ಸಂಗ್ರಹ ಚಿತ್ರdd 
ರಾಜ್ಯ

ರಾಜ್ಯಕ್ಕೂ ತಟ್ಟಿದ ಕೊರೋನಾ ಭೀತಿ: ಎಲ್ಲೆಡೆ ತೀವ್ರ ಕಚ್ಚೆಚ್ಚರ

ಚೀನಾದಲ್ಲಿ ದೊಡ್ಡ ತಲೆನೋವಾಗಿ ಪರಿಣಮಿಸಿರುವ ಕೊರೋನಾ ವೈರಸ್ ಭೀತಿ ಇದೀಗ ರಾಜ್ಯಕ್ಕೂ ತಟ್ಟುವ ಆತಂಕ ಶುರುವಾಗಿರುವ ಹಿನ್ನೆಲೆಯಲ್ಲಿ ಎಲ್ಲೆಡೆ ತೀವ್ರ ಕಟ್ಚೆಚ್ಚರ ವಹಿಸಲಾಗಿದೆ. 

ಬೆಂಗಳೂರು: ಚೀನಾದಲ್ಲಿ ದೊಡ್ಡ ತಲೆನೋವಾಗಿ ಪರಿಣಮಿಸಿರುವ ಕೊರೋನಾ ವೈರಸ್ ಭೀತಿ ಇದೀಗ ರಾಜ್ಯಕ್ಕೂ ತಟ್ಟುವ ಆತಂಕ ಶುರುವಾಗಿರುವ ಹಿನ್ನೆಲೆಯಲ್ಲಿ ಎಲ್ಲೆಡೆ ತೀವ್ರ ಕಟ್ಚೆಚ್ಚರ ವಹಿಸಲಾಗಿದೆ. 

ಕೊರೋನಾವೈರಸ್'ನ್ನು ವಿಶ್ವ ಆರೋಗ್ಯ ಸಂಸ್ಥೆ ಕೂಡ ಅಂತರಾಷ್ಟ್ರೀಯ ಸಾರ್ವಜನಿಕ ಆರೋಗ್ಯ ತುರ್ತುಸ್ಥಿತಿ ಎಂದು ಘೋಷಣೆ ಮಾಡಿದ್ದು, ಈ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ ಎಲ್ಲೆಡೆ ತೀವ್ರ ಕಟ್ಟೆಚ್ಚರ ವಹಿಸುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದೆ. ಈವರೆಗೂ 81 ಮಂದಿ ಕೊರೋನಾ ವೈರಸ್ ತಗುಲಿರುವ ವ್ಯಕ್ತಿಗಳು ಚೀನಾದಿಂದ ಭಾರತಕ್ಕೆ ಆಗಮಿಸಿದ್ದು, 58 ಮಂದಿ ಚಿಕಿತ್ಸೆಗೊಳಗಾಗಿದ್ದಾರೆ. 

4 ಮಂದಿ ಚೀನಾ ಪ್ರಯಾಣಿಕರು ದೇಶ ತೊರೆದಿದ್ದು, 69 ಮಂದಿ ರೋಗಿಗಳ ತಪಾಸಣೆ ಇನ್ನೂ ಪ್ರಗತಿಯಲ್ಲಿದೆ. ಇದರಲ್ಲಿ 44 ಮಂದಿ ಪ್ರಯಾಣಿಕರಲ್ಲಿ ವೈರಸ್ ಇಲ್ಲ ಎಂದು ವರದಿಗಳು ತಿಳಿಸಿವೆ. 

ಈ ನಡುವೆ ರಾಜ್ಯ ಆರೋಗ್ಯ ಇಲಾಖೆ ವಿದೇಶಿ ಪ್ರವಾಸಿಗರಿಗೆ ಅನುಕೂಲವಾಗುವಂತೆ ಹೆಲ್ಪ್ ಲೈನ್ ಸಂಖ್ಯೆಗಳನ್ನು ತೆರೆದಿದ್ದು, ತಪಾಸಣೆ ವೇಳೆ ಯಾರಲ್ಲಾದರೂ ಕೊರೋನಾ ಸೋಂಕು ಲಕ್ಷಣ ಕಂಡು ಬಂದಿದ್ದೇ ಆದರೆ, ಅಂಥಹವರನ್ನು ಕೂಡಲೇ ಇತರೆ ಪ್ರಯಾಣಿಕರು ಹಾಗೂ ಸಾರ್ವಜನಿಕರಿಂದ ಪ್ರತ್ಯೇಕಗೊಳಿಸಿ ಸೂಕ್ತ ಚಿಕಿತ್ಸೆ ನೀಡಲಾಗುತ್ತದೆ ಎಂದು ತಿಳಿಸಿದೆ. 

ಬೆಂಗಳೂರು ವಿಮಾನ ನಿಲ್ದಾಣಕ್ಕೆ ಈ ವರೆಗೂ 9,296 ಪ್ರಯಾಣಿಕರು ವಿದೇಶಗಳಿಂದ ಆಗಮಿಸಿದ್ದು, ಎಲ್ಲರನ್ನೂ ತಪಾಸಣೆಗೊಳಪಡಿಸಲಾಗಿದೆ. ಅಲ್ಲದೆ, ಕಾಸರಗೋಡಿನಲ್ಲಿ ಮೂರು ಕೊರೋನಾವೈರಸ್ ಪ್ರಕರಣಗಳು ಪತ್ತೆಯಾದ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ ಗಡಿ ಜಿಲ್ಲೆಗಳಾದ ದಕ್ಷಿಣ ಕನ್ನಡ, ಕೊಡಗು, ಚಾಮರಾಜನಗರ ಹಾಗೂ ಮೈಸೂರಿನಲ್ಲಿ ತೀವ್ರ ಕಟ್ಟೆಚ್ಚರ ವಹಿಸಿದೆ. 

ಈ ನಡುವೆ ಚೀನಾದಿಂದ ಇತ್ತೀಚೆಗಷ್ಟೇ ಹುಬ್ಬಳ್ಳಿಗೆ ಆಗಮಿಸಿದ್ದ ಸಂದೀಪ್ ಕೆಳ್ಸಂಗಡ್ ಅವರನ್ನು ಪರೀಕ್ಷೆಗೊಳಪಡಿಸಲಾಗಿದ್ದು, ವೈರಸ್ ಪತ್ತೆಯಾಗಿಲ್ಲ ಎಂದು ವೈದ್ಯರು ಮಾಹಿತಿ ನೀಡಿದ್ದಾರೆ. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

'ದೊಡ್ಡ ಆಘಾತ': ಅಮೆರಿಕದಲ್ಲಿ ಶೇ.50 ಸುಂಕ ಜಾರಿ, 48.2 ಬಿಲಿಯನ್ ಡಾಲರ್ ಮೌಲ್ಯದ ಭಾರತದ ರಫ್ತಿಗೆ ಹೊಡೆತ

ಭಾರತದ ಮೇಲೆ ಸುಂಕಾಸ್ತ್ರ ಜಾರಿ: ಮತ್ತೆ ಇಂಡೋ-ಪಾಕ್ ಯುದ್ಧ ನಿಲ್ಲಿಸಿದ್ದು ನಾನೇ ಎಂದು ಪುನರುಚ್ಛರಿಸಿದ ಡೊನಾಲ್ಡ್ ಟ್ರಂಪ್

ದೇಶಾದ್ಯಂತ ಗಣೇಶ ಚತುರ್ಥಿ ಸಂಭ್ರಮ: ದೇವಾಲಯಗಳಲ್ಲಿ ವಿಶೇಷ ಪೂಜೆ, ರಾಷ್ಟ್ರಪತಿ, ಪ್ರಧಾನಿ, ಮುಖ್ಯಮಂತ್ರಿಗಳಿಂದ ಶುಭಾಶಯ

ಜಮ್ಮುವಿನಲ್ಲಿ ಭೀಕರ ಮಳೆಯಿಂದ ಭಾರೀ ಅನಾಹುತ ಸೃಷ್ಟಿ: ವೈಷ್ಣೋದೇವಿ ಮಾರ್ಗದಲ್ಲಿ ಭೂಕುಸಿತ, ಕನಿಷ್ಠ 30 ಮಂದಿ ಸಾವು

ಬೂಕರ್ ಪ್ರಶಸ್ತಿ ಮಹತ್ವ ತಿಳಿದಿದ್ದರೆ ನನ್ನನ್ನು ಟೀಕಿಸುತ್ತಿರಲಿಲ್ಲ, ಸಾಹಿತ್ಯ ಸಮ್ಮೇಳನದ ವಿಡಿಯೋ ತಿರುಚಲಾಗಿದೆ: ಬಾನು ಮುಷ್ತಾಕ್

SCROLL FOR NEXT