ಪರಭಾಷೆ ವ್ಯಾಮೋಹ ಬಿಟ್ಟು ಕನ್ನಡ ಭಾಷೆಯನ್ನು ಆರಾಧಿಸಿ: ಗೋವಿಂದ ಕಾರಜೋಳ 
ರಾಜ್ಯ

ಪರಭಾಷೆ ವ್ಯಾಮೋಹ ಬಿಟ್ಟು ಕನ್ನಡ ಭಾಷೆಯನ್ನು ಆರಾಧಿಸಿ: ಗೋವಿಂದ ಕಾರಜೋಳ

 ಕನ್ನಡ ಭಾಷೆಯ ಆರಾಧನೆ ಸಾಹಿತ್ಯ ಸಮ್ಮೇಳನದ ಧ್ಯೇಯ. ಪರಭಾಷೆ ವ್ಯಾಮೋಹ ಬಿಟ್ಟು ಕನ್ನಡ ಭಾಷೆಯನ್ನು ಮನೆ ಮನಗಳಲ್ಲಿ ಬಳಸಬೇಕು. ಕನ್ನಡಲ್ಲೇ ವ್ಯವಹರಿಸಿ, ಕನ್ನಡ ಭಾಷೆಯನ್ನು ಮತ್ತಷ್ಟು ಬೆಳೆಸಲು ಎಲ್ಲಾ ಕನ್ನಡಿಗರು ಶ್ರಮಿಸಿ, ಆರಾಧಿಸಬೇಕು ಎಂದು ಉಪಮುಖ್ಯಮಂತ್ರಿ ಗೋವಿಂದ ಎಂ ಕಾರಜೋಳ ಕರೆ ನೀಡಿದ್ದಾರೆ. 

ಕಲಬುರಗಿ: ಕನ್ನಡ ಭಾಷೆಯ ಆರಾಧನೆ ಸಾಹಿತ್ಯ ಸಮ್ಮೇಳನದ ಧ್ಯೇಯ. ಪರಭಾಷೆ ವ್ಯಾಮೋಹ ಬಿಟ್ಟು ಕನ್ನಡ ಭಾಷೆಯನ್ನು ಮನೆ ಮನಗಳಲ್ಲಿ ಬಳಸಬೇಕು. ಕನ್ನಡಲ್ಲೇ ವ್ಯವಹರಿಸಿ, ಕನ್ನಡ ಭಾಷೆಯನ್ನು ಮತ್ತಷ್ಟು ಬೆಳೆಸಲು ಎಲ್ಲಾ ಕನ್ನಡಿಗರು ಶ್ರಮಿಸಿ, ಆರಾಧಿಸಬೇಕು ಎಂದು ಉಪಮುಖ್ಯಮಂತ್ರಿ ಗೋವಿಂದ ಎಂ ಕಾರಜೋಳ ಕರೆ ನೀಡಿದ್ದಾರೆ.

ಕಲಬುರಗಿಯಲ್ಲಿ ಇಂದು 85 ನೇ ಅಖಿಲ ಭಾರತ ಸಾಹಿತ್ಯ ಸಮ್ಮೇಳನದಲ್ಲಿ ಸ್ವಾಗತ ಭಾಷಣ ಮಾಡಿದ ಅವರು, 2500 ವರ್ಷಗಳ ಐತಿಹ್ಯ ವಿರುವ ಕನ್ನಡ ಭಾಷೆ ಶ್ರೀಮಂತವಾಗಿದ್ದು, ಗಟ್ಟಿಯಾಗಿದೆ‌. 12ನೇ ಶತಮಾನದಲ್ಲಿ ಶರಣರು ಕನ್ನಡ ಭಾಷೆ ಬೆಳೆಸಲು ಶ್ರಮಿಸಿದ್ದಾರೆ‌. ನಾವು ಇಂದು ಬೆಂಗಳೂರಿನಲ್ಲಿ ಕನ್ನಡ ಮಾತನಾಡುವವರ ಸಂಖ್ಯೆ ಕ್ಷೀಣಿಸುತ್ತಿರುವುದು ವಿಷಾದನೀಯ ಸಂಗತಿ. ಯಾರು ಯಾವುದೇ ಭಾಷೆಯಲ್ಲಿ ಮಾತನಾಡಿದರೂ ಕನ್ನಡಿಗರು ಕನ್ನಡ ಭಾಷೆಯಲ್ಲೇ ಉತ್ತರಿಸಬೇಕು ಎಂದರು.

ನುಡಿಯ ಆರಾಧನೆ ಸಾಹಿತ್ಯ‌ಸಮ್ಮೆಳನದ ಧ್ಯೇಯ. ಕವಿಗಳು, ಸಾಹಿತಿಗಳು, ಸಂಶೋದಕರು, ಅಧ್ಯಾಪಕರು, ವಿದ್ಯಾರ್ಥಿಗಳ ಪಾತ್ರ ಮಹತ್ತರವಾದುದು. ಇದೊಂದು ಸ್ತುತ್ಯಾರ್ಹ ಸಮ್ಮೇಳನವಾಗಿ ಹೊರಹೊಮ್ಮಬೇಕು. ಶರಣರು, ಸೂಫಿ ಸಂತರ ಈ ನಾಡಲ್ಲಿ ಲಕ್ಷೋಪ ಲಕ್ಷೋಪ ಸಂಖ್ಯೆಯಲ್ಲಿ ಜನಸಾಗರ ಸಮ್ಮೇಳನಕ್ಕೆ ಆಗಮಿಸುತ್ತಿರುವುದು ಸಮ್ಮೇಳನಕ್ಕೆ ಮತ್ತಷ್ಟು ಮೆರಗು ನೀಡಿದೆ. ನಾಡು ಹಾಗೂ ನುಡಿಯ ಆರಾಧನೆ ಮತ್ತು ಸಬಲೀಕರಣಕ್ಕೆ ಪೂರಕವಾಗುವ ಈ ರೀತಿಯ ಸಾಹಿತ್ಯ ಸಮ್ಮೇಳನಗಳು ಬೇರಾವ ರಾಜ್ಯಗಳಲ್ಲೂ ನಡೆದಿಲ್ಲ ಎನ್ನುವುದನ್ನು ವಿಶ್ಲೇಷಿಸಿದಾಗ ಕನ್ನಡಿಗರ ಭಾಷೆ ಹಾಗೂ ನಾಡಪ್ರೇಮದ ಬಗ್ಗೆ ಇಮ್ಮಡಿಯಾಗಲಿದೆ ಎಂದರು

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

'ನನ್ನ ಕುರ್ಚಿ'ಗೆ ಪ್ರಧಾನಿ ಮೋದಿ ಗೌರವ ನೀಡಬೇಕು: ಪಶ್ಚಿಮ ಬಂಗಾಳ ಸಿಎಂ ಮಮತಾ ಬ್ಯಾನರ್ಜಿ ಕಿಡಿ!

SCROLL FOR NEXT