ಪರಭಾಷೆ ವ್ಯಾಮೋಹ ಬಿಟ್ಟು ಕನ್ನಡ ಭಾಷೆಯನ್ನು ಆರಾಧಿಸಿ: ಗೋವಿಂದ ಕಾರಜೋಳ 
ರಾಜ್ಯ

ಪರಭಾಷೆ ವ್ಯಾಮೋಹ ಬಿಟ್ಟು ಕನ್ನಡ ಭಾಷೆಯನ್ನು ಆರಾಧಿಸಿ: ಗೋವಿಂದ ಕಾರಜೋಳ

 ಕನ್ನಡ ಭಾಷೆಯ ಆರಾಧನೆ ಸಾಹಿತ್ಯ ಸಮ್ಮೇಳನದ ಧ್ಯೇಯ. ಪರಭಾಷೆ ವ್ಯಾಮೋಹ ಬಿಟ್ಟು ಕನ್ನಡ ಭಾಷೆಯನ್ನು ಮನೆ ಮನಗಳಲ್ಲಿ ಬಳಸಬೇಕು. ಕನ್ನಡಲ್ಲೇ ವ್ಯವಹರಿಸಿ, ಕನ್ನಡ ಭಾಷೆಯನ್ನು ಮತ್ತಷ್ಟು ಬೆಳೆಸಲು ಎಲ್ಲಾ ಕನ್ನಡಿಗರು ಶ್ರಮಿಸಿ, ಆರಾಧಿಸಬೇಕು ಎಂದು ಉಪಮುಖ್ಯಮಂತ್ರಿ ಗೋವಿಂದ ಎಂ ಕಾರಜೋಳ ಕರೆ ನೀಡಿದ್ದಾರೆ. 

ಕಲಬುರಗಿ: ಕನ್ನಡ ಭಾಷೆಯ ಆರಾಧನೆ ಸಾಹಿತ್ಯ ಸಮ್ಮೇಳನದ ಧ್ಯೇಯ. ಪರಭಾಷೆ ವ್ಯಾಮೋಹ ಬಿಟ್ಟು ಕನ್ನಡ ಭಾಷೆಯನ್ನು ಮನೆ ಮನಗಳಲ್ಲಿ ಬಳಸಬೇಕು. ಕನ್ನಡಲ್ಲೇ ವ್ಯವಹರಿಸಿ, ಕನ್ನಡ ಭಾಷೆಯನ್ನು ಮತ್ತಷ್ಟು ಬೆಳೆಸಲು ಎಲ್ಲಾ ಕನ್ನಡಿಗರು ಶ್ರಮಿಸಿ, ಆರಾಧಿಸಬೇಕು ಎಂದು ಉಪಮುಖ್ಯಮಂತ್ರಿ ಗೋವಿಂದ ಎಂ ಕಾರಜೋಳ ಕರೆ ನೀಡಿದ್ದಾರೆ.

ಕಲಬುರಗಿಯಲ್ಲಿ ಇಂದು 85 ನೇ ಅಖಿಲ ಭಾರತ ಸಾಹಿತ್ಯ ಸಮ್ಮೇಳನದಲ್ಲಿ ಸ್ವಾಗತ ಭಾಷಣ ಮಾಡಿದ ಅವರು, 2500 ವರ್ಷಗಳ ಐತಿಹ್ಯ ವಿರುವ ಕನ್ನಡ ಭಾಷೆ ಶ್ರೀಮಂತವಾಗಿದ್ದು, ಗಟ್ಟಿಯಾಗಿದೆ‌. 12ನೇ ಶತಮಾನದಲ್ಲಿ ಶರಣರು ಕನ್ನಡ ಭಾಷೆ ಬೆಳೆಸಲು ಶ್ರಮಿಸಿದ್ದಾರೆ‌. ನಾವು ಇಂದು ಬೆಂಗಳೂರಿನಲ್ಲಿ ಕನ್ನಡ ಮಾತನಾಡುವವರ ಸಂಖ್ಯೆ ಕ್ಷೀಣಿಸುತ್ತಿರುವುದು ವಿಷಾದನೀಯ ಸಂಗತಿ. ಯಾರು ಯಾವುದೇ ಭಾಷೆಯಲ್ಲಿ ಮಾತನಾಡಿದರೂ ಕನ್ನಡಿಗರು ಕನ್ನಡ ಭಾಷೆಯಲ್ಲೇ ಉತ್ತರಿಸಬೇಕು ಎಂದರು.

ನುಡಿಯ ಆರಾಧನೆ ಸಾಹಿತ್ಯ‌ಸಮ್ಮೆಳನದ ಧ್ಯೇಯ. ಕವಿಗಳು, ಸಾಹಿತಿಗಳು, ಸಂಶೋದಕರು, ಅಧ್ಯಾಪಕರು, ವಿದ್ಯಾರ್ಥಿಗಳ ಪಾತ್ರ ಮಹತ್ತರವಾದುದು. ಇದೊಂದು ಸ್ತುತ್ಯಾರ್ಹ ಸಮ್ಮೇಳನವಾಗಿ ಹೊರಹೊಮ್ಮಬೇಕು. ಶರಣರು, ಸೂಫಿ ಸಂತರ ಈ ನಾಡಲ್ಲಿ ಲಕ್ಷೋಪ ಲಕ್ಷೋಪ ಸಂಖ್ಯೆಯಲ್ಲಿ ಜನಸಾಗರ ಸಮ್ಮೇಳನಕ್ಕೆ ಆಗಮಿಸುತ್ತಿರುವುದು ಸಮ್ಮೇಳನಕ್ಕೆ ಮತ್ತಷ್ಟು ಮೆರಗು ನೀಡಿದೆ. ನಾಡು ಹಾಗೂ ನುಡಿಯ ಆರಾಧನೆ ಮತ್ತು ಸಬಲೀಕರಣಕ್ಕೆ ಪೂರಕವಾಗುವ ಈ ರೀತಿಯ ಸಾಹಿತ್ಯ ಸಮ್ಮೇಳನಗಳು ಬೇರಾವ ರಾಜ್ಯಗಳಲ್ಲೂ ನಡೆದಿಲ್ಲ ಎನ್ನುವುದನ್ನು ವಿಶ್ಲೇಷಿಸಿದಾಗ ಕನ್ನಡಿಗರ ಭಾಷೆ ಹಾಗೂ ನಾಡಪ್ರೇಮದ ಬಗ್ಗೆ ಇಮ್ಮಡಿಯಾಗಲಿದೆ ಎಂದರು

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಯುಕ್ರೇನ್-ರಷ್ಯಾ ಶಾಂತಿ ಒಪ್ಪಂದ ಸನಿಹ: ಸುಳಿವು ನೀಡಿದ ಯುಕ್ರೇನ್

2026 T20 ವಿಶ್ವಕಪ್: ಕೊಲಂಬೋದಲ್ಲಿ ಫೆ.15 ರಂದು ಭಾರತ- ಪಾಕ್ ಪಂದ್ಯ

ಕಾರು ಅಪಘಾತದಲ್ಲಿ ಐಎಎಸ್ ಅಧಿಕಾರಿ ಮಹಾಂತೇಶ್ ಬೀಳಗಿ ಸೇರಿ ಮೂವರು ಸಾವು: ಸಿಎಂ, ಡಿಸಿಎಂ ಸಂತಾಪ

CM ಬದಲಾವಣೆ ನಾಲ್ಕರಿಂದ ಐದು ಜನರ ನಡುವೆ ನಡೆದ "ರಹಸ್ಯ ಒಪ್ಪಂದ": ಡಿಕೆಶಿ​ ಸ್ಫೋಟಕ ಹೇಳಿಕೆ

ರಾಸಾಯನಿಕಗಳು, ಎಲೆಕ್ಟ್ರಾನಿಕ್ ಘಟಕಗಳ ಸುಲಭ ಲಭ್ಯತೆಯಿಂದ ಐಇಡಿ ಅಪಾಯ ಹೆಚ್ಚು: NSG

SCROLL FOR NEXT