ರಾಜ್ಯದಲ್ಲಿ ಕೊರೋನಾ ವೈರಸ್ ಇಲ್ಲ, ಆದರೂ ಮುಂದುವರೆದ ಕಟ್ಟೆಚ್ಚರ 
ರಾಜ್ಯ

ರಾಜ್ಯದಲ್ಲಿ ಕೊರೋನಾ ವೈರಸ್ ಇಲ್ಲ, ಆದರೂ ಮುಂದುವರೆದ ಕಟ್ಟೆಚ್ಚರ

ರಾಜ್ಯದಲ್ಲಿ ಈವರೆಗೆ ಯಾರಿಗೂ ಕೊರೋನಾ ವೈರಸ್ ಸೋಂಕು ಇಲ್ಲದಿರುವುದು ದೃಢಪಟ್ಟಿದ್ದು, ಯಾರೂ ಆತಂಕಪಡುವ ಅಗತ್ಯವಿಲ್ಲ ಎಂದು ಆರೋಗ್ಯ ಇಲಾಖೆಯ ಅಧಿಕಾರಿಗಳು ತಿಳಿಸಿದ್ದಾರೆ. 

ಬೆಂಗಳೂರು: ರಾಜ್ಯದಲ್ಲಿ ಈವರೆಗೆ ಯಾರಿಗೂ ಕೊರೋನಾ ವೈರಸ್ ಸೋಂಕು ಇಲ್ಲದಿರುವುದು ದೃಢಪಟ್ಟಿದ್ದು, ಯಾರೂ ಆತಂಕಪಡುವ ಅಗತ್ಯವಿಲ್ಲ ಎಂದು ಆರೋಗ್ಯ ಇಲಾಖೆಯ ಅಧಿಕಾರಿಗಳು ತಿಳಿಸಿದ್ದಾರೆ. 

ಕೊರೋನಾ ವೈರಸ್ ಸೋಂಕು ಲಕ್ಷಣಗಳು ಕಾಣಿಸಿಕೊಂಡ 52 ಮಂದಿಯ ಸ್ಯಾಂಪಲ್ ಅನ್ನು ಪರೀಕ್ಷೆಗೆ ಕಳುಹಿಸಲಾಗಿದ್ದು, ಆ ವರದಿ ಬಂದಿದ್ದು, ಯಾರಲ್ಲೂ ಸೋಂಕು ದೃಢಪಟ್ಟಿಲ್ಲ. ತುಮಕೂರಿನಲ್ಲಿ ಚೀನಾ ಮೂಲಕ ವಿದ್ಯಾರ್ಥಿಗೆ ರೋಗದ ಲಕ್ಷಣಗಳು ಕಾಣಿಸಿಕೊಂಡಿರುವುದು ಈ ಹಿಂದೆ ವರದಿಯಾಗಿತ್ತು. 

ವ್ಯಕ್ತಿಯನ್ನು ತಪಾಸಣೆಗೊಳಪಡಿಸಲಾಗಿದ್ದು, ಮಾದರಿಗಳನ್ನು ಪರೀಕ್ಷಿಸಲಾಗಿದೆ. ಪರೀಕ್ಷೆ ಬಳಿಕ ಸೋಂಕಿಲ್ಲದಿರುವುದು ದೃಢಪಟ್ಟಿದೆ. ಆದರೂ ಸುರಕ್ಷತಾ ದೃಷ್ಟಿಯಿಂದ 28 ದಿನಗಳ ಕಾಲ ನಿಗಾ ಇಡಲು ಅಧಿಕಾರಿಗಳಿಗೆ ಸೂಚಿಸಲಾಗಿದೆ ಎಂದು ಅಧಿಕಾರಿಗಳು ಹೇಳಿದ್ದಾರೆ. 

ಬುಧವಾರ 6 ಮಂದಿ ಹೊಸ ಪ್ರಯಾಣಿಕರು ನಿಗಾದಲ್ಲಿರಲು ನೋಂದಣಿಯಾಗಿದ್ದಾರೆ. ರಾಜ್ಯದಲ್ಲಿ ಈ ವರೆಗೂ ಸೋಂಕು ದೃಢಪಟ್ಟಿಲ್ಲ. ಅಂತರಾಷ್ಟ್ರೀಯ ವಿಮಾನ ನಿಲ್ದಾಣ, ಬಂದರುಗಳಲ್ಲಿ ಕಟ್ಟೆಚ್ಚರ ಮುಂದುವರೆಸಲಾಗಿದೆ ಎಂದು ತಿಳಿಸಿದ್ದಾರೆ. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಪ್ರದೋಶ್ ಮಾಫಿ ಸಾಕ್ಷಿ ಅರ್ಜಿ ಅಂಗೀಕರಿಸಿದ ಕೋರ್ಟ್; 'ದಾಸ'ನಿಗೆ ಬಿಗ್ ಶಾಕ್!

Congress ಶಾಸಕ ಪ್ರದೀಪ್ ಈಶ್ವರ್ ವಿರುದ್ಧ ಜಾಮೀನು ರಹಿತ ಬಂಧನ ವಾರಂಟ್ ಜಾರಿ, ಬಂಧನ ಭೀತಿ!

ಭಾರತದಲ್ಲಿ ಫುಡ್‌ ಕಂಪನಿಗಳ ಲಾಬಿ: ಚಿಪ್ಸ್ ಮತ್ತು ಕೂಲ್ ಡ್ರಿಂಕ್ಸ್ ಮೇಲೆ ‘ರೆಡ್‌ ಅಲರ್ಟ್’ ಪ್ರಸ್ತಾವ ಕೈಬಿಟ್ಟ FSSAI, ಆಗಿದ್ದೇನು?

'ಬ್ರೋ, ನೀವು ಸುಮ್ಮನೆ ಸಮಯ ವ್ಯರ್ಥ ಮಾಡುತ್ತಿದ್ದೀರಿ': ಎರಡನೇ ಟೆಸ್ಟ್ ಪಂದ್ಯದಲ್ಲಿ ಶ್ರೀಲಂಕಾ ನಾಯಕನ ಕಾಲೆಳೆದ ಸರ್ಫರಾಜ್ ಖಾನ್!

BJP-RSS ನಡುವೆ ಬಿರುಕು: ಸ್ಫೋಟಕ ಕಾರಣ ಬಿಚ್ಚಿಟ್ಟ ಅಭಿಜೀತ್ ದೀಪ್ಕೆ