ವ್ಡದ್ದ ಸಾವಿಗೆ ಕಾರಣವಾದ ಕ್ರೇನ್ 
ರಾಜ್ಯ

ಕ್ರೇನ್ ಹರಿದು ರಸ್ತೆಬದಿ ಕುಳಿತ ಇಬ್ಬರ ದುರ್ಮರಣ: ಚಾಲಕನಿಗೆ ಸಾರ್ವಜನಿಕರಿಂದ ಥಳಿತ!

ರಸ್ತೆಬದಿ ಕುಳಿತ ವೃದ್ಧರಿಬ್ಬರ ಮೇಲೆ ಕ್ರೇನ್ ಹರಿದು ಸ್ಥಳದಲ್ಲೇ ಅವರಿಬ್ಬರೂ ಮೃತಪಟ್ಟಿರುವ ಘಟನೆ ಕೊಳ್ಳೇಗಾಲದ ಹೊಸ ಹಂಪಾಪುರದಲ್ಲಿ ನಡೆದಿದೆ.

ಚಾಮರಾಜನಗರ: ರಸ್ತೆಬದಿ ಕುಳಿತ ವೃದ್ಧರಿಬ್ಬರ ಮೇಲೆ ಕ್ರೇನ್ ಹರಿದು ಸ್ಥಳದಲ್ಲೇ ಅವರಿಬ್ಬರೂ ಮೃತಪಟ್ಟಿರುವ ಘಟನೆ ಕೊಳ್ಳೇಗಾಲದ ಹೊಸ ಹಂಪಾಪುರದಲ್ಲಿ ನಡೆದಿದೆ.

ಹೊಸಹಂಪಾಪುರ ಗ್ರಾಮದ ನಿಂಗರಾಜು(70) ಮತ್ತು ಸಿದ್ಧಯ್ಯ(80) ಮೃತ ದುರ್ದೈವಿಗಳು.

ಕೊಳ್ಳೇಗಾಲದಿಂದ ಮುಳ್ಳೂರಿಗೆ ಕ್ರೇನ್ ತೆರಳುವಾಗ ರಸ್ತೆಬದಿ ವೃದ್ಧರು ಕುಳಿತಿರುವುದು ಕಾಣದೇ ಚಾಲಕ ವೃದ್ಧರ ಮೇಲೆಯೇ ಕ್ರೇನ್​​ ಹರಿಸಿದ್ದಾನೆ. 

ಚೀರಾಟ ಕಂಡು ಪರಾರಿಯಾಗುತ್ತಿದ್ದ ಚಾಲಕ ಆರ್ಮುಗಂ ಎಂಬಾತನನ್ನ ಸಾರ್ವಜನಿಕರೇ ಹಿಡಿದು ಥಳಿಸಿ ಪೊಲೀಸರಿಗೊಪ್ಪಿಸಿದ್ದಾರೆ. ಕೊಳ್ಳೇಗಾಲ ಪಟ್ಟಣ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ವರದಿ: ಗುಳಿಪುರ ನಂದೀಶ ಎಂ

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

Gaza Hospital Strike: ಹಮಾಸ್ ಸೋಲಿಸುವುದಷ್ಟೇ ನಮ್ಮ ಗುರಿ, ನಾಗರೀಕರನ್ನು ಗೌರವಿಸುತ್ತೇವೆ; ಮೊದಲ ಬಾರಿಗೆ ದಾಳಿ ಕುರಿತು ಇಸ್ರೇಲ್ ವಿಷಾದ

ವಿಧಾನಪರಿಷತ್'ಗೆ ನಾಮನಿರ್ದೇಶನ: ನಾಲ್ವರು MLC ಅಭ್ಯರ್ಥಿಗಳು ಹೆಸರು ಬದಲು, ಪಟ್ಟಿಯಲ್ಲಿ TNIE ಮೈಸೂರು ವಿಭಾಗದ ಮುಖ್ಯಸ್ಥನಿಗೆ ಸ್ಥಾನ

JC ರಸ್ತೆಯಲ್ಲಿ White-topping ಕಾಮಗಾರಿ: ಆ.30ರವರೆಗೆ ಭಾರಿ ಗಾತ್ರದ ವಾಹನಗಳ ಸಂಚಾರಕ್ಕೆ ನಿರ್ಬಂಧ

ಧರ್ಮಸ್ಥಳ ಪ್ರಕರಣ NIA ತನಿಖೆ ಮಾಡಿದರೆ ಆಕ್ಷೇಪವಿಲ್ಲ: ಸಚಿವ ಸತೀಶ್ ಜಾರಕಿಹೊಳಿ

ಭಾರತ- ಫಿಜಿ ರಕ್ಷಣಾ ಸಹಕಾರ ಕ್ರಿಯಾ ಯೋಜನೆ ಸಿದ್ಧ: ಇಂಡೋ ಪೆಸಿಫಿಕ್‌ ವಲಯದಲ್ಲಿ ಚೀನಾದ ಪ್ರಾಬಲ್ಯ ತಡೆಗೆ ಮಾಸ್ಟರ್ ಪ್ಲಾನ್!

SCROLL FOR NEXT