ಸಿದ್ದಲಿಂಗಯ್ಯ 
ರಾಜ್ಯ

ಪ್ರಸಿದ್ದ ಕವಿ ಸಿದ್ದಲಿಂಗಯ್ಯಗೆ ಪಂಪ ಪ್ರಶಸ್ತಿ

ಪ್ರಸಿದ್ದ ಕವಿ ಡಾ. ಸಿದ್ದಲಿಂಗಯ್ಯ್ ಅವರಿಗೆ ಈ ಸಾಲಿನ ಪಂಪ ಪ್ರಶಸ್ತಿ ಒಲಿದು ಬಂದಿದೆ. ಕರ್ನಾಟಕ ರಾಜ್ಯ ಸರ್ಕಾರ ಕೊಡಮಾಡುವ ಈ ಪ್ರಶಸ್ತಿ ಪ್ರಧಾನ ಸಮಾರಂಭ ಫೆ.೮ಕ್ಕೆ ಬನವಾಸಿಯಲ್ಲಿ ನಡೆಯಲಿದೆ. 

ಬೆಂಗಳೂರು: ಪ್ರಸಿದ್ದ ಕವಿ ಡಾ. ಸಿದ್ದಲಿಂಗಯ್ಯ್ ಅವರಿಗೆ ಈ ಸಾಲಿನ ಪಂಪ ಪ್ರಶಸ್ತಿ ಒಲಿದು ಬಂದಿದೆ. ಕರ್ನಾಟಕ ರಾಜ್ಯ ಸರ್ಕಾರ ಕೊಡಮಾಡುವ ಈ ಪ್ರಶಸ್ತಿ ಪ್ರಧಾನ ಸಮಾರಂಭ ಫೆ.೮ಕ್ಕೆ ಬನವಾಸಿಯಲ್ಲಿ ನಡೆಯಲಿದೆ.

ಪಂಪ ಪ್ರಶಸ್ತಿ ಐದು ಲಕ್ಷ ರು. ನಗದು ಹಾಗೂ ಪ್ರಶಸ್ತಿ ಫಲಕ ಹೊಂದಿದೆ. ಮಲ್ಲೇಪುರ ಜಿ. ವೆಂಕಟೇಶ್ ನೇತೃತ್ವದ ಆಯ್ಕೆ ಸಮಿತಿ ಸಿದ್ದಲಿಂಗಯ್ಯನವರ ಹೆಸರನ್ನು ಪ್ರಶಸ್ತಿಗಾಗಿ ಆಯ್ಕೆ ಮಾಡಿದೆ.

ದಲಿತ ಹಾಗೂ ಬಂಡಾಯ ಸಾಹಿತ್ಯದ ಕಾಲಘಟ್ಟದಲ್ಲಿ ಮುಂಚೂಣಿ ಕವಿ ಆಗಿದ್ದ ಸಿದ್ದಲಿಂಗಯ್ಯ ಹೊಲೆಮಾದಿಗರ ಹಾಡು, ಮೆರವಣಿಗೆ, ಸಾವಿರಾರು ನದಿಗಳು, ಕಪ್ಪು ಕಾಡಿನ ಹಾಡು ಸೇರಿ ಹಲವು ಕವನ ಸಂಕಲನ, ವಿಮರ್ಶಾ ಕೃತಿಗಳನ್ನು ರಚಿಸಿದ್ದಾರೆ. ಅಲ್ಲದೆ ಅವರ "ಊರು ಕೇರಿ" ಎಂಬ ಆತ್ಮಕಥನ ಸಹ ಬಹಳವೇ ಜನಪ್ರಿಯವಾಗಿದೆ.

ರಾಜ್ಯ ಸಾಹಿತ್ಯ ಅಕಾಡಮಿ ಬಹುಮಾನ, ರಾಜ್ಯೋತ್ಸವ ಪ್ರಶಸ್ತಿ ಸೇರಿ ಹಲವು ಪ್ರಶಸ್ತಿ ಪುರಸ್ಕಾರಕ್ಕೆ ಭಾಜನರಾಗಿರುವ ಸಿದ್ದಲಿಂಗಯ್ಯನವರಿಗೆ ಈ ಬಾರಿಯ ಪಂಪ ಪ್ರಶಸ್ತಿ ಸಿಕ್ಕಿರುವುದು ಸಾಹಿತ್ಯಾಭಿಮಾನಿಗಳಿಗೆ ಖುಷಿ ತಂದಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Nepal floods|ಮೃತರ ಸಂಖ್ಯೆ 165ಕ್ಕೆ ಏರಿಕೆ; ನಾಪತ್ತೆಯಾದವರಲ್ಲಿ 133 ಮಂದಿ ಭಾರತೀಯರು

Iran ಸರ್ವೋಚ್ಚ ನಾಯಕ Mojtaba Khamenei ಸತ್ತಿಲ್ಲ, ಗಂಭೀರವಾಗಿ ಗಾಯಗೊಂಡಿದ್ದಾರೆ: ಹಳೇ Vidoe ಬಿಡುಗಡೆ ಬೆನ್ನಲ್ಲೇ ಅಸಲಿಯತ್ತು ಬಿಚ್ಚಿಟ್ಟ Donald Trump..!

Nepal floods: ಸಾವಿನ ಸಂಖ್ಯೆ 157ಕ್ಕೇರಿಕೆ, 750ಕ್ಕೂ ಅಧಿಕ ಮಂದಿ ನಾಪತ್ತೆ, ನೇಪಾಳಕ್ಕೆ ಭಾರತ ನೆರವು! ಸಹಾಯವಾಣಿ ಬಿಡುಗಡೆ

ನೇಪಾಳ ಭೀಕರ ಪ್ರವಾಹ: 95 ಮಂದಿ ಸಾವು; 105 ಭಾರತೀಯರು ಸೇರಿ 400 ಮಂದಿ ನಾಪತ್ತೆ: ಬಿಹಾರ, ಯುಪಿಯಲ್ಲಿ ಹೈ ಅಲರ್ಟ್! Video

ನೇಪಾಳ ಪ್ರವಾಹ: ಭಾರತಕ್ಕೆ ದೊಡ್ಡ ಆತಂಕವಿಲ್ಲ, ಜಲಾಶಯಗಳ ನೀರಿನ ಮಟ್ಟ ಇಳಿಕೆ: ಕೇಂದ್ರ ಸ್ಪಷ್ಟನೆ