ಚಿರತ ಮರಿ ರಕ್ಷಣೆ 
ರಾಜ್ಯ

ಮೈಸೂರು:  ಜಮೀನಿನಲ್ಲಿ ಪತ್ತೆಯಾದ ಚಿರತೆ ಮರಿ ರಕ್ಷಣೆ

ಹುಣಸೂರು ತಾಲೂಕಿನಲ್ಲಿ ರಾಮಪಟ್ಟಣ ಗ್ರಾಮದ ಮೂಕನಹಳ್ಳಿ ರವಿಪ್ರಸನ್ನರಿಗೆ ಸೇರಿದ ಜೋಳದ ಹೊಲದಲ್ಲಿ ರೈತರು ಕೆಲಸ ಮಾಡುತ್ತಿರುವಾಗ ಚಿರತೆ ಮರಿಯೊಂದು ಪ್ರತ್ಯಕ್ಷವಾಗಿತ್ತು.

ಮೈಸೂರು: ಹುಣಸೂರು ತಾಲೂಕಿನಲ್ಲಿ ರಾಮಪಟ್ಟಣ ಗ್ರಾಮದ ಮೂಕನಹಳ್ಳಿ ರವಿಪ್ರಸನ್ನರಿಗೆ ಸೇರಿದ ಜೋಳದ ಹೊಲದಲ್ಲಿ ರೈತರು ಕೆಲಸ ಮಾಡುತ್ತಿರುವಾಗ ಚಿರತೆ ಮರಿಯೊಂದು ಪ್ರತ್ಯಕ್ಷವಾಗಿತ್ತು.

ಚಿರತೆ ಮರಿಯನ್ನು ಕಂಡು ಭಯಭೀತರಾದ ರೈತರು ಗ್ರಾಮಸ್ಥರ ಸಹಾಯದಿಂದ ಚಿರತೆ ಮರಿಯನ್ನು ಹಗ್ಗದಿಂದ ಕಟ್ಟಿಹಾಕಿ ನಂತರ ಅರಣ್ಯಾಧಿಕಾರಿಗಳಿಗೆ ವಿಷಯ ಮುಟ್ಟಿಸಿದ್ದಾರೆ.

ನಂತರ ಸ್ಥಳಕ್ಕೆ  ಬಂದ  ಆರ್. ಎಫ್. ಓ ಸಂದಿಪ್, ಡಿ. ಆರ್. ಎಫ್. ಓ ರಿಜ್ವಾನ್ ಅಹಮ್ಮದ್, ಸೇರಿದಂತೆ ಅರಣ್ಯ ಇಲಾಖೆ ಸಿಬ್ಬಂದಿ  ಮೂರು ತಿಂಗಳ ಚಿರತೆ ಮರಿಯನ್ನು ವಶಕ್ಕೆ ಪಡೆದು ಸೂಕ್ತ ಚಿಕಿತ್ಸೆ ನೀಡಿದರು.

ಗ್ರಾಮಸ್ಥರು ಇನ್ನೂ ಚಿರತೆಗಳು ಈ ಭಾಗದಲ್ಲಿ ಇರುವುದಾಗಿ ತಿಳಿಸಿದ್ದರಿಂದ ಮುನ್ನೆಚ್ಚರಿಕೆಯಾಗಿ ಅರಣ್ಯಾಧಿಕಾರಿಗಳು ಜಮೀನಿನಲ್ಲಿ ಬೋನು ಇರಿಸಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ನನ್ನ-ಕಾಂಗ್ರೆಸ್ ಮಧ್ಯೆ ಭಕ್ತ-ಭಗವಂತನ ಸಂಬಂಧ ಇದೆ; RSS ಗೀತೆ ಹಾಡಿದ್ದಕ್ಕೆ ನೋವಾಗಿದ್ದರೆ ಕ್ಷಮೆ ಕೇಳುತ್ತೇನೆ: ಡಿ.ಕೆ ಶಿವಕುಮಾರ್; Video

ಭಾರತದ ಮೇಲೆ ಶೇ. 50 ರಷ್ಟು ಸುಂಕ ನಾಳೆ ಜಾರಿ, ಅಮೆರಿಕ ಕರಡು ಸೂಚನೆ; ಔಷಧ, ಎಲೆಕ್ಟ್ರಾನಿಕ್ಸ್‌ ವಸ್ತುಗಳಿಗೆ ವಿನಾಯಿತಿ

Ragigudda Metro ಮೆಟ್ರೋ ನಿಲ್ದಾಣದಲ್ಲಿ ತಪ್ಪಿದ ದುರಂತ, ಆಯತಪ್ಪಿ ಹಳಿ ಮೇಲೆ ಬಿದ್ದ ಸಿಬ್ಬಂದಿ!... ಮುಂದೇನಾಯ್ತು? Video

ಪದಕ ಹಾಕಿಸಿಕೊಳ್ಳಲು ನಿರಾಕರಿಸಿದ DMK ಸಚಿವನ ಪುತ್ರ, BJP ನಾಯಕ Annamalai ಹೇಳಿದ್ದೇನು? Video

'ಶಾಂತಿ ಬೇಕಾದರೆ ಯುದ್ಧಕ್ಕೆ ಸಿದ್ಧರಾಗಿ.. Sudarshan Chakra ವಾಯುರಕ್ಷಣಾ ವ್ಯವಸ್ಥೆಗೆ ಮೂರೂ ಸೇನೆಗಳ ಬೃಹತ್ ಪ್ರಯತ್ನ ಬೇಕು': CDS Chauhan

SCROLL FOR NEXT