ಸಿದ್ದಲಿಂಗಯ್ಯ 
ರಾಜ್ಯ

ಪ್ರಸಿದ್ದ ಕವಿ ಸಿದ್ದಲಿಂಗಯ್ಯಗೆ ಪಂಪ ಪ್ರಶಸ್ತಿ

ಪ್ರಸಿದ್ದ ಕವಿ ಡಾ. ಸಿದ್ದಲಿಂಗಯ್ಯ್ ಅವರಿಗೆ ಈ ಸಾಲಿನ ಪಂಪ ಪ್ರಶಸ್ತಿ ಒಲಿದು ಬಂದಿದೆ. ಕರ್ನಾಟಕ ರಾಜ್ಯ ಸರ್ಕಾರ ಕೊಡಮಾಡುವ ಈ ಪ್ರಶಸ್ತಿ ಪ್ರಧಾನ ಸಮಾರಂಭ ಫೆ.೮ಕ್ಕೆ ಬನವಾಸಿಯಲ್ಲಿ ನಡೆಯಲಿದೆ. 

ಬೆಂಗಳೂರು: ಪ್ರಸಿದ್ದ ಕವಿ ಡಾ. ಸಿದ್ದಲಿಂಗಯ್ಯ್ ಅವರಿಗೆ ಈ ಸಾಲಿನ ಪಂಪ ಪ್ರಶಸ್ತಿ ಒಲಿದು ಬಂದಿದೆ. ಕರ್ನಾಟಕ ರಾಜ್ಯ ಸರ್ಕಾರ ಕೊಡಮಾಡುವ ಈ ಪ್ರಶಸ್ತಿ ಪ್ರಧಾನ ಸಮಾರಂಭ ಫೆ.೮ಕ್ಕೆ ಬನವಾಸಿಯಲ್ಲಿ ನಡೆಯಲಿದೆ.

ಪಂಪ ಪ್ರಶಸ್ತಿ ಐದು ಲಕ್ಷ ರು. ನಗದು ಹಾಗೂ ಪ್ರಶಸ್ತಿ ಫಲಕ ಹೊಂದಿದೆ. ಮಲ್ಲೇಪುರ ಜಿ. ವೆಂಕಟೇಶ್ ನೇತೃತ್ವದ ಆಯ್ಕೆ ಸಮಿತಿ ಸಿದ್ದಲಿಂಗಯ್ಯನವರ ಹೆಸರನ್ನು ಪ್ರಶಸ್ತಿಗಾಗಿ ಆಯ್ಕೆ ಮಾಡಿದೆ.

ದಲಿತ ಹಾಗೂ ಬಂಡಾಯ ಸಾಹಿತ್ಯದ ಕಾಲಘಟ್ಟದಲ್ಲಿ ಮುಂಚೂಣಿ ಕವಿ ಆಗಿದ್ದ ಸಿದ್ದಲಿಂಗಯ್ಯ ಹೊಲೆಮಾದಿಗರ ಹಾಡು, ಮೆರವಣಿಗೆ, ಸಾವಿರಾರು ನದಿಗಳು, ಕಪ್ಪು ಕಾಡಿನ ಹಾಡು ಸೇರಿ ಹಲವು ಕವನ ಸಂಕಲನ, ವಿಮರ್ಶಾ ಕೃತಿಗಳನ್ನು ರಚಿಸಿದ್ದಾರೆ. ಅಲ್ಲದೆ ಅವರ "ಊರು ಕೇರಿ" ಎಂಬ ಆತ್ಮಕಥನ ಸಹ ಬಹಳವೇ ಜನಪ್ರಿಯವಾಗಿದೆ.

ರಾಜ್ಯ ಸಾಹಿತ್ಯ ಅಕಾಡಮಿ ಬಹುಮಾನ, ರಾಜ್ಯೋತ್ಸವ ಪ್ರಶಸ್ತಿ ಸೇರಿ ಹಲವು ಪ್ರಶಸ್ತಿ ಪುರಸ್ಕಾರಕ್ಕೆ ಭಾಜನರಾಗಿರುವ ಸಿದ್ದಲಿಂಗಯ್ಯನವರಿಗೆ ಈ ಬಾರಿಯ ಪಂಪ ಪ್ರಶಸ್ತಿ ಸಿಕ್ಕಿರುವುದು ಸಾಹಿತ್ಯಾಭಿಮಾನಿಗಳಿಗೆ ಖುಷಿ ತಂದಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಯುಕ್ರೇನ್-ರಷ್ಯಾ ಶಾಂತಿ ಒಪ್ಪಂದ ಸನಿಹ: ಸುಳಿವು ನೀಡಿದ ಯುಕ್ರೇನ್

2026 T20 ವಿಶ್ವಕಪ್: ಕೊಲಂಬೋದಲ್ಲಿ ಫೆ.15 ರಂದು ಭಾರತ- ಪಾಕ್ ಪಂದ್ಯ

ಕಾರು ಅಪಘಾತದಲ್ಲಿ ಐಎಎಸ್ ಅಧಿಕಾರಿ ಮಹಾಂತೇಶ್ ಬೀಳಗಿ ಸೇರಿ ಮೂವರು ಸಾವು: ಸಿಎಂ, ಡಿಸಿಎಂ ಸಂತಾಪ

CM ಬದಲಾವಣೆ ನಾಲ್ಕರಿಂದ ಐದು ಜನರ ನಡುವೆ ನಡೆದ "ರಹಸ್ಯ ಒಪ್ಪಂದ": ಡಿಕೆಶಿ​ ಸ್ಫೋಟಕ ಹೇಳಿಕೆ

ರಾಸಾಯನಿಕಗಳು, ಎಲೆಕ್ಟ್ರಾನಿಕ್ ಘಟಕಗಳ ಸುಲಭ ಲಭ್ಯತೆಯಿಂದ ಐಇಡಿ ಅಪಾಯ ಹೆಚ್ಚು: NSG

SCROLL FOR NEXT