್ಯ ಸರ್ಕಾರ ಕೊಡಮಾಡುವ ಈ ಪ್ರಶಸ್ತಿ ಪ್ರಧಾನ ಸಮಾರಂಭ ಫೆ.೮ಕ್ಕೆ ಬನವಾಸಿಯಲ್ಲಿ ನಡೆಯಲಿದೆ.

ಪಂಪ ಪ್ರಶಸ್ತಿ ಐದು ಲಕ್ಷ ರು. ನಗದು ಹಾಗೂ ಪ್ರಶಸ್ತಿ ಫಲಕ ಹೊಂದಿದೆ. ಮಲ್ಲೇಪುರ ಜಿ. ವೆಂಕಟೇಶ್ ನೇತೃತ್ವದ ಆಯ್ಕೆ ಸಮಿತಿ ಸಿದ್ದಲಿಂಗಯ್ಯನವರ ಹೆಸರನ್ನು ಪ್ರಶಸ್ತಿಗಾಗಿ ಆಯ್ಕೆ ಮಾಡಿದೆ.

ದಲಿತ ಹಾಗೂ ಬಂಡಾಯ ಸಾಹಿತ್ಯದ ಕಾಲಘಟ್ಟದಲ್ಲಿ ಮುಂಚೂಣಿ ಕವಿ ಆಗಿದ್ದ ಸಿದ್ದಲಿಂಗಯ್ಯ ಹೊಲೆಮಾದಿಗರ ಹಾಡು, ಮೆರವಣಿಗೆ, ಸಾವಿರಾರು ನದಿಗಳು, ಕಪ್ಪು ಕಾಡಿನ ಹಾಡು ಸೇರಿ ಹಲವು ಕವನ ಸಂಕಲನ, ವಿಮರ್ಶಾ ಕೃತಿಗಳನ್ನು ರಚಿಸಿದ್ದಾರೆ. ಅಲ್ಲದೆ ಅವರ "ಊರು ಕೇರಿ" ಎಂಬ ಆತ್ಮಕಥನ ಸಹ ಬಹಳವೇ ಜನಪ್ರಿಯವಾಗಿದೆ.

ರಾಜ್ಯ ಸಾಹಿತ್ಯ ಅಕಾಡಮಿ ಬಹುಮಾನ, ರಾಜ್ಯೋತ್ಸವ ಪ್ರಶಸ್ತಿ ಸೇರಿ ಹಲವು ಪ್ರಶಸ್ತಿ ಪುರಸ್ಕಾರಕ್ಕೆ ಭಾಜನರಾಗಿರುವ ಸಿದ್ದಲಿಂಗಯ್ಯನವರಿಗೆ ಈ ಬಾರಿಯ ಪಂಪ ಪ್ರಶಸ್ತಿ ಸಿಕ್ಕಿರುವುದು ಸಾಹಿತ್ಯಾಭಿಮಾನಿಗಳಿಗೆ ಖುಷಿ ತಂದಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

PSLV-C62 ಮಿಷನ್ ವಿಫಲ: ಕೊನೆಯ ಹಂತದಲ್ಲಿ ಎದುರಾದ ಸಮಸ್ಯೆ, ISROಗೆ ಹಿನ್ನಡೆ

ಇತಿಹಾಸ ಕಲಿಯಬೇಕಿದ್ದರೆ ಕಾಲೇಜಿಗೆ ಹೋಗುತ್ತಾರೆ, ನಿಮ್ಮ ಬೋಧನೆಯ ಅಗತ್ಯವಿಲ್ಲ: ಪ್ರಧಾನಿ ಮೋದಿ ವಿರುದ್ಧ ಪ್ರಿಯಾಂಕ್ ಖರ್ಗೆ ವಾಗ್ದಾಳಿ

MGNREGA Row: ಯಾವಾಗ-ಎಲ್ಲಿ ಬೇಕಾದರೂ ಚರ್ಚೆಗೆ ಸಿದ್ಧ, ಡೈಲಾಗ್‌ ವೀರ HDK ಬಂದರೆ ಒಳ್ಳೆಯದು; ಡಿ.ಕೆ.ಶಿವಕುಮಾರ್

Positive Vibes ಗಾಗಿ ಮನೆಯಲ್ಲಿ ಯಾವ ಗಿಡ ಬೆಳಸಬೇಕು: ಮುಳ್ಳಿನ ಗಿಡಗಳಲ್ಲಿದೆಯೇ ನಕರಾತ್ಮಕ ಶಕ್ತಿ; ಮಲ್ಲಿಗೆ ಮತ್ತು ತುಳಸಿಗೆ ಸೂಕ್ತ ಸ್ಥಳ ಯಾವುದು?

ಬೆಂಗಳೂರು: 6 ವರ್ಷದ ಬಾಲಕಿ ಅಪಹರಿಸಿ ಹತ್ಯೆ ; ಕೊಲೆಗೂ ಮುನ್ನ ಲೈಂಗಿಕ ದೌರ್ಜನ್ಯ - ಶವ ಪರೀಕ್ಷೆ ವೇಳೆ ಸತ್ಯ ಬಹಿರಂಗ!

SCROLL FOR NEXT